HomeUncategorizedಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಇಕ್ಕಟ್ಟಿನಲ್ಲಿ

- Advertisement -
- Advertisement -

|ನಾನು ಗೌರಿ ಡೆಸ್ಕ್|

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಹೌದು, ಈ ಚುನಾವಣೆಯ ಮಟ್ಟಿಗೆ ಇದು ಬಹಳ ಮಹತ್ವದ ಸುದ್ದಿ. ಬಹುಶಃ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಇಂತಹದೊಂದು ಬೆಳವಣಿಗೆ ಈ ಹಿಂದೆ ನಡೆದಿರಲಿಕ್ಕಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು.

ಆ ಸುದ್ದಿ ಏನಿರಬಹುದು? ಇದರಿಂದ ಮುಂದಿನ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮವೇನು? ಈ ಸುದ್ದಿ ಮೊದಲು ಸಿಕ್ಕಿದ್ದು ಯಾರಿಗೆ? ಒಂದೊಂದಾಗಿ ನೋಡೋಣ.

ಆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದು ಬೇರಾರೂ ಅಲ್ಲ. ಪ್ರಸಾರ ಭಾರತಿಯ ಅಧ್ಯಕ್ಷರಾಗಿದ್ದ ಜವಹರ್ ಸರ್ಕಾರ್ ಅವರು. ಸುಮಾರು 42 ವರ್ಷಗಳ ಕಾಲ ಐಎಎಸ್ ಅಧಿಕಾರಿಯಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರ್ ಇದನ್ನು ಮೊದಲ ಬಾರಿಗೆ ಎಲ್ಲಿ ಬ್ರೇಕ್ ಮಾಡಿದರು ಗೊತ್ತೇ?

ಟ್ವಿಟ್ಟರ್ ನಲ್ಲಿ.

ಹೌದು ಸುದ್ದಿ ಇದೇ.

‘ಭಾರತದ ಚುನಾವಣಾ ಆಯೋಗವು ಅಧಿಕೃತವಾಗಿ ಬಿಜೆಪಿಯನ್ನು ಸೇರಿದೆ ಎಂಬುದನ್ನು ನಿರಾಕರಿಸಿ ಹೇಳಿಕೆ ನೀಡಿದೆ. ಬದಲಿಗೆ ಕೇವಲ ಬಾಹ್ಯ ಬೆಂಬಲ ಮಾತ್ರ ನೀಡುವುದಾಗಿ ಹೇಳಿದೆ’

ತಮಾಷೆಯಾಗಿ ಕಾಣುತ್ತದಲ್ಲವೇ?

ಹೌದು ತಮಾಷೆಯೇ. ಆದರೆ, ವಾಸ್ತವದಂತೆ ಕಾಣುತ್ತಿರುವ ತಮಾಷೆ ಅಥವಾ ತಮಾಷೆಯಂತೆ ಕಾಣುತ್ತಿರುವ ವಾಸ್ತವ.

ಚುನಾವಣಾ ಆಯೋಗವು ಹಿಂದೆಂದೂ ಈ ಮಟ್ಟದ ಏಕಪಕ್ಷೀಯ ನಡವಳಿಕೆಯ ಆರೋಪಕ್ಕೆ ಗುರಿಯಾಗಿರಲಿಲ್ಲವೆಂಬುದನ್ನು ಇಲ್ಲಿ ಗಮನಿಸಬೇಕು. ಹಾಗಾಗಿ ಅದನ್ನು ಲೇವಡಿ ಮಾಡುವ ಉದ್ದೇಶದಿಂದ ಈ ಹಿರಿಯ ಅಧಿಕಾರಿ ಮಾಡಿರುವ ಟ್ವೀಟ್ ವೈರಲ್ ಆಗಿದೆ. ಇದನ್ನು ಬರೆಯುವ ಹೊತ್ತಿಗೆ ಮೇಲಿನ ಪೋಸ್ಟ್ 5300 ರೀಟ್ವೀಟ್ ಆಗಿದ್ದು 19,500 ಜನ ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ಪಕ್ಷಪಾತ

ಬಿಜೆಪಿ ತನ್ನ ಬಗ್ಗೆ ನಾಚಿಕೆಪಟ್ಟುಕೊಳ್ಳಬೇಕಾದ ಸಂಗತಿ ಇದಾಗಿದೆ.

ಆದರೆ ಇದೇ ಸಂದರ್ಭದಲ್ಲಿ ಇನ್ನೊಂದು ಸಂಗತಿಯನ್ನೂ ಗಮನದಲ್ಲಿರಿಸಿಕೊಳ್ಳಬೇಕಿದೆ. ಟಿ.ಎನ್.ಶೇಷನ್ ಅವರ ನಂತರ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಎಂ.ಎಸ್.ಗಿಲ್ ಅವರನ್ನು ಕಾಂಗ್ರೆಸ್ ಪಕ್ಷವು ರಾಜ್ಯಸಭಾ ಸದಸ್ಯರನ್ನಾಗಿಸಿದ್ದಲ್ಲದೇ ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಮಂತ್ರಿಯೂ ಆಗಿಸಿತ್ತು.

ಎಂ.ಎಸ್.ಗಿಲ್

ಹಾಗೆ ನೋಡಿದರೆ ಅದೂ ಸಹಾ ಅಂತಹ ಒಳ್ಳೆಯ ಸಂಪ್ರದಾಯವೇನೂ ಆಗಿರಲಿಲ್ಲ.

ಒಟ್ಟಿನಲ್ಲಿ ಭಾರತದ ಚುನಾವಣಾ ಆಯೋಗವು ತಮಾಷೆಯ ವಸ್ತುವಾಗಿರುವುದಕ್ಕಿಂತ ದುರಂತ ಇನ್ನೇನಿದೆ?

ಇದನ್ನೂ ಓದಿ: ಚುನಾವಣಾ ಆಯೋಗದ ಕುರಿತು ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಏನು ಹೇಳುತ್ತಾರೆ?

ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಇಂಥವನ್ನು ಮಾಡುತ್ತವಾದರೂ, ಈಗ ಅಧಿಕಾರದಲ್ಲಿರುವ ಪಕ್ಷವು ಅತ್ಯಂತ ಹೆಚ್ಚು ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಮಾಡಿದ  ಆರೋಪ ಹೊತ್ತಿದೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಕಾರ್ಟೂನುಗಳು, ಕಮೆಂಟುಗಳು ಚುನಾವಣಾ ಆಯೋಗದ ಕುರಿತೂ ಬರುತ್ತಿದೆ. ಚುನಾವಣಾ ಆಯೋಗವೇ ಬಿಜೆಪಿಯ ಕಚೇರಿ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಸರ್ಕಾರ್ ಅವರು ಮಾಡಿರುವ ಲೇವಡಿ ಅತ್ಯಂತ ಹೆಚ್ಚು ಅಪಹಾಸ್ಯ ಮಾಡಿದ ವ್ಯಂಗ್ಯವಾಗಿದೆ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುತ್ತಾರೆಂದು ಆಶಿಸೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...