Homeಮುಖಪುಟಮೋದಿ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ವಿವರ ಸೋರಿಕೆ: ಸ್ಕ್ರೀನ್‌ಶಾಟ್‌ ಹಂಚಿಕೊಂಡ ಟಿಎಂಸಿ ಮುಖಂಡ

ಮೋದಿ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದವರ ವೈಯಕ್ತಿಕ ವಿವರ ಸೋರಿಕೆ: ಸ್ಕ್ರೀನ್‌ಶಾಟ್‌ ಹಂಚಿಕೊಂಡ ಟಿಎಂಸಿ ಮುಖಂಡ

ಕೋವಿಡ್ ಲಸಿಕೆ ಪಡೆದ ಪ್ರತಿಯೊಬ್ಬ ಭಾರತೀಯರ ಮೊಬೈಲ್ ಸಂಖ್ಯೆಗಳು, ಆಧಾರ್ ಸಂಖ್ಯೆ, ಪಾಸ್‌ಪೋರ್ಟ್ ಸಂಖ್ಯೆ, ವೋಟರ್ ಐಡಿ, ಕುಟುಂಬ ಸದಸ್ಯರ ವಿವರಗಳು ಸೋರಿಕೆಯಾಗಿವೆ.

- Advertisement -
- Advertisement -

ಮೋದಿ ಸರ್ಕಾರದಿಂದ ಪ್ರಮುಖ ದತ್ತಾಂಶ ಉಲ್ಲಂಘನೆಯಾಗಿದೆ. ಕೋವಿಡ್ ಲಸಿಕೆ ಪಡೆದ ಪ್ರತಿಯೊಬ್ಬ ಭಾರತೀಯರ ಮೊಬೈಲ್ ಸಂಖ್ಯೆಗಳು, ಆಧಾರ್ ಸಂಖ್ಯೆಗಳು, ಪಾಸ್‌ಪೋರ್ಟ್ ಸಂಖ್ಯೆಗಳು, ವೋಟರ್ ಐಡಿ, ಕುಟುಂಬ ಸದಸ್ಯರ ವಿವರಗಳು ಇತ್ಯಾದಿ ಸೇರಿದಂತೆ ಇತರ ವೈಯಕ್ತಿಕ ವಿವರಗಳು ಸೋರಿಕೆಯಾಗಿವೆ ಮತ್ತು ಉಚಿತವಾಗಿ ಲಭ್ಯವಿವೆ ಎಂದು ಟಿಎಂಸಿ ಮುಖಂಡ ಸಾಕೇತ್ ಗೋಖಲೆ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ರಾಜ್ಯಸಭಾ ಸಂಸದ ಮತ್ತು ಟಿಎಂಸಿ ನಾಯಕ ಡೆರೆಕ್ ಒ’ಬ್ರೇನ್, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ & ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಪತ್ರಕರ್ತರ ವೈಯಕ್ತಿಕ ಮಾಹಿತಿಗಳು ಟೆಲಿಗ್ರಾಂನಲ್ಲಿ ಸೋರಿಕೆಯಾಗಿರುವುದರ ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿದ್ದಾರೆ.

ಮೋದಿ ಸರ್ಕಾರವು “ಬಲವಾದ ಡೇಟಾ ಭದ್ರತೆ” ಅನ್ನು ಅನುಸರಿಸುತ್ತದೆ ಎಂದು ಹೇಳಿಕೊಳ್ಳುವಾಗ ಪಾಸ್‌ಪೋರ್ಟ್ ಸಂಖ್ಯೆ, ಆಧಾರ್ ಸಂಖ್ಯೆ, ಇತ್ಯಾದಿ ಸೇರಿದಂತೆ ವೈಯಕ್ತಿಕ ವಿವರಗಳು ಹೇಗೆ ಸೋರಿಕೆಯಾದವು? ಈ ಸೋರಿಕೆಯ ಬಗ್ಗೆ ಮೋದಿ ಸರ್ಕಾರ ಸೇರಿದಂತೆ ಗೃಹ ಸಚಿವಾಲಯಕ್ಕೆ ಏಕೆ ತಿಳಿದಿಲ್ಲ ಮತ್ತು ಡೇಟಾ ಉಲ್ಲಂಘನೆಯ ಬಗ್ಗೆ ಭಾರತೀಯರಿಗೆ ಏಕೆ ಮಾಹಿತಿ ನೀಡಿಲ್ಲ ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರವು ಆಧಾರ್ ಮತ್ತು ಪಾಸ್‌ಪೋರ್ಟ್ ಸಂಖ್ಯೆಗಳನ್ನು ಒಳಗೊಂಡಂತೆ ಭಾರತೀಯರ ಸೂಕ್ಷ್ಮ ವೈಯಕ್ತಿಕ ಡೇಟಾಗೆ ಹೊರಗಿನವರಿಗೆ ಪ್ರವೇಶವನ್ನು ನೀಡಿದೆ. ಹಾಗಾಗಿ ಈ ಸೋರಿಕೆ ಕಂಡುಬಂದಿದೆ. ಇದು ಗಂಭೀರ ರಾಷ್ಟ್ರೀಯ ಕಾಳಜಿಯ ವಿಷಯವಾಗಿದೆ ಎಂದು ಅವರು ಹೇಳಿದ್ದಾರೆ.

