Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...