Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...