Homeಅಂತರಾಷ್ಟ್ರೀಯಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು - ವರದಿ

ಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು – ವರದಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ದಾಖಲೆರಹಿತ ವಿದೇಶಿಯರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಧ್ಯೆ, ಅಮೆರಿಕದ ಗೃಹ ಭದ್ರತಾ ಇಲಾಖೆಯ (DHS) ಅಧಿಕಾರಿಗಳು ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯ ಗುರುದ್ವಾರಗಳಲ್ಲಿ ಅಕ್ರಮ ವಲಸೆಗಾರರ ಬೇಟೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಸರ್ಕಾರದ ಕ್ರಮವು ಹಲವಾರು ಸಿಖ್ ಸಂಘಟನೆಗಳಿಂದ ಟೀಕೆಗೆ ಗುರಿಯಾಗಿದ್ದು, ಇದು ತಮ್ಮ ಧಾರ್ಮಿಕ ಸ್ಥಳಗಳ ಪಾವಿತ್ರ್ಯಕ್ಕೆ ಬೆದರಿಕೆ ಎಂದು ಅವರು ಪರಿಗಣಿಸಿದ್ದಾರೆ. ಅಮೆರಿಕದ ಪ್ರಮುಖ

ಈ ಪ್ರದೇಶಗಳಲ್ಲಿನ ಕೆಲವು ಗುರುದ್ವಾರಗಳನ್ನು ಸಿಖ್ ಪ್ರತ್ಯೇಕತಾವಾದಿಗಳು ಮತ್ತು ದಾಖಲೆರಹಿತ ವಲಸಿಗರು ಒಟ್ಟುಗೂಡಿಸುವ ಸ್ಥಳಗಳಾಗಿ ಬಳಸುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ ನೀತಿಯಲ್ಲಿ ಬದಲಾವಣೆ ಬಂದಿತ್ತು. ವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಜಾರಿ ಕುರಿತು ಬಿಡೆನ್ ಆಡಳಿತದ ಮಾರ್ಗಸೂಚಿಗಳನ್ನು ರದ್ದುಗೊಳಿಸುವ ನಿರ್ದೇಶನವನ್ನು ಗೃಹ ಭದ್ರತಾ ಇಲಾಖೆ ಕಾರ್ಯದರ್ಶಿ ಬೆಂಜಮಿನ್ ಹಫ್‌ಮನ್ ಹೊರಡಿಸಿದ್ದಾರೆ. ಅಮೆರಿಕದ ಪ್ರಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂದಿನ ಮಾರ್ಗಸೂಚಿಗಳು ಗುರುದ್ವಾರಗಳಂತಹ ಪೂಜಾ ಸ್ಥಳಗಳು ಸೇರಿದಂತೆ “ಸೂಕ್ಷ್ಮ” ಪ್ರದೇಶಗಳಲ್ಲಿ ಅಥವಾ ಅದರ ಹತ್ತಿರ ಜಾರಿ ಕ್ರಮಗಳನ್ನು ನಿರ್ಬಂಧಿಸಿದ್ದವು.

“ಈ ಕ್ರಮವುವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಯಲ್ಲಿರುವ ಧೈರ್ಯಶಾಲಿಗಳಿಗೆ ನಮ್ಮ ವಲಸೆ ಕಾನೂನುಗಳನ್ನು ಜಾರಿಗೊಳಿಸಲು ಮತ್ತು ನಮ್ಮ ದೇಶಕ್ಕೆ ಅಕ್ರಮವಾಗಿ ಬಂದಿರುವ ಕೊಲೆ ಮತ್ತು ಅತ್ಯಾಚಾರಿಗಳು ಸೇರಿದಂತೆ ಕ್ರಿಮಿನಲ್ ವಿದೇಶಿಯರನ್ನು ಹಿಡಿಯಲು ಅಧಿಕಾರ ನೀಡುತ್ತದೆ” ಎಂದು ಗೃಹ ಭದ್ರತಾ ಇಲಾಖೆ ವಕ್ತಾರರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

