HomeUncategorizedಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಇಕ್ಕಟ್ಟಿನಲ್ಲಿ

- Advertisement -
- Advertisement -

|ನಾನು ಗೌರಿ ಡೆಸ್ಕ್|

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಹೌದು, ಈ ಚುನಾವಣೆಯ ಮಟ್ಟಿಗೆ ಇದು ಬಹಳ ಮಹತ್ವದ ಸುದ್ದಿ. ಬಹುಶಃ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಇಂತಹದೊಂದು ಬೆಳವಣಿಗೆ ಈ ಹಿಂದೆ ನಡೆದಿರಲಿಕ್ಕಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು.

ಆ ಸುದ್ದಿ ಏನಿರಬಹುದು? ಇದರಿಂದ ಮುಂದಿನ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮವೇನು? ಈ ಸುದ್ದಿ ಮೊದಲು ಸಿಕ್ಕಿದ್ದು ಯಾರಿಗೆ? ಒಂದೊಂದಾಗಿ ನೋಡೋಣ.

ಆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದು ಬೇರಾರೂ ಅಲ್ಲ. ಪ್ರಸಾರ ಭಾರತಿಯ ಅಧ್ಯಕ್ಷರಾಗಿದ್ದ ಜವಹರ್ ಸರ್ಕಾರ್ ಅವರು. ಸುಮಾರು 42 ವರ್ಷಗಳ ಕಾಲ ಐಎಎಸ್ ಅಧಿಕಾರಿಯಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರ್ ಇದನ್ನು ಮೊದಲ ಬಾರಿಗೆ ಎಲ್ಲಿ ಬ್ರೇಕ್ ಮಾಡಿದರು ಗೊತ್ತೇ?

ಟ್ವಿಟ್ಟರ್ ನಲ್ಲಿ.

ಹೌದು ಸುದ್ದಿ ಇದೇ.

‘ಭಾರತದ ಚುನಾವಣಾ ಆಯೋಗವು ಅಧಿಕೃತವಾಗಿ ಬಿಜೆಪಿಯನ್ನು ಸೇರಿದೆ ಎಂಬುದನ್ನು ನಿರಾಕರಿಸಿ ಹೇಳಿಕೆ ನೀಡಿದೆ. ಬದಲಿಗೆ ಕೇವಲ ಬಾಹ್ಯ ಬೆಂಬಲ ಮಾತ್ರ ನೀಡುವುದಾಗಿ ಹೇಳಿದೆ’

ತಮಾಷೆಯಾಗಿ ಕಾಣುತ್ತದಲ್ಲವೇ?

ಹೌದು ತಮಾಷೆಯೇ. ಆದರೆ, ವಾಸ್ತವದಂತೆ ಕಾಣುತ್ತಿರುವ ತಮಾಷೆ ಅಥವಾ ತಮಾಷೆಯಂತೆ ಕಾಣುತ್ತಿರುವ ವಾಸ್ತವ.

ಚುನಾವಣಾ ಆಯೋಗವು ಹಿಂದೆಂದೂ ಈ ಮಟ್ಟದ ಏಕಪಕ್ಷೀಯ ನಡವಳಿಕೆಯ ಆರೋಪಕ್ಕೆ ಗುರಿಯಾಗಿರಲಿಲ್ಲವೆಂಬುದನ್ನು ಇಲ್ಲಿ ಗಮನಿಸಬೇಕು. ಹಾಗಾಗಿ ಅದನ್ನು ಲೇವಡಿ ಮಾಡುವ ಉದ್ದೇಶದಿಂದ ಈ ಹಿರಿಯ ಅಧಿಕಾರಿ ಮಾಡಿರುವ ಟ್ವೀಟ್ ವೈರಲ್ ಆಗಿದೆ. ಇದನ್ನು ಬರೆಯುವ ಹೊತ್ತಿಗೆ ಮೇಲಿನ ಪೋಸ್ಟ್ 5300 ರೀಟ್ವೀಟ್ ಆಗಿದ್ದು 19,500 ಜನ ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ಪಕ್ಷಪಾತ

ಬಿಜೆಪಿ ತನ್ನ ಬಗ್ಗೆ ನಾಚಿಕೆಪಟ್ಟುಕೊಳ್ಳಬೇಕಾದ ಸಂಗತಿ ಇದಾಗಿದೆ.

ಆದರೆ ಇದೇ ಸಂದರ್ಭದಲ್ಲಿ ಇನ್ನೊಂದು ಸಂಗತಿಯನ್ನೂ ಗಮನದಲ್ಲಿರಿಸಿಕೊಳ್ಳಬೇಕಿದೆ. ಟಿ.ಎನ್.ಶೇಷನ್ ಅವರ ನಂತರ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಎಂ.ಎಸ್.ಗಿಲ್ ಅವರನ್ನು ಕಾಂಗ್ರೆಸ್ ಪಕ್ಷವು ರಾಜ್ಯಸಭಾ ಸದಸ್ಯರನ್ನಾಗಿಸಿದ್ದಲ್ಲದೇ ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಮಂತ್ರಿಯೂ ಆಗಿಸಿತ್ತು.

ಎಂ.ಎಸ್.ಗಿಲ್

ಹಾಗೆ ನೋಡಿದರೆ ಅದೂ ಸಹಾ ಅಂತಹ ಒಳ್ಳೆಯ ಸಂಪ್ರದಾಯವೇನೂ ಆಗಿರಲಿಲ್ಲ.

ಒಟ್ಟಿನಲ್ಲಿ ಭಾರತದ ಚುನಾವಣಾ ಆಯೋಗವು ತಮಾಷೆಯ ವಸ್ತುವಾಗಿರುವುದಕ್ಕಿಂತ ದುರಂತ ಇನ್ನೇನಿದೆ?

ಇದನ್ನೂ ಓದಿ: ಚುನಾವಣಾ ಆಯೋಗದ ಕುರಿತು ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಏನು ಹೇಳುತ್ತಾರೆ?

ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಇಂಥವನ್ನು ಮಾಡುತ್ತವಾದರೂ, ಈಗ ಅಧಿಕಾರದಲ್ಲಿರುವ ಪಕ್ಷವು ಅತ್ಯಂತ ಹೆಚ್ಚು ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಮಾಡಿದ  ಆರೋಪ ಹೊತ್ತಿದೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಕಾರ್ಟೂನುಗಳು, ಕಮೆಂಟುಗಳು ಚುನಾವಣಾ ಆಯೋಗದ ಕುರಿತೂ ಬರುತ್ತಿದೆ. ಚುನಾವಣಾ ಆಯೋಗವೇ ಬಿಜೆಪಿಯ ಕಚೇರಿ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಸರ್ಕಾರ್ ಅವರು ಮಾಡಿರುವ ಲೇವಡಿ ಅತ್ಯಂತ ಹೆಚ್ಚು ಅಪಹಾಸ್ಯ ಮಾಡಿದ ವ್ಯಂಗ್ಯವಾಗಿದೆ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುತ್ತಾರೆಂದು ಆಶಿಸೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...