ರೈಲ್ವೆಯ ಜೊತೆಗೆ ಎಲೆಕ್ಟ್ರಾನಿಕ್ಸ್, ಕಮ್ಯುನಿಕೇಷನ್ಸ್ ಮತ್ತು ಐಟಿ ಖಾತೆಯ ಸಚಿವರಾಗಿರುವ ಅಶ್ವಿನಿ ವೈಷ್ಣವ್ ಏನು ಮಾಡುತ್ತಿದ್ದಾರೆ? ಅವರ ಸಮರ್ಥತೆಯನ್ನು ಪ್ರಧಾನಿ ಮೋದಿ ಎಷ್ಟು ದಿನ ಕಡೆಗಣಿಸುತ್ತಾರೆ ಎಂದು ಗೋಖಲೆ ಪ್ರಶ್ನಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹಿರಿಯ ಪತ್ರಕರ್ತರಾದ ರಾಜರಾಂ ತಲ್ಲೂರುರವರು, “ಕೋವಿಡ್ ಲಸಿಕೆಯ ನೀತಿ-ನಿಯಮಗಳ ಪ್ರಕಾರ ಲಸಿಕೆ ಪಡೆದವರ ಮಾಹಿತಿಯನ್ನು ಆರು ತಿಂಗಳ ಒಳಗೆ ಡಿಲೀಟ್ ಮಾಡಬೇಕು. ಡಿಲೀಟ್ ಮಾಡಿರುವುದಾಗಿಯೂ ಕೇಂದ್ರ ಸರ್ಕಾರ ಹೇಳಿದೆ. ಒಂದು ವೇಳೆ ಮಾಡಿಲ್ಲದಿದ್ದರೆ ಅದು ದೊಡ್ಡ ಅಪರಾಧವಾಗುತ್ತದೆ” ಎಂದರು.

ಮುಂದುವರಿದು “ಸಾಕೇತ್ ಗೋಖಲೆಯವರಿಗೆ ಈ ಮಾಹಿತಿಗಳು ಹೇಗೆ ಸಿಕ್ಕವು? ಅವುಗಳ ಮೂಲವೇನು ಎಂಬುದನ್ನು ಬಹಿರಂಗಪಡಿಸಿಲ್ಲ. ಈ ಡೇಟಾವನ್ನು ಯರ್ಯಾರು ಬಳಸಿರಬಹುದು ಎಂಬುದರ ಅಂದಾಜು ಕೂಡ ಇಲ್ಲ. ಆದರೆ ಈ ಕುರಿತು ಸಮಗ್ರ ತನಿಖೆ ನಡೆಯುವ ಅಗತ್ಯವಿದೆ” ಎಂದರು.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 2023ರ ಫೆಬ್ರವರಿ 08 ರಂದು ‘ಆರೋಗ್ಯ ಸೇತು ಡೇಟಾ ಕುರಿತ ಶಿಷ್ಟಾಚಾರ’ ಹೆಸರಿನಲ್ಲಿ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ “ಈ ಶಿಷ್ಟಾಚಾರದ ನಿಬಂಧನೆಗಳಿಗೆ ಅನುಸಾರವಾಗಿ, ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್‌ನ ಸಂಪರ್ಕ ಪತ್ತೆ ಹಚ್ಚುವಿಕೆಯ ವೈಶಿಷ್ಟ್ಯವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಅದರ ಮೂಲಕ ಸಂಗ್ರಹಿಸಲಾದ ಸಂಪರ್ಕ ಪತ್ತೆಹಚ್ಚುವಿಕೆಯ ಡೇಟಾವನ್ನು ಅಳಿಸಲಾಗಿದೆ. ಮತ್ತು ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಮೂಲಕ ಸಂಗ್ರಹಿಸಲಾದ ಸಂಪರ್ಕ ಪತ್ತೆಹಚ್ಚುವಿಕೆಯ ಡೇಟಾವನ್ನು ಅಳಿಸಲಾಗಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಅವರು ಈ ಮಾಹಿತಿಯನ್ನು ನೀಡಿದ್ದಾರೆ” ಎಂದು ಘೋಷಿಸಿದೆ. ಆದರೂ ಈ ಡೇಟಾಗಳು ಹರಿದಾಡುತ್ತಿರುವುದು ಹೇಗೆ ಎಂಬುದು ಪ್ರಶ್ನೆಯಾಗಿದೆ.

ಇದನ್ನೂ ಓದಿ: ಡೇಟಾ ಸಂರಕ್ಷಣೆ: ಹೇಳಿದ್ದೇನು? ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...