Homeಮುಖಪುಟಮೋದಿ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ವಿವರ ಸೋರಿಕೆ: ಸ್ಕ್ರೀನ್‌ಶಾಟ್‌ ಹಂಚಿಕೊಂಡ ಟಿಎಂಸಿ ಮುಖಂಡ

ಮೋದಿ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ವಿವರ ಸೋರಿಕೆ: ಸ್ಕ್ರೀನ್‌ಶಾಟ್‌ ಹಂಚಿಕೊಂಡ ಟಿಎಂಸಿ ಮುಖಂಡ

ಕೋವಿಡ್ ಲಸಿಕೆ ಪಡೆದ ಪ್ರತಿಯೊಬ್ಬ ಭಾರತೀಯರ ಮೊಬೈಲ್ ಸಂಖ್ಯೆಗಳು, ಆಧಾರ್ ಸಂಖ್ಯೆ, ಪಾಸ್‌ಪೋರ್ಟ್ ಸಂಖ್ಯೆ, ವೋಟರ್ ಐಡಿ, ಕುಟುಂಬ ಸದಸ್ಯರ ವಿವರಗಳು ಸೋರಿಕೆಯಾಗಿವೆ.

- Advertisement -
- Advertisement -

ಮೋದಿ ಸರ್ಕಾರದಿಂದ ಪ್ರಮುಖ ದತ್ತಾಂಶ ಉಲ್ಲಂಘನೆಯಾಗಿದೆ. ಕೋವಿಡ್ ಲಸಿಕೆ ಪಡೆದ ಪ್ರತಿಯೊಬ್ಬ ಭಾರತೀಯರ ಮೊಬೈಲ್ ಸಂಖ್ಯೆಗಳು, ಆಧಾರ್ ಸಂಖ್ಯೆಗಳು, ಪಾಸ್‌ಪೋರ್ಟ್ ಸಂಖ್ಯೆಗಳು, ವೋಟರ್ ಐಡಿ, ಕುಟುಂಬ ಸದಸ್ಯರ ವಿವರಗಳು ಇತ್ಯಾದಿ ಸೇರಿದಂತೆ ಇತರ ವೈಯಕ್ತಿಕ ವಿವರಗಳು ಸೋರಿಕೆಯಾಗಿವೆ ಮತ್ತು ಉಚಿತವಾಗಿ ಲಭ್ಯವಿವೆ ಎಂದು ಟಿಎಂಸಿ ಮುಖಂಡ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ರಾಜ್ಯಸಭಾ ಸಂಸದ ಮತ್ತು ಟಿಎಂಸಿ ನಾಯಕ ಡೆರೆಕ್ ಒ’ಬ್ರೇನ್, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ & ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಪತ್ರಕರ್ತರ ವೈಯಕ್ತಿಕ ಮಾಹಿತಿಗಳು ಟೆಲಿಗ್ರಾಂನಲ್ಲಿ ಸೋರಿಕೆಯಾಗಿರುವುದರ ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿದ್ದಾರೆ.

ಮೋದಿ ಸರ್ಕಾರವು “ಬಲವಾದ ಡೇಟಾ ಭದ್ರತೆ” ಅನ್ನು ಅನುಸರಿಸುತ್ತದೆ ಎಂದು ಹೇಳಿಕೊಳ್ಳುವಾಗ ಪಾಸ್‌ಪೋರ್ಟ್ ಸಂಖ್ಯೆ, ಆಧಾರ್ ಸಂಖ್ಯೆ, ಇತ್ಯಾದಿ ಸೇರಿದಂತೆ ವೈಯಕ್ತಿಕ ವಿವರಗಳು ಹೇಗೆ ಸೋರಿಕೆಯಾದವು? ಈ ಸೋರಿಕೆಯ ಬಗ್ಗೆ ಮೋದಿ ಸರ್ಕಾರ ಸೇರಿದಂತೆ ಗೃಹ ಸಚಿವಾಲಯಕ್ಕೆ ಏಕೆ ತಿಳಿದಿಲ್ಲ ಮತ್ತು ಡೇಟಾ ಉಲ್ಲಂಘನೆಯ ಬಗ್ಗೆ ಭಾರತೀಯರಿಗೆ ಏಕೆ ಮಾಹಿತಿ ನೀಡಿಲ್ಲ ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರವು ಆಧಾರ್ ಮತ್ತು ಪಾಸ್‌ಪೋರ್ಟ್ ಸಂಖ್ಯೆಗಳನ್ನು ಒಳಗೊಂಡಂತೆ ಭಾರತೀಯರ ಸೂಕ್ಷ್ಮ ವೈಯಕ್ತಿಕ ಡೇಟಾಗೆ ಹೊರಗಿನವರಿಗೆ ಪ್ರವೇಶವನ್ನು ನೀಡಿದೆ. ಹಾಗಾಗಿ ಈ ಸೋರಿಕೆ ಕಂಡುಬಂದಿದೆ. ಇದು ಗಂಭೀರ ರಾಷ್ಟ್ರೀಯ ಕಾಳಜಿಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

