Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....