ಇಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನೂತನ ಸರ್ಕಾರದ ಪದಗ್ರಹಣ ಕಾರ್ಯಕ್ರಮ ನಡೆಯುತ್ತಿದೆ. ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಜೊತೆಗೆ ಸಚಿವರಾಗಿ 8 ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಇಂದಿನ ಕಾರ್ಯಕ್ರಮಕ್ಕೆ ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರು ಆಗಮಿಸಿದ್ದಾರೆ. ಅವರ ಪಟ್ಟಿ ಈ ಕೆಳಗಿನಂತಿದೆ.
ಎಂ.ಕೆ ಸ್ಟಾಲಿನ್, ತಮಿಳುನಾಡು ಸಿಎಂ
ನಿತೀಶ್ ಕುಮಾರ್, ಬಿಹಾರ ಸಿಎಂ
ತೇಜಸ್ವಿ ಯಾದವ್, ಬಿಹಾರ ಡಿಸಿಎಂ
ಶರದ್ ಪವಾರ್, ಎನ್ಸಿಪಿ ಮುಖ್ಯಸ್ಥರು
ಮೆಹಬೂಬ ಮುಫ್ತಿ, ಜಮ್ಮು ಕಾಶ್ಮೀರದ ಮಾಜಿ ಸಿಎಂ
ಫಾರೂಕ್ ಅಬ್ದುಲ್ಲ, ಜಮ್ಮು ಕಾಶ್ಮೀರದ ಮಾಜಿ ಸಿಎಂ
ಸೀತರಾಂ ಯೆಚೂರಿ, ಸಿಪಿಎಂ ಪಾಲಿಟ್ ಬ್ಯುರೋ ಸದಸ್ಯರು
ಡಿ.ರಾಜ, ಸಿಪಿಐ ಮುಖ್ಯಸ್ಥರು
ದೀಪಂಕರ್, ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿಗಳು
ಕಮಲ್ ಹಾಸನ್, ಮಕ್ಕಳ್ ನೀದಿ ಮಯ್ಯುಂ ಪಕ್ಷದ ಮುಖ್ಯಸ್ಥರು
ಇತರ ರಾಜ್ಯದ ಕಾಂಗ್ರೆಸ್ ಮುಖ್ಯಮಂತ್ರಿಗಳು
ವಿವಿಧ ರಾಜ್ಯದ ಕಾಂಗ್ರೆಸ್ ಮುಖ್ಯಮಂತ್ರಿಗಳು ಸಹ ಆಗಮಿಸಿದ್ದಾರೆ. ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ಚತ್ತೀಸ್ಘಡದ ಸಿಎಂ ಭೂಪೇಶ್ ಭಾಘೇಲ್, ಹಿಮಾಚಲ ಪ್ರದೇಶದ ಸಿಎಂ ಸುಖ್ವೀಂದರ್ ಸಿಂಗ್ ಸಖು ಸಹ ಕಾರ್ಯಕ್ರಮದ ಭಾಗವಾಗಿದ್ದಾರೆ.
ಕಾರ್ಯಕ್ರಮದ ಲೈವ್ ನೋಡಿ
ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಜೊತೆಗೆ 8 ಶಾಸಕರ ಪ್ರಮಾಣ ವಚನ ಇಂದು