Homeಮುಖಪುಟಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

ಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

- Advertisement -
- Advertisement -

ಇಂಫಾಲ್ : ಮ್ಯಾನ್ಮಾರ್‌ನಿಂದ ಅಕ್ರಮ ವಲಸಿಗರನ್ನು ಗುರುತಿಸಲು NRC (National Register of Citizens)  ಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕೆಂದು ಮೈತೇಯಿ ಗುಂಪಿನ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (COCOMI)ಯು ಭಾನುವಾರ ಕೇಂದ್ರಕ್ಕೆ ಒತ್ತಾಯಿಸಿದೆ.

ಅಕ್ರಮ ವಲಸೆ ಮತ್ತು ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳ ಸಾಗಣೆಯನ್ನು ನಿಲ್ಲಿಸಲು ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಬೇಲಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು COCOMI ಸರ್ಕಾರವನ್ನು ಒತ್ತಾಯಿಸಿದೆ.

ಈ ತಿಂಗಳ ಆರಂಭದಲ್ಲಿ ಕಡಂಗ್‌ಬಂದ್‌ನಲ್ಲಿ ಹೊಸ ಬಾಂಬ್ ದಾಳಿಗಳ ಹೊರತಾಗಿಯೂ ಕೇಂದ್ರವು ಯಾವುದೇ ಕ್ರಮಕೈಗೊಂಡಿಲ್ಲ. ಇದು ರಾಜ್ಯದ ಜನರನ್ನು ದೇಶದ ನಾಗರಿಕರೆಂದು ಪರಿಗಣಿಸಲಾಗುತ್ತಿಲ್ಲ ಎಂದು ಸೂಚಿಸುತ್ತದೆ ಎಂದು ಸಂಘಟನೆಯ ಸಂಯೋಜಕ ಸೋಮೆಂಡ್ರೊ ಥೋಕ್‌ಚೋಮ್ ಹೇಳಿದ್ದಾರೆ.

ಜನವರಿ 14ರಂದು ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯ ಕಡಂಗ್‌ಬಂದ್ ಪ್ರದೇಶದಲ್ಲಿ ಶಂಕಿತ ಉಗ್ರಗಾಮಿಗಳು ಬಾಂಬ್ ದಾಳಿ ನಡೆಸಿದ್ದರು. ಕೇಂದ್ರವು ನಿರ್ದಿಷ್ಟ ಕ್ರಮ ತೆಗೆದುಕೊಂಡು ಕುಕಿ ಉಗ್ರಗಾಮಿಗಳ ವಿರುದ್ಧ ಮಿಲಿಟರಿ ಕ್ರಮಕೈಗೊಂಡಾಗ ಮಾತ್ರ ಈ ಸಂಘರ್ಷ ಕೊನೆಗೊಳ್ಳುತ್ತದೆ ಎಂದು ಥೋಕ್‌ಚೋಮ್ ವರದಿಗಾರರಿಗೆ ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಮೂಲದ ಹಲವಾರು ನಾಗರಿಕ ಸಮಾಜ ಸಂಘಟನೆಗಳ ಒಕ್ಕೂಟವು ರಾಜ್ಯದಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಕುಕಿ ಉಗ್ರಗಾಮಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಈ ಸಂಘರ್ಷದಿಂದ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಅಕ್ರಮ ವಲಸಿಗರನ್ನು ಗುರುತಿಸಲು NRC ಅಳವಡಿಸಬೇಕಾಗಿದೆ. ಮ್ಯಾನ್ಮಾರ್ ಜನರಿಗೆ ನಿರಾಶ್ರಿತರ ಬಂಧನ ಶಿಬಿರಗಳು ಮಣಿಪುರಕ್ಕೆ ಮಾತ್ರ ಸೀಮಿತವಾಗಿರಬಾರದು. ರಾಜ್ಯವು ಸೀಮಿತ ಭೂಸಂಪನ್ಮೂಲಗಳನ್ನು ಹೊಂದಿದೆ. ಶಿಬಿರಗಳನ್ನು ಇತರ ರಾಜ್ಯಗಳಲ್ಲಿಯೂ ಸ್ಥಾಪಿಸಬೇಕು ಎಂದು ಥೋಕ್‌ಚೋಮ್ ಹೇಳಿದ್ದಾರೆ.

ಅಕ್ರಮ ವಲಸೆ ಹಾಗೂ ನೆರೆಯ ದೇಶದಿಂದ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳ ಒಳಹರಿವನ್ನು ತಡೆಗಟ್ಟಲು ಕೇಂದ್ರವು ಮ್ಯಾನ್ಮಾರ್ ಗಡಿಯಲ್ಲಿ ಗಡಿಬೇಲಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

ಮಹಾಕುಂಭ ಮೇಳದಲ್ಲಿ ಸಿಲಿಂಡರ್‌ಗಳು ಸ್ಫೋಟ: ಟೆಂಟ್ ಗಳಿಗೆ ಹೊತ್ತಿಕೊಂಡ ಬೆಂಕಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...