“ಅಪರಾಧಿಗಳು ಇನ್ನು ಮುಂದೆ ಬಂಧನವನ್ನು ತಪ್ಪಿಸಲು ಅಮೆರಿಕದ ಶಾಲೆಗಳು ಮತ್ತು ಚರ್ಚ್‌ಗಳಲ್ಲಿ ಅಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಟ್ರಂಪ್ ಆಡಳಿತವು ನಮ್ಮ ಧೈರ್ಯಶಾಲಿ ಕಾನೂನು ಜಾರಿ ಸಂಸ್ಥೆಗಳ ಕೈಗಳನ್ನು ಕಟ್ಟುವುದಿಲ್ಲ, ಬದಲಿಗೆ ಅವರು ಸಾಮಾನ್ಯ ಜ್ಞಾನವನ್ನು ಬಳಸುತ್ತಾರೆ ಎಂದು ನಂಬುತ್ತದೆ” ಎಂದು ವಕ್ತಾರರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿ (SALDF) ನೀತಿ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದೆ. “ನಿರ್ದೇಶನ ಹೊರಡಿಸಿದ ಕೆಲವೇ ದಿನಗಳಲ್ಲಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ಪ್ರದೇಶಗಳಲ್ಲಿನ ಗುರುದ್ವಾರಗಳಿಗೆ ಗೃಹ ಭದ್ರಾತಾ ಏಜೆಂಟರು ಭೇಟಿ ನೀಡುತ್ತಿದ್ದಾರೆ” ಎಂದು ಗುಂಪು ಹೇಳಿದೆ.

“ಸೂಕ್ಷ್ಮ ಪ್ರದೇಶಗಳಿಗೆ ರಕ್ಷಣೆಯನ್ನು ತೆಗೆದುಹಾಕಿ ನಂತರ ಗುರುದ್ವಾರಗಳಂತ ಪೂಜಾ ಸ್ಥಳಗಳನ್ನು ಗುರಿಯಾಗಿಸುವ ಗೃಹ ಭದ್ರತಾ ಇಲಾಖೆಯ ನಿರ್ಧಾರದ ಬಗ್ಗೆ ನಾವು ತೀವ್ರವಾಗಿ ಗಾಬರಿಗೊಂಡಿದ್ದೇವೆ” ಎಂದು ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿಯ (SALDEF) ಕಾರ್ಯನಿರ್ವಾಹಕ ನಿರ್ದೇಶಕಿ ಕಿರಣ್ ಕೌರ್ ಗಿಲ್ ಹೇಳಿದ್ದಾರೆ.

ಗುರುದ್ವಾರಗಳು ಕೇವಲ ಪೂಜಾ ಸ್ಥಳಗಳು ಮಾತ್ರವಲ್ಲ, ಅವು ಅದಕ್ಕಿಂತ ಹೆಚ್ಚಿನ ಸ್ಥಾನಮಾನ ಇವೆ ಎಂದು ಗಿಲ್ ವಿವರಿಸಿದ್ದಾರೆ. “ಅವು ಸಿಖ್ಖರು ಮತ್ತು ವಿಶಾಲ ಸಮುದಾಯಕ್ಕೆ ಬೆಂಬಲ, ಪೋಷಣೆ ಮತ್ತು ಆಧ್ಯಾತ್ಮಿಕ ಸಾಂತ್ವನವನ್ನು ಒದಗಿಸುವ ಪ್ರಮುಖ ಸಮುದಾಯಿಕ ಕೇಂದ್ರಗಳಾಗಿವೆ. ಜಾರಿ ಕ್ರಮಗಳಿಗಾಗಿ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವುದು ನಮ್ಮ ನಂಬಿಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ ಮತ್ತು ದೇಶಾದ್ಯಂತ ವಲಸೆ ಬಂದ ಸಮುದಾಯಗಳಿಗೆ ಭಯಾನಕ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...