Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...