Homeಅಂತರಾಷ್ಟ್ರೀಯಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು - ವರದಿ

ಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು – ವರದಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ದಾಖಲೆರಹಿತ ವಿದೇಶಿಯರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಧ್ಯೆ, ಅಮೆರಿಕದ ಗೃಹ ಭದ್ರತಾ ಇಲಾಖೆಯ (DHS) ಅಧಿಕಾರಿಗಳು ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯ ಗುರುದ್ವಾರಗಳಲ್ಲಿ ಅಕ್ರಮ ವಲಸೆಗಾರರ ಬೇಟೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಸರ್ಕಾರದ ಕ್ರಮವು ಹಲವಾರು ಸಿಖ್ ಸಂಘಟನೆಗಳಿಂದ ಟೀಕೆಗೆ ಗುರಿಯಾಗಿದ್ದು, ಇದು ತಮ್ಮ ಧಾರ್ಮಿಕ ಸ್ಥಳಗಳ ಪಾವಿತ್ರ್ಯಕ್ಕೆ ಬೆದರಿಕೆ ಎಂದು ಅವರು ಪರಿಗಣಿಸಿದ್ದಾರೆ. ಅಮೆರಿಕದ ಪ್ರಮುಖ

ಈ ಪ್ರದೇಶಗಳಲ್ಲಿನ ಕೆಲವು ಗುರುದ್ವಾರಗಳನ್ನು ಸಿಖ್ ಪ್ರತ್ಯೇಕತಾವಾದಿಗಳು ಮತ್ತು ದಾಖಲೆರಹಿತ ವಲಸಿಗರು ಒಟ್ಟುಗೂಡಿಸುವ ಸ್ಥಳಗಳಾಗಿ ಬಳಸುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ ನೀತಿಯಲ್ಲಿ ಬದಲಾವಣೆ ಬಂದಿತ್ತು. ವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಜಾರಿ ಕುರಿತು ಬಿಡೆನ್ ಆಡಳಿತದ ಮಾರ್ಗಸೂಚಿಗಳನ್ನು ರದ್ದುಗೊಳಿಸುವ ನಿರ್ದೇಶನವನ್ನು ಗೃಹ ಭದ್ರತಾ ಇಲಾಖೆ ಕಾರ್ಯದರ್ಶಿ ಬೆಂಜಮಿನ್ ಹಫ್‌ಮನ್ ಹೊರಡಿಸಿದ್ದಾರೆ. ಅಮೆರಿಕದ ಪ್ರಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂದಿನ ಮಾರ್ಗಸೂಚಿಗಳು ಗುರುದ್ವಾರಗಳಂತಹ ಪೂಜಾ ಸ್ಥಳಗಳು ಸೇರಿದಂತೆ “ಸೂಕ್ಷ್ಮ” ಪ್ರದೇಶಗಳಲ್ಲಿ ಅಥವಾ ಅದರ ಹತ್ತಿರ ಜಾರಿ ಕ್ರಮಗಳನ್ನು ನಿರ್ಬಂಧಿಸಿದ್ದವು.

“ಈ ಕ್ರಮವುವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಯಲ್ಲಿರುವ ಧೈರ್ಯಶಾಲಿಗಳಿಗೆ ನಮ್ಮ ವಲಸೆ ಕಾನೂನುಗಳನ್ನು ಜಾರಿಗೊಳಿಸಲು ಮತ್ತು ನಮ್ಮ ದೇಶಕ್ಕೆ ಅಕ್ರಮವಾಗಿ ಬಂದಿರುವ ಕೊಲೆ ಮತ್ತು ಅತ್ಯಾಚಾರಿಗಳು ಸೇರಿದಂತೆ ಕ್ರಿಮಿನಲ್ ವಿದೇಶಿಯರನ್ನು ಹಿಡಿಯಲು ಅಧಿಕಾರ ನೀಡುತ್ತದೆ” ಎಂದು ಗೃಹ ಭದ್ರತಾ ಇಲಾಖೆ ವಕ್ತಾರರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

