Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...