Homeಕರ್ನಾಟಕತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೈದಾಳಕೆರೆಗೆ ವಿಷಕಾರಿ ಪ್ಲಾಸ್ಟಿಕ್ ಬೂದಿ!

- Advertisement -
- Advertisement -

ಸ್ವಾತಂತ್ರ್ಯಪೂರ್ವದಿಂದಲೂ ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ಮೈದಾಳ ಕೆರೆ ಪ್ರದೇಶ ಇದೀಗ ಮಲಿನಗೊಳ್ಳುತ್ತಿದೆ. ಕೆಲವೇ ಮಂದಿಯ ಕುಕೃತ್ಯದಿಂದ ಕುಡಿಯುವ ನೀರು ಮತ್ತು ಪರಿಸರಕ್ಕೆ ಧಕ್ಕೆ ಒದಗಿದೆ. ಕೆರೆಯ ಸಮೀಪವೇ ಕೈಗಾರಿಕ ಪ್ರದೇಶಗಳಿಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ತಂದು ಸುಡುವ ಮೂಲಕ ಸುಂದರ ಪರಿಸರವನ್ನು ಹಾಳುಗೆಡವಲಾಗುತ್ತಿದೆ. ಪ್ಲಾಸ್ಟಿಕ್ ಬೂದಿ ಗಾಳಿಯಲ್ಲಿ ತೇಲಿಹೋಗಿ ಮೈದಾಳ ಕರೆಯ ನೀರು ಸೇರುತ್ತಿದ್ದು ವಿಷಕಾರಿಯಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತಿಹಾಸ ಪ್ರಸಿದ್ದ ಮಂದರಗಿರಿಯ ಹಿಂಭಾಗದಲ್ಲಿರುವ ಕೆರೆಯ ಆಸುಪಾಸಿನಲ್ಲೇ ಪರಿಸರ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ. ಕೆರೆಯ  ಅಂಗಳಕ್ಕೆ ಹೊಂದಿಕೊಂಡಂತೆ ನಾಲ್ಕೈದು ಕಡೆ ಪ್ಲಾಸ್ಟಿಕ್ ತ್ಯಾಜ್ಯ ಸುಡುತ್ತಿದ್ದು ಹಾರುಬೂದಿ ಕೆರೆ ಸೇರಿ ನೀರು ವಿಷಪೂರಿತಗೊಳ್ಳುತ್ತಿದೆ. ಆದರೂ ಜಿಲ್ಲಾಡಳಿತ ಕಣ್ಣುಮುಚ್ಚಿ ಕುಳಿತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೈದಾಳ ಕೆರೆ

ಮೈದಾಳ ಕೆರೆಯ ಭಾಗ ‘ಅತ್ಯಂತ ಸೂಕ್ಷ ಜೈವಿಕ’ ಪ್ರದೇಶ. ತುಮಕೂರು ನಗರದ 15 ಬಡಾವಣೆಗಳಿಗೆ ಕುಡಿಯುವ ನೀರು ಇಲ್ಲಿಂದಲೇ ಪೂರೈಕೆಯಾಗುತ್ತಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಕೆಲ ಹಳ್ಳಿಗಳಿಗೂ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇಂಥ ಸೂಕ್ಷ್ಮ ಪ್ರದೇಶದಲ್ಲಿ ಬೇರೆಬೇರೆ ಕಡೆಯಿಂದ ಪ್ಲಾಸ್ಟಿಕ್ ತಂದು ರಾಶಿ ಹಾಕಿ ಸುಡುವ ಕೆಲಸ ಎಗ್ಗಿಲ್ಲದೆ ನಡೆಯುತ್ತಿದೆ. ಅದರ ಹಾರುಬೂದಿ ನೀರು ಸೇರುತ್ತಿದೆ.