“ಅಪರಾಧಿಗಳು ಇನ್ನು ಮುಂದೆ ಬಂಧನವನ್ನು ತಪ್ಪಿಸಲು ಅಮೆರಿಕದ ಶಾಲೆಗಳು ಮತ್ತು ಚರ್ಚ್‌ಗಳಲ್ಲಿ ಅಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಟ್ರಂಪ್ ಆಡಳಿತವು ನಮ್ಮ ಧೈರ್ಯಶಾಲಿ ಕಾನೂನು ಜಾರಿ ಸಂಸ್ಥೆಗಳ ಕೈಗಳನ್ನು ಕಟ್ಟುವುದಿಲ್ಲ, ಬದಲಿಗೆ ಅವರು ಸಾಮಾನ್ಯ ಜ್ಞಾನವನ್ನು ಬಳಸುತ್ತಾರೆ ಎಂದು ನಂಬುತ್ತದೆ” ಎಂದು ವಕ್ತಾರರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿ (SALDF) ನೀತಿ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದೆ. “ನಿರ್ದೇಶನ ಹೊರಡಿಸಿದ ಕೆಲವೇ ದಿನಗಳಲ್ಲಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ಪ್ರದೇಶಗಳಲ್ಲಿನ ಗುರುದ್ವಾರಗಳಿಗೆ ಗೃಹ ಭದ್ರಾತಾ ಏಜೆಂಟರು ಭೇಟಿ ನೀಡುತ್ತಿದ್ದಾರೆ” ಎಂದು ಗುಂಪು ಹೇಳಿದೆ.

“ಸೂಕ್ಷ್ಮ ಪ್ರದೇಶಗಳಿಗೆ ರಕ್ಷಣೆಯನ್ನು ತೆಗೆದುಹಾಕಿ ನಂತರ ಗುರುದ್ವಾರಗಳಂತ ಪೂಜಾ ಸ್ಥಳಗಳನ್ನು ಗುರಿಯಾಗಿಸುವ ಗೃಹ ಭದ್ರತಾ ಇಲಾಖೆಯ ನಿರ್ಧಾರದ ಬಗ್ಗೆ ನಾವು ತೀವ್ರವಾಗಿ ಗಾಬರಿಗೊಂಡಿದ್ದೇವೆ” ಎಂದು ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿಯ (SALDEF) ಕಾರ್ಯನಿರ್ವಾಹಕ ನಿರ್ದೇಶಕಿ ಕಿರಣ್ ಕೌರ್ ಗಿಲ್ ಹೇಳಿದ್ದಾರೆ.

ಗುರುದ್ವಾರಗಳು ಕೇವಲ ಪೂಜಾ ಸ್ಥಳಗಳು ಮಾತ್ರವಲ್ಲ, ಅವು ಅದಕ್ಕಿಂತ ಹೆಚ್ಚಿನ ಸ್ಥಾನಮಾನ ಇವೆ ಎಂದು ಗಿಲ್ ವಿವರಿಸಿದ್ದಾರೆ. “ಅವು ಸಿಖ್ಖರು ಮತ್ತು ವಿಶಾಲ ಸಮುದಾಯಕ್ಕೆ ಬೆಂಬಲ, ಪೋಷಣೆ ಮತ್ತು ಆಧ್ಯಾತ್ಮಿಕ ಸಾಂತ್ವನವನ್ನು ಒದಗಿಸುವ ಪ್ರಮುಖ ಸಮುದಾಯಿಕ ಕೇಂದ್ರಗಳಾಗಿವೆ. ಜಾರಿ ಕ್ರಮಗಳಿಗಾಗಿ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವುದು ನಮ್ಮ ನಂಬಿಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ ಮತ್ತು ದೇಶಾದ್ಯಂತ ವಲಸೆ ಬಂದ ಸಮುದಾಯಗಳಿಗೆ ಭಯಾನಕ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...