HomeUncategorizedಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಇಕ್ಕಟ್ಟಿನಲ್ಲಿ

- Advertisement -
- Advertisement -

|ನಾನು ಗೌರಿ ಡೆಸ್ಕ್|

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಹೌದು, ಈ ಚುನಾವಣೆಯ ಮಟ್ಟಿಗೆ ಇದು ಬಹಳ ಮಹತ್ವದ ಸುದ್ದಿ. ಬಹುಶಃ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಇಂತಹದೊಂದು ಬೆಳವಣಿಗೆ ಈ ಹಿಂದೆ ನಡೆದಿರಲಿಕ್ಕಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು.

ಆ ಸುದ್ದಿ ಏನಿರಬಹುದು? ಇದರಿಂದ ಮುಂದಿನ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮವೇನು? ಈ ಸುದ್ದಿ ಮೊದಲು ಸಿಕ್ಕಿದ್ದು ಯಾರಿಗೆ? ಒಂದೊಂದಾಗಿ ನೋಡೋಣ.

ಆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದು ಬೇರಾರೂ ಅಲ್ಲ. ಪ್ರಸಾರ ಭಾರತಿಯ ಅಧ್ಯಕ್ಷರಾಗಿದ್ದ ಜವಹರ್ ಸರ್ಕಾರ್ ಅವರು. ಸುಮಾರು 42 ವರ್ಷಗಳ ಕಾಲ ಐಎಎಸ್ ಅಧಿಕಾರಿಯಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರ್ ಇದನ್ನು ಮೊದಲ ಬಾರಿಗೆ ಎಲ್ಲಿ ಬ್ರೇಕ್ ಮಾಡಿದರು ಗೊತ್ತೇ?

ಟ್ವಿಟ್ಟರ್ ನಲ್ಲಿ.

ಹೌದು ಸುದ್ದಿ ಇದೇ.

‘ಭಾರತದ ಚುನಾವಣಾ ಆಯೋಗವು ಅಧಿಕೃತವಾಗಿ ಬಿಜೆಪಿಯನ್ನು ಸೇರಿದೆ ಎಂಬುದನ್ನು ನಿರಾಕರಿಸಿ ಹೇಳಿಕೆ ನೀಡಿದೆ. ಬದಲಿಗೆ ಕೇವಲ ಬಾಹ್ಯ ಬೆಂಬಲ ಮಾತ್ರ ನೀಡುವುದಾಗಿ ಹೇಳಿದೆ’

ತಮಾಷೆಯಾಗಿ ಕಾಣುತ್ತದಲ್ಲವೇ?

ಹೌದು ತಮಾಷೆಯೇ. ಆದರೆ, ವಾಸ್ತವದಂತೆ ಕಾಣುತ್ತಿರುವ ತಮಾಷೆ ಅಥವಾ ತಮಾಷೆಯಂತೆ ಕಾಣುತ್ತಿರುವ ವಾಸ್ತವ.

ಚುನಾವಣಾ ಆಯೋಗವು ಹಿಂದೆಂದೂ ಈ ಮಟ್ಟದ ಏಕಪಕ್ಷೀಯ ನಡವಳಿಕೆಯ ಆರೋಪಕ್ಕೆ ಗುರಿಯಾಗಿರಲಿಲ್ಲವೆಂಬುದನ್ನು ಇಲ್ಲಿ ಗಮನಿಸಬೇಕು. ಹಾಗಾಗಿ ಅದನ್ನು ಲೇವಡಿ ಮಾಡುವ ಉದ್ದೇಶದಿಂದ ಈ ಹಿರಿಯ ಅಧಿಕಾರಿ ಮಾಡಿರುವ ಟ್ವೀಟ್ ವೈರಲ್ ಆಗಿದೆ. ಇದನ್ನು ಬರೆಯುವ ಹೊತ್ತಿಗೆ ಮೇಲಿನ ಪೋಸ್ಟ್ 5300 ರೀಟ್ವೀಟ್ ಆಗಿದ್ದು 19,500 ಜನ ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ಪಕ್ಷಪಾತ

ಬಿಜೆಪಿ ತನ್ನ ಬಗ್ಗೆ ನಾಚಿಕೆಪಟ್ಟುಕೊಳ್ಳಬೇಕಾದ ಸಂಗತಿ ಇದಾಗಿದೆ.

ಆದರೆ ಇದೇ ಸಂದರ್ಭದಲ್ಲಿ ಇನ್ನೊಂದು ಸಂಗತಿಯನ್ನೂ ಗಮನದಲ್ಲಿರಿಸಿಕೊಳ್ಳಬೇಕಿದೆ. ಟಿ.ಎನ್.ಶೇಷನ್ ಅವರ ನಂತರ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಎಂ.ಎಸ್.ಗಿಲ್ ಅವರನ್ನು ಕಾಂಗ್ರೆಸ್ ಪಕ್ಷವು ರಾಜ್ಯಸಭಾ ಸದಸ್ಯರನ್ನಾಗಿಸಿದ್ದಲ್ಲದೇ ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಮಂತ್ರಿಯೂ ಆಗಿಸಿತ್ತು.

ಎಂ.ಎಸ್.ಗಿಲ್

ಹಾಗೆ ನೋಡಿದರೆ ಅದೂ ಸಹಾ ಅಂತಹ ಒಳ್ಳೆಯ ಸಂಪ್ರದಾಯವೇನೂ ಆಗಿರಲಿಲ್ಲ.

ಒಟ್ಟಿನಲ್ಲಿ ಭಾರತದ ಚುನಾವಣಾ ಆಯೋಗವು ತಮಾಷೆಯ ವಸ್ತುವಾಗಿರುವುದಕ್ಕಿಂತ ದುರಂತ ಇನ್ನೇನಿದೆ?

ಇದನ್ನೂ ಓದಿ: ಚುನಾವಣಾ ಆಯೋಗದ ಕುರಿತು ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಏನು ಹೇಳುತ್ತಾರೆ?

ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಇಂಥವನ್ನು ಮಾಡುತ್ತವಾದರೂ, ಈಗ ಅಧಿಕಾರದಲ್ಲಿರುವ ಪಕ್ಷವು ಅತ್ಯಂತ ಹೆಚ್ಚು ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಮಾಡಿದ  ಆರೋಪ ಹೊತ್ತಿದೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಕಾರ್ಟೂನುಗಳು, ಕಮೆಂಟುಗಳು ಚುನಾವಣಾ ಆಯೋಗದ ಕುರಿತೂ ಬರುತ್ತಿದೆ. ಚುನಾವಣಾ ಆಯೋಗವೇ ಬಿಜೆಪಿಯ ಕಚೇರಿ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಸರ್ಕಾರ್ ಅವರು ಮಾಡಿರುವ ಲೇವಡಿ ಅತ್ಯಂತ ಹೆಚ್ಚು ಅಪಹಾಸ್ಯ ಮಾಡಿದ ವ್ಯಂಗ್ಯವಾಗಿದೆ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುತ್ತಾರೆಂದು ಆಶಿಸೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...