Homeಅಂತರಾಷ್ಟ್ರೀಯಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು - ವರದಿ

ಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು – ವರದಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ದಾಖಲೆರಹಿತ ವಿದೇಶಿಯರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಧ್ಯೆ, ಅಮೆರಿಕದ ಗೃಹ ಭದ್ರತಾ ಇಲಾಖೆಯ (DHS) ಅಧಿಕಾರಿಗಳು ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯ ಗುರುದ್ವಾರಗಳಲ್ಲಿ ಅಕ್ರಮ ವಲಸೆಗಾರರ ಬೇಟೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಸರ್ಕಾರದ ಕ್ರಮವು ಹಲವಾರು ಸಿಖ್ ಸಂಘಟನೆಗಳಿಂದ ಟೀಕೆಗೆ ಗುರಿಯಾಗಿದ್ದು, ಇದು ತಮ್ಮ ಧಾರ್ಮಿಕ ಸ್ಥಳಗಳ ಪಾವಿತ್ರ್ಯಕ್ಕೆ ಬೆದರಿಕೆ ಎಂದು ಅವರು ಪರಿಗಣಿಸಿದ್ದಾರೆ. ಅಮೆರಿಕದ ಪ್ರಮುಖ

ಈ ಪ್ರದೇಶಗಳಲ್ಲಿನ ಕೆಲವು ಗುರುದ್ವಾರಗಳನ್ನು ಸಿಖ್ ಪ್ರತ್ಯೇಕತಾವಾದಿಗಳು ಮತ್ತು ದಾಖಲೆರಹಿತ ವಲಸಿಗರು ಒಟ್ಟುಗೂಡಿಸುವ ಸ್ಥಳಗಳಾಗಿ ಬಳಸುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ ನೀತಿಯಲ್ಲಿ ಬದಲಾವಣೆ ಬಂದಿತ್ತು. ವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಜಾರಿ ಕುರಿತು ಬಿಡೆನ್ ಆಡಳಿತದ ಮಾರ್ಗಸೂಚಿಗಳನ್ನು ರದ್ದುಗೊಳಿಸುವ ನಿರ್ದೇಶನವನ್ನು ಗೃಹ ಭದ್ರತಾ ಇಲಾಖೆ ಕಾರ್ಯದರ್ಶಿ ಬೆಂಜಮಿನ್ ಹಫ್‌ಮನ್ ಹೊರಡಿಸಿದ್ದಾರೆ. ಅಮೆರಿಕದ ಪ್ರಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂದಿನ ಮಾರ್ಗಸೂಚಿಗಳು ಗುರುದ್ವಾರಗಳಂತಹ ಪೂಜಾ ಸ್ಥಳಗಳು ಸೇರಿದಂತೆ “ಸೂಕ್ಷ್ಮ” ಪ್ರದೇಶಗಳಲ್ಲಿ ಅಥವಾ ಅದರ ಹತ್ತಿರ ಜಾರಿ ಕ್ರಮಗಳನ್ನು ನಿರ್ಬಂಧಿಸಿದ್ದವು.

“ಈ ಕ್ರಮವುವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಯಲ್ಲಿರುವ ಧೈರ್ಯಶಾಲಿಗಳಿಗೆ ನಮ್ಮ ವಲಸೆ ಕಾನೂನುಗಳನ್ನು ಜಾರಿಗೊಳಿಸಲು ಮತ್ತು ನಮ್ಮ ದೇಶಕ್ಕೆ ಅಕ್ರಮವಾಗಿ ಬಂದಿರುವ ಕೊಲೆ ಮತ್ತು ಅತ್ಯಾಚಾರಿಗಳು ಸೇರಿದಂತೆ ಕ್ರಿಮಿನಲ್ ವಿದೇಶಿಯರನ್ನು ಹಿಡಿಯಲು ಅಧಿಕಾರ ನೀಡುತ್ತದೆ” ಎಂದು ಗೃಹ ಭದ್ರತಾ ಇಲಾಖೆ ವಕ್ತಾರರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

