HomeUncategorizedಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಇಕ್ಕಟ್ಟಿನಲ್ಲಿ

- Advertisement -
- Advertisement -

|ನಾನು ಗೌರಿ ಡೆಸ್ಕ್|

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಹೌದು, ಈ ಚುನಾವಣೆಯ ಮಟ್ಟಿಗೆ ಇದು ಬಹಳ ಮಹತ್ವದ ಸುದ್ದಿ. ಬಹುಶಃ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಇಂತಹದೊಂದು ಬೆಳವಣಿಗೆ ಈ ಹಿಂದೆ ನಡೆದಿರಲಿಕ್ಕಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು.

ಆ ಸುದ್ದಿ ಏನಿರಬಹುದು? ಇದರಿಂದ ಮುಂದಿನ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮವೇನು? ಈ ಸುದ್ದಿ ಮೊದಲು ಸಿಕ್ಕಿದ್ದು ಯಾರಿಗೆ? ಒಂದೊಂದಾಗಿ ನೋಡೋಣ.

ಆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದು ಬೇರಾರೂ ಅಲ್ಲ. ಪ್ರಸಾರ ಭಾರತಿಯ ಅಧ್ಯಕ್ಷರಾಗಿದ್ದ ಜವಹರ್ ಸರ್ಕಾರ್ ಅವರು. ಸುಮಾರು 42 ವರ್ಷಗಳ ಕಾಲ ಐಎಎಸ್ ಅಧಿಕಾರಿಯಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರ್ ಇದನ್ನು ಮೊದಲ ಬಾರಿಗೆ ಎಲ್ಲಿ ಬ್ರೇಕ್ ಮಾಡಿದರು ಗೊತ್ತೇ?

ಟ್ವಿಟ್ಟರ್ ನಲ್ಲಿ.

ಹೌದು ಸುದ್ದಿ ಇದೇ.

‘ಭಾರತದ ಚುನಾವಣಾ ಆಯೋಗವು ಅಧಿಕೃತವಾಗಿ ಬಿಜೆಪಿಯನ್ನು ಸೇರಿದೆ ಎಂಬುದನ್ನು ನಿರಾಕರಿಸಿ ಹೇಳಿಕೆ ನೀಡಿದೆ. ಬದಲಿಗೆ ಕೇವಲ ಬಾಹ್ಯ ಬೆಂಬಲ ಮಾತ್ರ ನೀಡುವುದಾಗಿ ಹೇಳಿದೆ’

ತಮಾಷೆಯಾಗಿ ಕಾಣುತ್ತದಲ್ಲವೇ?

ಹೌದು ತಮಾಷೆಯೇ. ಆದರೆ, ವಾಸ್ತವದಂತೆ ಕಾಣುತ್ತಿರುವ ತಮಾಷೆ ಅಥವಾ ತಮಾಷೆಯಂತೆ ಕಾಣುತ್ತಿರುವ ವಾಸ್ತವ.

ಚುನಾವಣಾ ಆಯೋಗವು ಹಿಂದೆಂದೂ ಈ ಮಟ್ಟದ ಏಕಪಕ್ಷೀಯ ನಡವಳಿಕೆಯ ಆರೋಪಕ್ಕೆ ಗುರಿಯಾಗಿರಲಿಲ್ಲವೆಂಬುದನ್ನು ಇಲ್ಲಿ ಗಮನಿಸಬೇಕು. ಹಾಗಾಗಿ ಅದನ್ನು ಲೇವಡಿ ಮಾಡುವ ಉದ್ದೇಶದಿಂದ ಈ ಹಿರಿಯ ಅಧಿಕಾರಿ ಮಾಡಿರುವ ಟ್ವೀಟ್ ವೈರಲ್ ಆಗಿದೆ. ಇದನ್ನು ಬರೆಯುವ ಹೊತ್ತಿಗೆ ಮೇಲಿನ ಪೋಸ್ಟ್ 5300 ರೀಟ್ವೀಟ್ ಆಗಿದ್ದು 19,500 ಜನ ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ಪಕ್ಷಪಾತ

ಬಿಜೆಪಿ ತನ್ನ ಬಗ್ಗೆ ನಾಚಿಕೆಪಟ್ಟುಕೊಳ್ಳಬೇಕಾದ ಸಂಗತಿ ಇದಾಗಿದೆ.

ಆದರೆ ಇದೇ ಸಂದರ್ಭದಲ್ಲಿ ಇನ್ನೊಂದು ಸಂಗತಿಯನ್ನೂ ಗಮನದಲ್ಲಿರಿಸಿಕೊಳ್ಳಬೇಕಿದೆ. ಟಿ.ಎನ್.ಶೇಷನ್ ಅವರ ನಂತರ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಎಂ.ಎಸ್.ಗಿಲ್ ಅವರನ್ನು ಕಾಂಗ್ರೆಸ್ ಪಕ್ಷವು ರಾಜ್ಯಸಭಾ ಸದಸ್ಯರನ್ನಾಗಿಸಿದ್ದಲ್ಲದೇ ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಮಂತ್ರಿಯೂ ಆಗಿಸಿತ್ತು.

ಎಂ.ಎಸ್.ಗಿಲ್

ಹಾಗೆ ನೋಡಿದರೆ ಅದೂ ಸಹಾ ಅಂತಹ ಒಳ್ಳೆಯ ಸಂಪ್ರದಾಯವೇನೂ ಆಗಿರಲಿಲ್ಲ.

ಒಟ್ಟಿನಲ್ಲಿ ಭಾರತದ ಚುನಾವಣಾ ಆಯೋಗವು ತಮಾಷೆಯ ವಸ್ತುವಾಗಿರುವುದಕ್ಕಿಂತ ದುರಂತ ಇನ್ನೇನಿದೆ?

ಇದನ್ನೂ ಓದಿ: ಚುನಾವಣಾ ಆಯೋಗದ ಕುರಿತು ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಏನು ಹೇಳುತ್ತಾರೆ?

ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಇಂಥವನ್ನು ಮಾಡುತ್ತವಾದರೂ, ಈಗ ಅಧಿಕಾರದಲ್ಲಿರುವ ಪಕ್ಷವು ಅತ್ಯಂತ ಹೆಚ್ಚು ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಮಾಡಿದ  ಆರೋಪ ಹೊತ್ತಿದೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಕಾರ್ಟೂನುಗಳು, ಕಮೆಂಟುಗಳು ಚುನಾವಣಾ ಆಯೋಗದ ಕುರಿತೂ ಬರುತ್ತಿದೆ. ಚುನಾವಣಾ ಆಯೋಗವೇ ಬಿಜೆಪಿಯ ಕಚೇರಿ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಸರ್ಕಾರ್ ಅವರು ಮಾಡಿರುವ ಲೇವಡಿ ಅತ್ಯಂತ ಹೆಚ್ಚು ಅಪಹಾಸ್ಯ ಮಾಡಿದ ವ್ಯಂಗ್ಯವಾಗಿದೆ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುತ್ತಾರೆಂದು ಆಶಿಸೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...