Homeಅಂತರಾಷ್ಟ್ರೀಯಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು - ವರದಿ

ಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು – ವರದಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ದಾಖಲೆರಹಿತ ವಿದೇಶಿಯರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಧ್ಯೆ, ಅಮೆರಿಕದ ಗೃಹ ಭದ್ರತಾ ಇಲಾಖೆಯ (DHS) ಅಧಿಕಾರಿಗಳು ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯ ಗುರುದ್ವಾರಗಳಲ್ಲಿ ಅಕ್ರಮ ವಲಸೆಗಾರರ ಬೇಟೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಸರ್ಕಾರದ ಕ್ರಮವು ಹಲವಾರು ಸಿಖ್ ಸಂಘಟನೆಗಳಿಂದ ಟೀಕೆಗೆ ಗುರಿಯಾಗಿದ್ದು, ಇದು ತಮ್ಮ ಧಾರ್ಮಿಕ ಸ್ಥಳಗಳ ಪಾವಿತ್ರ್ಯಕ್ಕೆ ಬೆದರಿಕೆ ಎಂದು ಅವರು ಪರಿಗಣಿಸಿದ್ದಾರೆ. ಅಮೆರಿಕದ ಪ್ರಮುಖ

ಈ ಪ್ರದೇಶಗಳಲ್ಲಿನ ಕೆಲವು ಗುರುದ್ವಾರಗಳನ್ನು ಸಿಖ್ ಪ್ರತ್ಯೇಕತಾವಾದಿಗಳು ಮತ್ತು ದಾಖಲೆರಹಿತ ವಲಸಿಗರು ಒಟ್ಟುಗೂಡಿಸುವ ಸ್ಥಳಗಳಾಗಿ ಬಳಸುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ ನೀತಿಯಲ್ಲಿ ಬದಲಾವಣೆ ಬಂದಿತ್ತು. ವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಜಾರಿ ಕುರಿತು ಬಿಡೆನ್ ಆಡಳಿತದ ಮಾರ್ಗಸೂಚಿಗಳನ್ನು ರದ್ದುಗೊಳಿಸುವ ನಿರ್ದೇಶನವನ್ನು ಗೃಹ ಭದ್ರತಾ ಇಲಾಖೆ ಕಾರ್ಯದರ್ಶಿ ಬೆಂಜಮಿನ್ ಹಫ್‌ಮನ್ ಹೊರಡಿಸಿದ್ದಾರೆ. ಅಮೆರಿಕದ ಪ್ರಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂದಿನ ಮಾರ್ಗಸೂಚಿಗಳು ಗುರುದ್ವಾರಗಳಂತಹ ಪೂಜಾ ಸ್ಥಳಗಳು ಸೇರಿದಂತೆ “ಸೂಕ್ಷ್ಮ” ಪ್ರದೇಶಗಳಲ್ಲಿ ಅಥವಾ ಅದರ ಹತ್ತಿರ ಜಾರಿ ಕ್ರಮಗಳನ್ನು ನಿರ್ಬಂಧಿಸಿದ್ದವು.

“ಈ ಕ್ರಮವುವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಯಲ್ಲಿರುವ ಧೈರ್ಯಶಾಲಿಗಳಿಗೆ ನಮ್ಮ ವಲಸೆ ಕಾನೂನುಗಳನ್ನು ಜಾರಿಗೊಳಿಸಲು ಮತ್ತು ನಮ್ಮ ದೇಶಕ್ಕೆ ಅಕ್ರಮವಾಗಿ ಬಂದಿರುವ ಕೊಲೆ ಮತ್ತು ಅತ್ಯಾಚಾರಿಗಳು ಸೇರಿದಂತೆ ಕ್ರಿಮಿನಲ್ ವಿದೇಶಿಯರನ್ನು ಹಿಡಿಯಲು ಅಧಿಕಾರ ನೀಡುತ್ತದೆ” ಎಂದು ಗೃಹ ಭದ್ರತಾ ಇಲಾಖೆ ವಕ್ತಾರರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