“ಅಪರಾಧಿಗಳು ಇನ್ನು ಮುಂದೆ ಬಂಧನವನ್ನು ತಪ್ಪಿಸಲು ಅಮೆರಿಕದ ಶಾಲೆಗಳು ಮತ್ತು ಚರ್ಚ್‌ಗಳಲ್ಲಿ ಅಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಟ್ರಂಪ್ ಆಡಳಿತವು ನಮ್ಮ ಧೈರ್ಯಶಾಲಿ ಕಾನೂನು ಜಾರಿ ಸಂಸ್ಥೆಗಳ ಕೈಗಳನ್ನು ಕಟ್ಟುವುದಿಲ್ಲ, ಬದಲಿಗೆ ಅವರು ಸಾಮಾನ್ಯ ಜ್ಞಾನವನ್ನು ಬಳಸುತ್ತಾರೆ ಎಂದು ನಂಬುತ್ತದೆ” ಎಂದು ವಕ್ತಾರರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿ (SALDF) ನೀತಿ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದೆ. “ನಿರ್ದೇಶನ ಹೊರಡಿಸಿದ ಕೆಲವೇ ದಿನಗಳಲ್ಲಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ಪ್ರದೇಶಗಳಲ್ಲಿನ ಗುರುದ್ವಾರಗಳಿಗೆ ಗೃಹ ಭದ್ರಾತಾ ಏಜೆಂಟರು ಭೇಟಿ ನೀಡುತ್ತಿದ್ದಾರೆ” ಎಂದು ಗುಂಪು ಹೇಳಿದೆ.

“ಸೂಕ್ಷ್ಮ ಪ್ರದೇಶಗಳಿಗೆ ರಕ್ಷಣೆಯನ್ನು ತೆಗೆದುಹಾಕಿ ನಂತರ ಗುರುದ್ವಾರಗಳಂತ ಪೂಜಾ ಸ್ಥಳಗಳನ್ನು ಗುರಿಯಾಗಿಸುವ ಗೃಹ ಭದ್ರತಾ ಇಲಾಖೆಯ ನಿರ್ಧಾರದ ಬಗ್ಗೆ ನಾವು ತೀವ್ರವಾಗಿ ಗಾಬರಿಗೊಂಡಿದ್ದೇವೆ” ಎಂದು ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿಯ (SALDEF) ಕಾರ್ಯನಿರ್ವಾಹಕ ನಿರ್ದೇಶಕಿ ಕಿರಣ್ ಕೌರ್ ಗಿಲ್ ಹೇಳಿದ್ದಾರೆ.

ಗುರುದ್ವಾರಗಳು ಕೇವಲ ಪೂಜಾ ಸ್ಥಳಗಳು ಮಾತ್ರವಲ್ಲ, ಅವು ಅದಕ್ಕಿಂತ ಹೆಚ್ಚಿನ ಸ್ಥಾನಮಾನ ಇವೆ ಎಂದು ಗಿಲ್ ವಿವರಿಸಿದ್ದಾರೆ. “ಅವು ಸಿಖ್ಖರು ಮತ್ತು ವಿಶಾಲ ಸಮುದಾಯಕ್ಕೆ ಬೆಂಬಲ, ಪೋಷಣೆ ಮತ್ತು ಆಧ್ಯಾತ್ಮಿಕ ಸಾಂತ್ವನವನ್ನು ಒದಗಿಸುವ ಪ್ರಮುಖ ಸಮುದಾಯಿಕ ಕೇಂದ್ರಗಳಾಗಿವೆ. ಜಾರಿ ಕ್ರಮಗಳಿಗಾಗಿ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವುದು ನಮ್ಮ ನಂಬಿಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ ಮತ್ತು ದೇಶಾದ್ಯಂತ ವಲಸೆ ಬಂದ ಸಮುದಾಯಗಳಿಗೆ ಭಯಾನಕ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...