HomeUncategorizedಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಇಕ್ಕಟ್ಟಿನಲ್ಲಿ

- Advertisement -
- Advertisement -

|ನಾನು ಗೌರಿ ಡೆಸ್ಕ್|

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಹೌದು, ಈ ಚುನಾವಣೆಯ ಮಟ್ಟಿಗೆ ಇದು ಬಹಳ ಮಹತ್ವದ ಸುದ್ದಿ. ಬಹುಶಃ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಇಂತಹದೊಂದು ಬೆಳವಣಿಗೆ ಈ ಹಿಂದೆ ನಡೆದಿರಲಿಕ್ಕಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು.

ಆ ಸುದ್ದಿ ಏನಿರಬಹುದು? ಇದರಿಂದ ಮುಂದಿನ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮವೇನು? ಈ ಸುದ್ದಿ ಮೊದಲು ಸಿಕ್ಕಿದ್ದು ಯಾರಿಗೆ? ಒಂದೊಂದಾಗಿ ನೋಡೋಣ.

ಆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದು ಬೇರಾರೂ ಅಲ್ಲ. ಪ್ರಸಾರ ಭಾರತಿಯ ಅಧ್ಯಕ್ಷರಾಗಿದ್ದ ಜವಹರ್ ಸರ್ಕಾರ್ ಅವರು. ಸುಮಾರು 42 ವರ್ಷಗಳ ಕಾಲ ಐಎಎಸ್ ಅಧಿಕಾರಿಯಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರ್ ಇದನ್ನು ಮೊದಲ ಬಾರಿಗೆ ಎಲ್ಲಿ ಬ್ರೇಕ್ ಮಾಡಿದರು ಗೊತ್ತೇ?

ಟ್ವಿಟ್ಟರ್ ನಲ್ಲಿ.

ಹೌದು ಸುದ್ದಿ ಇದೇ.

‘ಭಾರತದ ಚುನಾವಣಾ ಆಯೋಗವು ಅಧಿಕೃತವಾಗಿ ಬಿಜೆಪಿಯನ್ನು ಸೇರಿದೆ ಎಂಬುದನ್ನು ನಿರಾಕರಿಸಿ ಹೇಳಿಕೆ ನೀಡಿದೆ. ಬದಲಿಗೆ ಕೇವಲ ಬಾಹ್ಯ ಬೆಂಬಲ ಮಾತ್ರ ನೀಡುವುದಾಗಿ ಹೇಳಿದೆ’

ತಮಾಷೆಯಾಗಿ ಕಾಣುತ್ತದಲ್ಲವೇ?

ಹೌದು ತಮಾಷೆಯೇ. ಆದರೆ, ವಾಸ್ತವದಂತೆ ಕಾಣುತ್ತಿರುವ ತಮಾಷೆ ಅಥವಾ ತಮಾಷೆಯಂತೆ ಕಾಣುತ್ತಿರುವ ವಾಸ್ತವ.

ಚುನಾವಣಾ ಆಯೋಗವು ಹಿಂದೆಂದೂ ಈ ಮಟ್ಟದ ಏಕಪಕ್ಷೀಯ ನಡವಳಿಕೆಯ ಆರೋಪಕ್ಕೆ ಗುರಿಯಾಗಿರಲಿಲ್ಲವೆಂಬುದನ್ನು ಇಲ್ಲಿ ಗಮನಿಸಬೇಕು. ಹಾಗಾಗಿ ಅದನ್ನು ಲೇವಡಿ ಮಾಡುವ ಉದ್ದೇಶದಿಂದ ಈ ಹಿರಿಯ ಅಧಿಕಾರಿ ಮಾಡಿರುವ ಟ್ವೀಟ್ ವೈರಲ್ ಆಗಿದೆ. ಇದನ್ನು ಬರೆಯುವ ಹೊತ್ತಿಗೆ ಮೇಲಿನ ಪೋಸ್ಟ್ 5300 ರೀಟ್ವೀಟ್ ಆಗಿದ್ದು 19,500 ಜನ ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ಪಕ್ಷಪಾತ

ಬಿಜೆಪಿ ತನ್ನ ಬಗ್ಗೆ ನಾಚಿಕೆಪಟ್ಟುಕೊಳ್ಳಬೇಕಾದ ಸಂಗತಿ ಇದಾಗಿದೆ.

ಆದರೆ ಇದೇ ಸಂದರ್ಭದಲ್ಲಿ ಇನ್ನೊಂದು ಸಂಗತಿಯನ್ನೂ ಗಮನದಲ್ಲಿರಿಸಿಕೊಳ್ಳಬೇಕಿದೆ. ಟಿ.ಎನ್.ಶೇಷನ್ ಅವರ ನಂತರ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಎಂ.ಎಸ್.ಗಿಲ್ ಅವರನ್ನು ಕಾಂಗ್ರೆಸ್ ಪಕ್ಷವು ರಾಜ್ಯಸಭಾ ಸದಸ್ಯರನ್ನಾಗಿಸಿದ್ದಲ್ಲದೇ ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಮಂತ್ರಿಯೂ ಆಗಿಸಿತ್ತು.

ಎಂ.ಎಸ್.ಗಿಲ್

ಹಾಗೆ ನೋಡಿದರೆ ಅದೂ ಸಹಾ ಅಂತಹ ಒಳ್ಳೆಯ ಸಂಪ್ರದಾಯವೇನೂ ಆಗಿರಲಿಲ್ಲ.

ಒಟ್ಟಿನಲ್ಲಿ ಭಾರತದ ಚುನಾವಣಾ ಆಯೋಗವು ತಮಾಷೆಯ ವಸ್ತುವಾಗಿರುವುದಕ್ಕಿಂತ ದುರಂತ ಇನ್ನೇನಿದೆ?

ಇದನ್ನೂ ಓದಿ: ಚುನಾವಣಾ ಆಯೋಗದ ಕುರಿತು ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಏನು ಹೇಳುತ್ತಾರೆ?

ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಇಂಥವನ್ನು ಮಾಡುತ್ತವಾದರೂ, ಈಗ ಅಧಿಕಾರದಲ್ಲಿರುವ ಪಕ್ಷವು ಅತ್ಯಂತ ಹೆಚ್ಚು ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಮಾಡಿದ  ಆರೋಪ ಹೊತ್ತಿದೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಕಾರ್ಟೂನುಗಳು, ಕಮೆಂಟುಗಳು ಚುನಾವಣಾ ಆಯೋಗದ ಕುರಿತೂ ಬರುತ್ತಿದೆ. ಚುನಾವಣಾ ಆಯೋಗವೇ ಬಿಜೆಪಿಯ ಕಚೇರಿ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಸರ್ಕಾರ್ ಅವರು ಮಾಡಿರುವ ಲೇವಡಿ ಅತ್ಯಂತ ಹೆಚ್ಚು ಅಪಹಾಸ್ಯ ಮಾಡಿದ ವ್ಯಂಗ್ಯವಾಗಿದೆ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುತ್ತಾರೆಂದು ಆಶಿಸೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...