“ಅಪರಾಧಿಗಳು ಇನ್ನು ಮುಂದೆ ಬಂಧನವನ್ನು ತಪ್ಪಿಸಲು ಅಮೆರಿಕದ ಶಾಲೆಗಳು ಮತ್ತು ಚರ್ಚ್‌ಗಳಲ್ಲಿ ಅಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಟ್ರಂಪ್ ಆಡಳಿತವು ನಮ್ಮ ಧೈರ್ಯಶಾಲಿ ಕಾನೂನು ಜಾರಿ ಸಂಸ್ಥೆಗಳ ಕೈಗಳನ್ನು ಕಟ್ಟುವುದಿಲ್ಲ, ಬದಲಿಗೆ ಅವರು ಸಾಮಾನ್ಯ ಜ್ಞಾನವನ್ನು ಬಳಸುತ್ತಾರೆ ಎಂದು ನಂಬುತ್ತದೆ” ಎಂದು ವಕ್ತಾರರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿ (SALDF) ನೀತಿ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದೆ. “ನಿರ್ದೇಶನ ಹೊರಡಿಸಿದ ಕೆಲವೇ ದಿನಗಳಲ್ಲಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ಪ್ರದೇಶಗಳಲ್ಲಿನ ಗುರುದ್ವಾರಗಳಿಗೆ ಗೃಹ ಭದ್ರಾತಾ ಏಜೆಂಟರು ಭೇಟಿ ನೀಡುತ್ತಿದ್ದಾರೆ” ಎಂದು ಗುಂಪು ಹೇಳಿದೆ.

“ಸೂಕ್ಷ್ಮ ಪ್ರದೇಶಗಳಿಗೆ ರಕ್ಷಣೆಯನ್ನು ತೆಗೆದುಹಾಕಿ ನಂತರ ಗುರುದ್ವಾರಗಳಂತ ಪೂಜಾ ಸ್ಥಳಗಳನ್ನು ಗುರಿಯಾಗಿಸುವ ಗೃಹ ಭದ್ರತಾ ಇಲಾಖೆಯ ನಿರ್ಧಾರದ ಬಗ್ಗೆ ನಾವು ತೀವ್ರವಾಗಿ ಗಾಬರಿಗೊಂಡಿದ್ದೇವೆ” ಎಂದು ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿಯ (SALDEF) ಕಾರ್ಯನಿರ್ವಾಹಕ ನಿರ್ದೇಶಕಿ ಕಿರಣ್ ಕೌರ್ ಗಿಲ್ ಹೇಳಿದ್ದಾರೆ.

ಗುರುದ್ವಾರಗಳು ಕೇವಲ ಪೂಜಾ ಸ್ಥಳಗಳು ಮಾತ್ರವಲ್ಲ, ಅವು ಅದಕ್ಕಿಂತ ಹೆಚ್ಚಿನ ಸ್ಥಾನಮಾನ ಇವೆ ಎಂದು ಗಿಲ್ ವಿವರಿಸಿದ್ದಾರೆ. “ಅವು ಸಿಖ್ಖರು ಮತ್ತು ವಿಶಾಲ ಸಮುದಾಯಕ್ಕೆ ಬೆಂಬಲ, ಪೋಷಣೆ ಮತ್ತು ಆಧ್ಯಾತ್ಮಿಕ ಸಾಂತ್ವನವನ್ನು ಒದಗಿಸುವ ಪ್ರಮುಖ ಸಮುದಾಯಿಕ ಕೇಂದ್ರಗಳಾಗಿವೆ. ಜಾರಿ ಕ್ರಮಗಳಿಗಾಗಿ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವುದು ನಮ್ಮ ನಂಬಿಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ ಮತ್ತು ದೇಶಾದ್ಯಂತ ವಲಸೆ ಬಂದ ಸಮುದಾಯಗಳಿಗೆ ಭಯಾನಕ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...