Homeಕರ್ನಾಟಕತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

- Advertisement -
- Advertisement -

ಸ್ವಾತಂತ್ರ್ಯಪೂರ್ವದಿಂದಲೂ ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಮೈದಾಳ ಕೆರೆ ಪ್ರದೇಶ ಇದೀಗ ಮಲಿನಗೊಳ್ಳುತ್ತಿದೆ. ಕೆಲವೇ ಮಂದಿಯ ಕುಕೃತ್ಯದಿಂದ ಕುಡಿಯುವ ನೀರು ಮತ್ತು ಪರಿಸರಕ್ಕೆ ಧಕ್ಕೆ ಒದಗಿದೆ. ಕೆರೆಯ ಸಮೀಪವೇ ಕೈಗಾರಿಕ ಪ್ರದೇಶಗಳಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ತಂದು ಸುಡುವ ಮೂಲಕ ಸುಂದರ ಪರಿಸರವನ್ನು ಹಾಳುಗೆಡವಲಾಗುತ್ತಿದೆ. ಪ್ಲಾಸ್ಟಿಕ್ ಬೂದಿ ಗಾಳಿಯಲ್ಲಿ ತೇಲಿಹೋಗಿ ಮೈದಾಳ ಕರೆಯ ನೀರು ಸೇರುತ್ತಿದ್ದು ವಿಷಕಾರಿಯಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸ ಪ್ರಸಿದ್ದ ಮಂದರಗಿರಿಯ ಹಿಂಭಾಗದಲ್ಲಿರುವ ಕೆರೆಯ ಆಸುಪಾಸಿನಲ್ಲೇ ಪರಿಸರ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ. ಕೆರೆಯ  ಅಂಗಳಕ್ಕೆ ಹೊಂದಿಕೊಂಡಂತೆ ನಾಲ್ಕೈದು ಕಡೆ ಪ್ಲಾಸ್ಟಿಕ್ ತ್ಯಾಜ್ಯ ಸುಡುತ್ತಿದ್ದು ಹಾರುಬೂದಿ ಕೆರೆ ಸೇರಿ ನೀರು ವಿಷಪೂರಿತಗೊಳ್ಳುತ್ತಿದೆ. ಆದರೂ ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೈದಾಳ ಕೆರೆ

ಮೈದಾಳ ಕೆರೆಯ ಭಾಗ ‘ಅತ್ಯಂತ ಸೂಕ್ಷ ಜೈವಿಕ’ ಪ್ರದೇಶ. ತುಮಕೂರು ನಗರದ 15 ಬಡಾವಣೆಗಳಿಗೆ ಕುಡಿಯುವ ನೀರು ಇಲ್ಲಿಂದಲೇ ಪೂರೈಕೆಯಾಗುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಕೆಲ ಹಳ್ಳಿಗಳಿಗೂ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇಂಥ ಸೂಕ್ಷ್ಮ ಪ್ರದೇಶದಲ್ಲಿ ಬೇರೆಬೇರೆ ಕಡೆಯಿಂದ ಪ್ಲಾಸ್ಟಿಕ್ ತಂದು ರಾಶಿ ಹಾಕಿ ಸುಡುವ ಕೆಲಸ ಎಗ್ಗಿಲ್ಲದೆ ನಡೆಯುತ್ತಿದೆ. ಅದರ ಹಾರುಬೂದಿ ನೀರು ಸೇರುತ್ತಿದೆ.

ಈ ಕುರಿತು ಸ್ಥಳೀಯ ನಿವಾಸಿ ಶಿವಶಂಕರ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ರಾಶಿ ಹಾಕಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಗುಂಡಿ ಯಲ್ಲಿ ಹಾಕಿ ಸುಡಲಾಗುತ್ತಿದೆ. ಹೀಗೇಕೆ ಸುಡುತ್ತಾರೆ ಎಂಬುದು ತಿಳಿಯುತ್ತಿಲ್ಲ. ಇದ್ದಿಲು ಮಾಡಲು ಇರಬಹುದು. ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ತ್ಯಾಜ್ಯವನ್ನು ಇಲ್ಲಿ ಸುಡುವುದರಿಂದ ಸೂಕ್ಷ್ಮ ಜೀವಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ದಟ್ಟಹೊಗೆ ಏಳುವುದರಿಂದ ಸೂಕ್ಷ್ಮ ಜೀವಿಗಳು ಸಾಯುತ್ತವೆ. ಮೈದಾಳ ಕೆರೆಯ ನೀರು ಮಾಲಿನ್ಯವಾಗುತ್ತದೆ. ಜನರು ವಿಷಯುಕ್ತ ನೀರನ್ನು ಸೇವಿಸಬೇಕಾಗುತ್ತದೆ. ಇದರ ಬಗ್ಗೆ ಜಿಲ್ಲಾಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತಿ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ಮಂದರಗಿರಿ ಮತ್ತು ಮೈದಾಳಕೆರೆ ಪ್ರಕೃತಿ ಸೌಂದರ್ಯಕ್ಕೆ ಹೇಳಿ ಮಾಡಿದ ಜಾಗ. ಆದರೆ ಕೆರೆಯ ಪಕ್ಕದಲ್ಲೇ ಇರುವ ಗುಡ್ಡಗಳಿಂದ ದೊಡ್ಡದೊಡ್ಡ ಗುಂಡುಗಳನ್ನು ಎತ್ತುವಳಿ ಮಾಡಲಾಗುತ್ತಿದೆ. ಮನ ಬಂದಂತೆ ಗುಂಡಿಗಳನ್ನು ತೋಡಲಾಗುತ್ತಿದೆ. ಇದರಿಂದ ಜೋರು ಮಳೆ ಬಂದರೆ ಗುಡ್ಡ ಕೊರೆತ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಗುಡ್ಡದ ನೀರು ಕೆರೆಗೆ ಹರಿಯುವುದರಿಂದ ಮಣ್ಣು ಕೆರೆಗೆ ಸೇರಿ ಹೂಳು ತುಂಬುತ್ತದೆ. ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಇಂತಹ ಸಮಸ್ಯೆ ತಲೆದೋರುವ ಮೊದಲು ಜಿಲ್ಲಾಡಳಿತ ಮತ್ತು ಸಣ್ಣನೀರಾವರಿ ಇಲಾಖೆ ಎಚ್ಚೆತ್ತುಕೊಂಡು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಜಲ, ವಾಯುಮಾಲಿನ್ಯ ಉಂಟಾಗುತ್ತಿದ್ದರೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿದ್ರಿಸುತ್ತಿದೆ. ಇಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯಲು ಮೈದಾಳ ಗ್ರಾಮ ಪಂಚಾಯಿತಿಯವರು ಶಾಮೀಲಾಗಿದ್ದಾರೆ. ಪಿಡಿಒ ಬಂದಷ್ಟೇ ಸಾಕು ಎಂಬಂತೆ ನೋಡಿಯೂ ನೋಡದಂತೆ ಇದ್ದಾರೆ. ಕ್ರಮ ಕೈಗೊಳ್ಳಬೇಕಾದವರು ಕೈಕಟ್ಟಿ ಕುಳಿತಿದ್ದಾರೆ ಎಂದು ಆರೋಪಿಸಿರುವ ಸುತ್ತಮುತ್ತಲ ಗ್ರಾಮಸ್ಥರು ಕೂಡಲೇ ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಬೇಕು ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...