ಈ ಕುರಿತು ಸ್ಥಳೀಯ ನಿವಾಸಿ ಶಿವಶಂಕರ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ರಾಶಿ ಹಾಕಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಗುಂಡಿ ಯಲ್ಲಿ ಹಾಕಿ ಸುಡಲಾಗುತ್ತಿದೆ. ಹೀಗೇಕೆ ಸುಡುತ್ತಾರೆ ಎಂಬುದು ತಿಳಿಯುತ್ತಿಲ್ಲ. ಇದ್ದಿಲು ಮಾಡಲು ಇರಬಹುದು. ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ತ್ಯಾಜ್ಯವನ್ನು ಇಲ್ಲಿ ಸುಡುವುದರಿಂದ ಸೂಕ್ಷ್ಮ ಜೀವಿಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ದಟ್ಟಹೊಗೆ ಏಳುವುದರಿಂದ ಸೂಕ್ಷ್ಮ ಜೀವಿಗಳು ಸಾಯುತ್ತವೆ. ಮೈದಾಳ ಕೆರೆಯ ನೀರು ಮಾಲಿನ್ಯವಾಗುತ್ತದೆ. ಜನರು ವಿಷಯುಕ್ತ ನೀರನ್ನು ಸೇವಿಸಬೇಕಾಗುತ್ತದೆ. ಇದರ ಬಗ್ಗೆ ಜಿಲ್ಲಾಡಳಿತ ಮತ್ತು ಸ್ಥಳೀಯ ಗ್ರಾಮ ಪಂಚಾಯ್ತಿ ಮೌನ ವಹಿಸಿದೆ ಎಂದು ಆರೋಪಿಸಿದ್ದಾರೆ.

ಮಂದರಗಿರಿ ಮತ್ತು ಮೈದಾಳಕೆರೆ ಪ್ರಕೃತಿ ಸೌಂದರ್ಯಕ್ಕೆ ಹೇಳಿ ಮಾಡಿದ ಜಾಗ. ಆದರೆ ಕೆರೆಯ ಪಕ್ಕದಲ್ಲೇ ಇರುವ ಗುಡ್ಡಗಳಿಂದ ದೊಡ್ಡದೊಡ್ಡ ಗುಂಡುಗಳನ್ನು ಎತ್ತುವಳಿ ಮಾಡಲಾಗುತ್ತಿದೆ. ಮನ ಬಂದಂತೆ ಗುಂಡಿಗಳನ್ನು ತೋಡಲಾಗುತ್ತಿದೆ. ಇದರಿಂದ ಜೋರು ಮಳೆ ಬಂದರೆ ಗುಡ್ಡ ಕೊರೆತ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಗುಡ್ಡದ ನೀರು ಕೆರೆಗೆ ಹರಿಯುವುದರಿಂದ ಮಣ್ಣು ಕೆರೆಗೆ ಸೇರಿ ಹೂಳು ತುಂಬುತ್ತದೆ. ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಇಂತಹ ಸಮಸ್ಯೆ ತಲೆದೋರುವ ಮೊದಲು ಜಿಲ್ಲಾಡಳಿತ ಮತ್ತು ಸಣ್ಣನೀರಾವರಿ ಇಲಾಖೆ ಎಚ್ಚೆತ್ತುಕೊಂಡು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಜಲ, ವಾಯುಮಾಲಿನ್ಯ ಉಂಟಾಗುತ್ತಿದ್ದರೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿದ್ರಿಸುತ್ತಿದೆ. ಇಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯಲು ಮೈದಾಳ ಗ್ರಾಮ ಪಂಚಾಯಿತಿಯವರು ಶಾಮೀಲಾಗಿದ್ದಾರೆ. ಪಿಡಿಒ ಬಂದಷ್ಟೇ ಸಾಕು ಎಂಬಂತೆ ನೋಡಿಯೂ ನೋಡದಂತೆ ಇದ್ದಾರೆ. ಕ್ರಮ ಕೈಗೊಳ್ಳಬೇಕಾದವರು ಕೈಕಟ್ಟಿ ಕುಳಿತಿದ್ದಾರೆ ಎಂದು ಆರೋಪಿಸಿರುವ ಸುತ್ತಮುತ್ತಲ ಗ್ರಾಮಸ್ಥರು ಕೂಡಲೇ ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಬೇಕು ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...