Homeಕರ್ನಾಟಕತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

- Advertisement -
- Advertisement -

ಸ್ವಾತಂತ್ರ್ಯಪೂರ್ವದಿಂದಲೂ ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಮೈದಾಳ ಕೆರೆ ಪ್ರದೇಶ ಇದೀಗ ಮಲಿನಗೊಳ್ಳುತ್ತಿದೆ. ಕೆಲವೇ ಮಂದಿಯ ಕುಕೃತ್ಯದಿಂದ ಕುಡಿಯುವ ನೀರು ಮತ್ತು ಪರಿಸರಕ್ಕೆ ಧಕ್ಕೆ ಒದಗಿದೆ. ಕೆರೆಯ ಸಮೀಪವೇ ಕೈಗಾರಿಕ ಪ್ರದೇಶಗಳಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ತಂದು ಸುಡುವ ಮೂಲಕ ಸುಂದರ ಪರಿಸರವನ್ನು ಹಾಳುಗೆಡವಲಾಗುತ್ತಿದೆ. ಪ್ಲಾಸ್ಟಿಕ್ ಬೂದಿ ಗಾಳಿಯಲ್ಲಿ ತೇಲಿಹೋಗಿ ಮೈದಾಳ ಕರೆಯ ನೀರು ಸೇರುತ್ತಿದ್ದು ವಿಷಕಾರಿಯಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸ ಪ್ರಸಿದ್ದ ಮಂದರಗಿರಿಯ ಹಿಂಭಾಗದಲ್ಲಿರುವ ಕೆರೆಯ ಆಸುಪಾಸಿನಲ್ಲೇ ಪರಿಸರ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ. ಕೆರೆಯ  ಅಂಗಳಕ್ಕೆ ಹೊಂದಿಕೊಂಡಂತೆ ನಾಲ್ಕೈದು ಕಡೆ ಪ್ಲಾಸ್ಟಿಕ್ ತ್ಯಾಜ್ಯ ಸುಡುತ್ತಿದ್ದು ಹಾರುಬೂದಿ ಕೆರೆ ಸೇರಿ ನೀರು ವಿಷಪೂರಿತಗೊಳ್ಳುತ್ತಿದೆ. ಆದರೂ ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೈದಾಳ ಕೆರೆ

ಮೈದಾಳ ಕೆರೆಯ ಭಾಗ ‘ಅತ್ಯಂತ ಸೂಕ್ಷ ಜೈವಿಕ’ ಪ್ರದೇಶ. ತುಮಕೂರು ನಗರದ 15 ಬಡಾವಣೆಗಳಿಗೆ ಕುಡಿಯುವ ನೀರು ಇಲ್ಲಿಂದಲೇ ಪೂರೈಕೆಯಾಗುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಕೆಲ ಹಳ್ಳಿಗಳಿಗೂ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇಂಥ ಸೂಕ್ಷ್ಮ ಪ್ರದೇಶದಲ್ಲಿ ಬೇರೆಬೇರೆ ಕಡೆಯಿಂದ ಪ್ಲಾಸ್ಟಿಕ್ ತಂದು ರಾಶಿ ಹಾಕಿ ಸುಡುವ ಕೆಲಸ ಎಗ್ಗಿಲ್ಲದೆ ನಡೆಯುತ್ತಿದೆ. ಅದರ ಹಾರುಬೂದಿ ನೀರು ಸೇರುತ್ತಿದೆ.

ಈ ಕುರಿತು ಸ್ಥಳೀಯ ನಿವಾಸಿ ಶಿವಶಂಕರ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ರಾಶಿ ಹಾಕಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಗುಂಡಿ ಯಲ್ಲಿ ಹಾಕಿ ಸುಡಲಾಗುತ್ತಿದೆ. ಹೀಗೇಕೆ ಸುಡುತ್ತಾರೆ ಎಂಬುದು ತಿಳಿಯುತ್ತಿಲ್ಲ. ಇದ್ದಿಲು ಮಾಡಲು ಇರಬಹುದು. ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ತ್ಯಾಜ್ಯವನ್ನು ಇಲ್ಲಿ ಸುಡುವುದರಿಂದ ಸೂಕ್ಷ್ಮ ಜೀವಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ದಟ್ಟಹೊಗೆ ಏಳುವುದರಿಂದ ಸೂಕ್ಷ್ಮ ಜೀವಿಗಳು ಸಾಯುತ್ತವೆ. ಮೈದಾಳ ಕೆರೆಯ ನೀರು ಮಾಲಿನ್ಯವಾಗುತ್ತದೆ. ಜನರು ವಿಷಯುಕ್ತ ನೀರನ್ನು ಸೇವಿಸಬೇಕಾಗುತ್ತದೆ. ಇದರ ಬಗ್ಗೆ ಜಿಲ್ಲಾಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತಿ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ಮಂದರಗಿರಿ ಮತ್ತು ಮೈದಾಳಕೆರೆ ಪ್ರಕೃತಿ ಸೌಂದರ್ಯಕ್ಕೆ ಹೇಳಿ ಮಾಡಿದ ಜಾಗ. ಆದರೆ ಕೆರೆಯ ಪಕ್ಕದಲ್ಲೇ ಇರುವ ಗುಡ್ಡಗಳಿಂದ ದೊಡ್ಡದೊಡ್ಡ ಗುಂಡುಗಳನ್ನು ಎತ್ತುವಳಿ ಮಾಡಲಾಗುತ್ತಿದೆ. ಮನ ಬಂದಂತೆ ಗುಂಡಿಗಳನ್ನು ತೋಡಲಾಗುತ್ತಿದೆ. ಇದರಿಂದ ಜೋರು ಮಳೆ ಬಂದರೆ ಗುಡ್ಡ ಕೊರೆತ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಗುಡ್ಡದ ನೀರು ಕೆರೆಗೆ ಹರಿಯುವುದರಿಂದ ಮಣ್ಣು ಕೆರೆಗೆ ಸೇರಿ ಹೂಳು ತುಂಬುತ್ತದೆ. ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಇಂತಹ ಸಮಸ್ಯೆ ತಲೆದೋರುವ ಮೊದಲು ಜಿಲ್ಲಾಡಳಿತ ಮತ್ತು ಸಣ್ಣನೀರಾವರಿ ಇಲಾಖೆ ಎಚ್ಚೆತ್ತುಕೊಂಡು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಜಲ, ವಾಯುಮಾಲಿನ್ಯ ಉಂಟಾಗುತ್ತಿದ್ದರೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿದ್ರಿಸುತ್ತಿದೆ. ಇಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯಲು ಮೈದಾಳ ಗ್ರಾಮ ಪಂಚಾಯಿತಿಯವರು ಶಾಮೀಲಾಗಿದ್ದಾರೆ. ಪಿಡಿಒ ಬಂದಷ್ಟೇ ಸಾಕು ಎಂಬಂತೆ ನೋಡಿಯೂ ನೋಡದಂತೆ ಇದ್ದಾರೆ. ಕ್ರಮ ಕೈಗೊಳ್ಳಬೇಕಾದವರು ಕೈಕಟ್ಟಿ ಕುಳಿತಿದ್ದಾರೆ ಎಂದು ಆರೋಪಿಸಿರುವ ಸುತ್ತಮುತ್ತಲ ಗ್ರಾಮಸ್ಥರು ಕೂಡಲೇ ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಬೇಕು ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...