Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...