Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...