Homeಕರ್ನಾಟಕಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

ಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಹೇಳಿಕೇಳಿ ಸಂಘಪರಿವಾರದ ಪುಂಡ-ಪೋಕರಿಗಳ ಆಡಂಬೋಲ. ಹಿಂದುತ್ವದ ಪ್ರಯೋಗ ಶಾಲೆಯೆಂಬ ಭೀಭತ್ಸ ’ಅಡ್ಡ’ ಹೆಸರು ದಕ್ಷಿಣ ಕನ್ನಡಕ್ಕೆ ಬಿದ್ದು ಅದ್ಯಾವುದೋ ಕಾಲವಾಗಿ ಹೋಗಿದೆ! ಕೊರೊನಾದ ಆತಂಕದಿಂದ ಒಂಚೂರು ಹಿಮ್ಮೆಟ್ಟಿದ್ದ ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿ ಈಗ ಮತ್ತೆ ಬಾಲ ಬಿಚ್ಚಿದೆ. ಸಂಘ ಪರಿವಾರದ ಸರದಾರರು ರೋಡ್ ರೌಡಿಗಳು, ಭೂಗತ ಪಾತಕಿಗಳು, ಬೀದಿ ಕಾಮಣ್ಣರು ಮತ್ತು ಕ್ರಿಮಿನಲ್ ಪುಂಡರಿಗೆ ಹಿಂದುತ್ವ ದೀಕ್ಷೆಕೊಟ್ಟು ಧರ್ಮಕಾರಣದ ಹಿಡನ್ ಅಜೆಂಡಾ ಈಡೇರಿಸಿಕೊಳ್ಳಲು ಹವಣಿಸುತ್ತಿದ್ದಾರೆಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಮಡುಗಟ್ಟಿದೆ.

ಈ ಹಿಂದುತ್ವದ ಯಜ್ಞಕ್ಕೆ ಗೋಪ್ರಾಣ ಮತ್ತು ಹಿಂದೂ ಹೆಣ್ಣಿನ ಮಾನವೇ ಹವಿಸ್ಸು! ಮುಸ್ಲಿಮ್ ಹುಡುಗ ಮತ್ತು ಹಿಂದೂ ಹುಡುಗಿ ಸಹಪಾಠಿಗಳೆಂಬ ನೈತಿಕ ನೆಲೆಯಲ್ಲಿ ಒಡನಾಡಿದರೂ ಸಾಕು, ಧರ್ಮ “ದಂಡ” ಎತ್ತಿಕೊಂಡು ಅಟ್ಟಾಡಿಸಿ-ಅವಮಾನಿಸಿ ದಾಳಿ ಮಾಡುವ ಸಂಘಪರಿವಾರದ ತರಹೇವಾರಿ ತಂಡಗಳ ಹಾವಳಿ ಈಗಿತ್ತಲಾಗಿ ಮಿತಿಮೀರುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಕೇಸರಿ ಸರ್ಕಾರವೇ ಇರುವುದು ಪರಿವಾರದ ಹಲ್ಲೆಕೋರರ ಹಾರಾಟವನ್ನು ಹೆಚ್ಚಿಸಿಬಿಟ್ಟಿದೆ. ಕಳೆದ ಕೆಲವು ದಿನಗಳಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವೆಡೆ ಹಿಂದೂ ರಕ್ಷಕ ಮುಖವಾಡದಲ್ಲಿ ಪಕ್ಕ ರೌಡಿಗಳು ಅನೈತಿಕ ಪೊಲೀಸ್‌ಗಿರಿಯನ್ನು ನಿರಂತಕವಾಗಿ ಪ್ರದರ್ಶಿಸುತ್ತಿದ್ದಾರೆ.

