Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...