HomeUncategorizedಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಇಕ್ಕಟ್ಟಿನಲ್ಲಿ

- Advertisement -
- Advertisement -

|ನಾನು ಗೌರಿ ಡೆಸ್ಕ್|

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಹೌದು, ಈ ಚುನಾವಣೆಯ ಮಟ್ಟಿಗೆ ಇದು ಬಹಳ ಮಹತ್ವದ ಸುದ್ದಿ. ಬಹುಶಃ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಇಂತಹದೊಂದು ಬೆಳವಣಿಗೆ ಈ ಹಿಂದೆ ನಡೆದಿರಲಿಕ್ಕಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು.

ಆ ಸುದ್ದಿ ಏನಿರಬಹುದು? ಇದರಿಂದ ಮುಂದಿನ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮವೇನು? ಈ ಸುದ್ದಿ ಮೊದಲು ಸಿಕ್ಕಿದ್ದು ಯಾರಿಗೆ? ಒಂದೊಂದಾಗಿ ನೋಡೋಣ.

ಆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದು ಬೇರಾರೂ ಅಲ್ಲ. ಪ್ರಸಾರ ಭಾರತಿಯ ಅಧ್ಯಕ್ಷರಾಗಿದ್ದ ಜವಹರ್ ಸರ್ಕಾರ್ ಅವರು. ಸುಮಾರು 42 ವರ್ಷಗಳ ಕಾಲ ಐಎಎಸ್ ಅಧಿಕಾರಿಯಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರ್ ಇದನ್ನು ಮೊದಲ ಬಾರಿಗೆ ಎಲ್ಲಿ ಬ್ರೇಕ್ ಮಾಡಿದರು ಗೊತ್ತೇ?

ಟ್ವಿಟ್ಟರ್ ನಲ್ಲಿ.

ಹೌದು ಸುದ್ದಿ ಇದೇ.

‘ಭಾರತದ ಚುನಾವಣಾ ಆಯೋಗವು ಅಧಿಕೃತವಾಗಿ ಬಿಜೆಪಿಯನ್ನು ಸೇರಿದೆ ಎಂಬುದನ್ನು ನಿರಾಕರಿಸಿ ಹೇಳಿಕೆ ನೀಡಿದೆ. ಬದಲಿಗೆ ಕೇವಲ ಬಾಹ್ಯ ಬೆಂಬಲ ಮಾತ್ರ ನೀಡುವುದಾಗಿ ಹೇಳಿದೆ’

ತಮಾಷೆಯಾಗಿ ಕಾಣುತ್ತದಲ್ಲವೇ?

ಹೌದು ತಮಾಷೆಯೇ. ಆದರೆ, ವಾಸ್ತವದಂತೆ ಕಾಣುತ್ತಿರುವ ತಮಾಷೆ ಅಥವಾ ತಮಾಷೆಯಂತೆ ಕಾಣುತ್ತಿರುವ ವಾಸ್ತವ.

ಚುನಾವಣಾ ಆಯೋಗವು ಹಿಂದೆಂದೂ ಈ ಮಟ್ಟದ ಏಕಪಕ್ಷೀಯ ನಡವಳಿಕೆಯ ಆರೋಪಕ್ಕೆ ಗುರಿಯಾಗಿರಲಿಲ್ಲವೆಂಬುದನ್ನು ಇಲ್ಲಿ ಗಮನಿಸಬೇಕು. ಹಾಗಾಗಿ ಅದನ್ನು ಲೇವಡಿ ಮಾಡುವ ಉದ್ದೇಶದಿಂದ ಈ ಹಿರಿಯ ಅಧಿಕಾರಿ ಮಾಡಿರುವ ಟ್ವೀಟ್ ವೈರಲ್ ಆಗಿದೆ. ಇದನ್ನು ಬರೆಯುವ ಹೊತ್ತಿಗೆ ಮೇಲಿನ ಪೋಸ್ಟ್ 5300 ರೀಟ್ವೀಟ್ ಆಗಿದ್ದು 19,500 ಜನ ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ಪಕ್ಷಪಾತ

ಬಿಜೆಪಿ ತನ್ನ ಬಗ್ಗೆ ನಾಚಿಕೆಪಟ್ಟುಕೊಳ್ಳಬೇಕಾದ ಸಂಗತಿ ಇದಾಗಿದೆ.

ಆದರೆ ಇದೇ ಸಂದರ್ಭದಲ್ಲಿ ಇನ್ನೊಂದು ಸಂಗತಿಯನ್ನೂ ಗಮನದಲ್ಲಿರಿಸಿಕೊಳ್ಳಬೇಕಿದೆ. ಟಿ.ಎನ್.ಶೇಷನ್ ಅವರ ನಂತರ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಎಂ.ಎಸ್.ಗಿಲ್ ಅವರನ್ನು ಕಾಂಗ್ರೆಸ್ ಪಕ್ಷವು ರಾಜ್ಯಸಭಾ ಸದಸ್ಯರನ್ನಾಗಿಸಿದ್ದಲ್ಲದೇ ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಮಂತ್ರಿಯೂ ಆಗಿಸಿತ್ತು.

ಎಂ.ಎಸ್.ಗಿಲ್

ಹಾಗೆ ನೋಡಿದರೆ ಅದೂ ಸಹಾ ಅಂತಹ ಒಳ್ಳೆಯ ಸಂಪ್ರದಾಯವೇನೂ ಆಗಿರಲಿಲ್ಲ.

ಒಟ್ಟಿನಲ್ಲಿ ಭಾರತದ ಚುನಾವಣಾ ಆಯೋಗವು ತಮಾಷೆಯ ವಸ್ತುವಾಗಿರುವುದಕ್ಕಿಂತ ದುರಂತ ಇನ್ನೇನಿದೆ?

ಇದನ್ನೂ ಓದಿ: ಚುನಾವಣಾ ಆಯೋಗದ ಕುರಿತು ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಏನು ಹೇಳುತ್ತಾರೆ?

ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಇಂಥವನ್ನು ಮಾಡುತ್ತವಾದರೂ, ಈಗ ಅಧಿಕಾರದಲ್ಲಿರುವ ಪಕ್ಷವು ಅತ್ಯಂತ ಹೆಚ್ಚು ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಮಾಡಿದ  ಆರೋಪ ಹೊತ್ತಿದೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಕಾರ್ಟೂನುಗಳು, ಕಮೆಂಟುಗಳು ಚುನಾವಣಾ ಆಯೋಗದ ಕುರಿತೂ ಬರುತ್ತಿದೆ. ಚುನಾವಣಾ ಆಯೋಗವೇ ಬಿಜೆಪಿಯ ಕಚೇರಿ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಸರ್ಕಾರ್ ಅವರು ಮಾಡಿರುವ ಲೇವಡಿ ಅತ್ಯಂತ ಹೆಚ್ಚು ಅಪಹಾಸ್ಯ ಮಾಡಿದ ವ್ಯಂಗ್ಯವಾಗಿದೆ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುತ್ತಾರೆಂದು ಆಶಿಸೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...