HomeUncategorizedಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಇಕ್ಕಟ್ಟಿನಲ್ಲಿ

- Advertisement -
- Advertisement -

|ನಾನು ಗೌರಿ ಡೆಸ್ಕ್|

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಹೌದು, ಈ ಚುನಾವಣೆಯ ಮಟ್ಟಿಗೆ ಇದು ಬಹಳ ಮಹತ್ವದ ಸುದ್ದಿ. ಬಹುಶಃ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಇಂತಹದೊಂದು ಬೆಳವಣಿಗೆ ಈ ಹಿಂದೆ ನಡೆದಿರಲಿಕ್ಕಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು.

ಆ ಸುದ್ದಿ ಏನಿರಬಹುದು? ಇದರಿಂದ ಮುಂದಿನ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮವೇನು? ಈ ಸುದ್ದಿ ಮೊದಲು ಸಿಕ್ಕಿದ್ದು ಯಾರಿಗೆ? ಒಂದೊಂದಾಗಿ ನೋಡೋಣ.

ಆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದು ಬೇರಾರೂ ಅಲ್ಲ. ಪ್ರಸಾರ ಭಾರತಿಯ ಅಧ್ಯಕ್ಷರಾಗಿದ್ದ ಜವಹರ್ ಸರ್ಕಾರ್ ಅವರು. ಸುಮಾರು 42 ವರ್ಷಗಳ ಕಾಲ ಐಎಎಸ್ ಅಧಿಕಾರಿಯಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರ್ ಇದನ್ನು ಮೊದಲ ಬಾರಿಗೆ ಎಲ್ಲಿ ಬ್ರೇಕ್ ಮಾಡಿದರು ಗೊತ್ತೇ?

ಟ್ವಿಟ್ಟರ್ ನಲ್ಲಿ.

ಹೌದು ಸುದ್ದಿ ಇದೇ.

‘ಭಾರತದ ಚುನಾವಣಾ ಆಯೋಗವು ಅಧಿಕೃತವಾಗಿ ಬಿಜೆಪಿಯನ್ನು ಸೇರಿದೆ ಎಂಬುದನ್ನು ನಿರಾಕರಿಸಿ ಹೇಳಿಕೆ ನೀಡಿದೆ. ಬದಲಿಗೆ ಕೇವಲ ಬಾಹ್ಯ ಬೆಂಬಲ ಮಾತ್ರ ನೀಡುವುದಾಗಿ ಹೇಳಿದೆ’

ತಮಾಷೆಯಾಗಿ ಕಾಣುತ್ತದಲ್ಲವೇ?

ಹೌದು ತಮಾಷೆಯೇ. ಆದರೆ, ವಾಸ್ತವದಂತೆ ಕಾಣುತ್ತಿರುವ ತಮಾಷೆ ಅಥವಾ ತಮಾಷೆಯಂತೆ ಕಾಣುತ್ತಿರುವ ವಾಸ್ತವ.

ಚುನಾವಣಾ ಆಯೋಗವು ಹಿಂದೆಂದೂ ಈ ಮಟ್ಟದ ಏಕಪಕ್ಷೀಯ ನಡವಳಿಕೆಯ ಆರೋಪಕ್ಕೆ ಗುರಿಯಾಗಿರಲಿಲ್ಲವೆಂಬುದನ್ನು ಇಲ್ಲಿ ಗಮನಿಸಬೇಕು. ಹಾಗಾಗಿ ಅದನ್ನು ಲೇವಡಿ ಮಾಡುವ ಉದ್ದೇಶದಿಂದ ಈ ಹಿರಿಯ ಅಧಿಕಾರಿ ಮಾಡಿರುವ ಟ್ವೀಟ್ ವೈರಲ್ ಆಗಿದೆ. ಇದನ್ನು ಬರೆಯುವ ಹೊತ್ತಿಗೆ ಮೇಲಿನ ಪೋಸ್ಟ್ 5300 ರೀಟ್ವೀಟ್ ಆಗಿದ್ದು 19,500 ಜನ ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ಪಕ್ಷಪಾತ

ಬಿಜೆಪಿ ತನ್ನ ಬಗ್ಗೆ ನಾಚಿಕೆಪಟ್ಟುಕೊಳ್ಳಬೇಕಾದ ಸಂಗತಿ ಇದಾಗಿದೆ.

ಆದರೆ ಇದೇ ಸಂದರ್ಭದಲ್ಲಿ ಇನ್ನೊಂದು ಸಂಗತಿಯನ್ನೂ ಗಮನದಲ್ಲಿರಿಸಿಕೊಳ್ಳಬೇಕಿದೆ. ಟಿ.ಎನ್.ಶೇಷನ್ ಅವರ ನಂತರ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಎಂ.ಎಸ್.ಗಿಲ್ ಅವರನ್ನು ಕಾಂಗ್ರೆಸ್ ಪಕ್ಷವು ರಾಜ್ಯಸಭಾ ಸದಸ್ಯರನ್ನಾಗಿಸಿದ್ದಲ್ಲದೇ ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಮಂತ್ರಿಯೂ ಆಗಿಸಿತ್ತು.

ಎಂ.ಎಸ್.ಗಿಲ್

ಹಾಗೆ ನೋಡಿದರೆ ಅದೂ ಸಹಾ ಅಂತಹ ಒಳ್ಳೆಯ ಸಂಪ್ರದಾಯವೇನೂ ಆಗಿರಲಿಲ್ಲ.

ಒಟ್ಟಿನಲ್ಲಿ ಭಾರತದ ಚುನಾವಣಾ ಆಯೋಗವು ತಮಾಷೆಯ ವಸ್ತುವಾಗಿರುವುದಕ್ಕಿಂತ ದುರಂತ ಇನ್ನೇನಿದೆ?

ಇದನ್ನೂ ಓದಿ: ಚುನಾವಣಾ ಆಯೋಗದ ಕುರಿತು ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಏನು ಹೇಳುತ್ತಾರೆ?

ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಇಂಥವನ್ನು ಮಾಡುತ್ತವಾದರೂ, ಈಗ ಅಧಿಕಾರದಲ್ಲಿರುವ ಪಕ್ಷವು ಅತ್ಯಂತ ಹೆಚ್ಚು ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಮಾಡಿದ  ಆರೋಪ ಹೊತ್ತಿದೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಕಾರ್ಟೂನುಗಳು, ಕಮೆಂಟುಗಳು ಚುನಾವಣಾ ಆಯೋಗದ ಕುರಿತೂ ಬರುತ್ತಿದೆ. ಚುನಾವಣಾ ಆಯೋಗವೇ ಬಿಜೆಪಿಯ ಕಚೇರಿ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಸರ್ಕಾರ್ ಅವರು ಮಾಡಿರುವ ಲೇವಡಿ ಅತ್ಯಂತ ಹೆಚ್ಚು ಅಪಹಾಸ್ಯ ಮಾಡಿದ ವ್ಯಂಗ್ಯವಾಗಿದೆ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುತ್ತಾರೆಂದು ಆಶಿಸೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...