ರೈಲ್ವೆಯ ಜೊತೆಗೆ ಎಲೆಕ್ಟ್ರಾನಿಕ್ಸ್, ಕಮ್ಯುನಿಕೇಷನ್ಸ್ ಮತ್ತು ಐಟಿ ಖಾತೆಯ ಸಚಿವರಾಗಿರುವ ಅಶ್ವಿನಿ ವೈಷ್ಣವ್ ಏನು ಮಾಡುತ್ತಿದ್ದಾರೆ? ಅವರ ಸಮರ್ಥತೆಯನ್ನು ಪ್ರಧಾನಿ ಮೋದಿ ಎಷ್ಟು ದಿನ ಕಡೆಗಣಿಸುತ್ತಾರೆ ಎಂದು ಗೋಖಲೆ ಪ್ರಶ್ನಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಿರಿಯ ಪತ್ರಕರ್ತರಾದ ರಾಜರಾಂ ತಲ್ಲೂರುರವರು, “ಕೋವಿಡ್ ಲಸಿಕೆಯ ನೀತಿ-ನಿಯಮಗಳ ಪ್ರಕಾರ ಲಸಿಕೆ ಪಡೆದವರ ಮಾಹಿತಿಯನ್ನು ಆರು ತಿಂಗಳ ಒಳಗೆ ಡಿಲೀಟ್ ಮಾಡಬೇಕು. ಡಿಲೀಟ್ ಮಾಡಿರುವುದಾಗಿಯೂ ಕೇಂದ್ರ ಸರ್ಕಾರ ಹೇಳಿದೆ. ಒಂದು ವೇಳೆ ಮಾಡಿಲ್ಲದಿದ್ದರೆ ಅದು ದೊಡ್ಡ ಅಪರಾಧವಾಗುತ್ತದೆ” ಎಂದರು.

ಮುಂದುವರಿದು “ಸಾಕೇತ್ ಗೋಖಲೆಯವರಿಗೆ ಈ ಮಾಹಿತಿಗಳು ಹೇಗೆ ಸಿಕ್ಕವು? ಅವುಗಳ ಮೂಲವೇನು ಎಂಬುದನ್ನು ಬಹಿರಂಗಪಡಿಸಿಲ್ಲ. ಈ ಡೇಟಾವನ್ನು ಯರ್ಯಾರು ಬಳಸಿರಬಹುದು ಎಂಬುದರ ಅಂದಾಜು ಕೂಡ ಇಲ್ಲ. ಆದರೆ ಈ ಕುರಿತು ಸಮಗ್ರ ತನಿಖೆ ನಡೆಯುವ ಅಗತ್ಯವಿದೆ” ಎಂದರು.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 2023ರ ಫೆಬ್ರವರಿ 08 ರಂದು ‘ಆರೋಗ್ಯ ಸೇತು ಡೇಟಾ ಕುರಿತ ಶಿಷ್ಟಾಚಾರ’ ಹೆಸರಿನಲ್ಲಿ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ “ಈ ಶಿಷ್ಟಾಚಾರದ ನಿಬಂಧನೆಗಳಿಗೆ ಅನುಸಾರವಾಗಿ, ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್‌ನ ಸಂಪರ್ಕ ಪತ್ತೆ ಹಚ್ಚುವಿಕೆಯ ವೈಶಿಷ್ಟ್ಯವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಅದರ ಮೂಲಕ ಸಂಗ್ರಹಿಸಲಾದ ಸಂಪರ್ಕ ಪತ್ತೆಹಚ್ಚುವಿಕೆಯ ಡೇಟಾವನ್ನು ಅಳಿಸಲಾಗಿದೆ. ಮತ್ತು ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಮೂಲಕ ಸಂಗ್ರಹಿಸಲಾದ ಸಂಪರ್ಕ ಪತ್ತೆಹಚ್ಚುವಿಕೆಯ ಡೇಟಾವನ್ನು ಅಳಿಸಲಾಗಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಅವರು ಈ ಮಾಹಿತಿಯನ್ನು ನೀಡಿದ್ದಾರೆ” ಎಂದು ಘೋಷಿಸಿದೆ. ಆದರೂ ಈ ಡೇಟಾಗಳು ಹರಿದಾಡುತ್ತಿರುವುದು ಹೇಗೆ ಎಂಬುದು ಪ್ರಶ್ನೆಯಾಗಿದೆ.

ಇದನ್ನೂ ಓದಿ: ಡೇಟಾ ಸಂರಕ್ಷಣೆ: ಹೇಳಿದ್ದೇನು? ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...