ಲವ್ ಜಿಹಾದ್‌ನಿಂದ ಹಿಂದೂ ಹೆಣ್ಣುಮಕ್ಕಳನ್ನು ಸಂರಕ್ಷಿಸುವ ಹುಸಿ ಪೋಸು ಕೊಡುತ್ತ ಪೂರ್ವಾಪರ ಯೋಚಿಸಿದೆ ಅಮಾಯಕ ಹಿಂದೂ ಹುಡುಗಿಯರನ್ನು ಸಾರ್ವಜನಿಕವಾಗಿ ಅಡ್ಡಹಾಕಿ ಅಶ್ಲೀಲವಾಗಿ ನಿಂದಿಸಿ, ದೈಹಿಕ ಕುಚೇಷ್ಟೆ ಮತ್ತು ಹಲ್ಲೆ ಮಾಡಿ ಮಾನ ಹರಾಜು ಹಾಕುವ ’ಧರ್ಮಕಾರ್ಯ ದಕ್ಷಿಣ ಕನ್ನಡದಲ್ಲಿ ಜೋರಾಗಿದೆ. ಕಳೆದೆರಡು ತಿಂಗಳಲ್ಲಿ ಮಂಗಳೂರಿನ ಬೀಚು, ಪಾರ್ಕುಗಳಲ್ಲಿ ಅನ್ಯಧರ್ಮೀಯ ಹುಡುಗ-ಹುಡುಗಿಯರ ಚಾರಿತ್ರ್ಯವಧೆ-ಹಲ್ಲೆ ನಡೆದುಹೋಗಿದೆ. ನೈತಿಕತೆ ಹೆಸರಲ್ಲಿ ಈ ಪಡೆಗಳು ಕಾನೂನು ಕೈಗೆತ್ತಿಕೊಂಡ ಪ್ರಕರಣ ಕಳೆದ ವಾರ ಸುರತ್ಕಲ್ ಮತ್ತು ಬೆಳ್ತಂಗಡಿಯಲ್ಲಾಗಿದೆ. ದೇಶವನ್ನು ಕಾಡುತ್ತಿರುವ ಆರ್ಥಿಕ ಹಿಂಜರಿತ ಮತ್ತು ಕೊರೊನಾ ಆರ್ಭಟದಿಂದ ಮಂಗಳೂರಿನ ವ್ಯಾಪಾರ-ವಹಿವಾಟಿಗೆ ದೊಡ್ಡ ಹೊಡೆತ ಬಿದ್ದಿರುವ ಈ ಕಾಲಘಟ್ಟದಲ್ಲಿ ಅನೈತಿಕ ಪೊಲೀಸ್‌ಗಿರಿ ಭುಗಿಲೇಳುತ್ತಿರುವುದು ಜನರನ್ನು ಕಂಗಾಲಾಗಿಸಿಬಿಟ್ಟಿದೆ.

ಈ ಹಿಂದೆಯೂ ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿಯಿಂದ ದಕ್ಷಿಣ ಕನ್ನಡದ ಆರ್ಥಿಕ ವಲಯ ಘಾಸಿಗೊಂಡಿತ್ತು; ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಮಂಗಳೂರು ಮತ್ತು ದಕ್ಷಿಣ ಕನ್ನಡದ ಇನ್ನಿತರ ಪಟ್ಟಣಗಳಿಗೆ ಬರಲು ಉದ್ಯಮಿಗಳು ಬಂಡವಾಳಗಾರರು, ವರ್ತಕರು ಹಾಗೂ ಗ್ರಾಹಕರು ಹೆದರುತ್ತಿದ್ದರು. ಆ ಕಳಂಕದಿಂದ ಹೊರಬರುತ್ತಿರುವ ಹೊತ್ತಲ್ಲೇ ಮಂಗಳೂರು ಮತ್ತದರ ಸುತ್ತಮುತ್ತ ಅನೈತಿಕ ಪೊಲೀಸ್‌ಗಿರಿ ಪ್ರವರ ಪ್ರಾರಂಭವಾಗಿರುವುದು ಸ್ಥಳೀಯ ಆರ್ಥಿಕತೆಯನ್ನೂ ಬುಡಮೇಲಾಗಿಸುತ್ತಿದೆ. ಕಳೆದ ಗುರುವಾರ (ಏಪ್ರಿಲ್ 1, 2021) ರಾತ್ರಿ ಅಸ್ವಿದ್ ಅನ್ವರ್ ಮುಹಮ್ಮದ್ ಎಂಬ 24 ವರ್ಷದ ಸಾಬರ ಪೋರ ಮತ್ತಾತನ ಹಿಂದೂ ಸಹಪಾಠಿಯಾದ ಕೊಂಕಣಿ ಹುಡುಗಿಯ ಮೇಲೆ ಭಜರಂಗಿಗಳು ಮಾರಣಾಂತಿಕ ದಾಳಿ ಮಾಡಿ ಸುಖಾಸುಮ್ಮನೆ ಅವರ ಮಾನ ಬೀದಿಪಾಲು ಮಾಡಲು ಹವಣಿಸಿದ್ದಾರೆ.

ಅಸ್ವಿದ್ ಮತ್ತು ಆ ಕೊಂಕಣಿ ಹುಡುಗಿ ಕ್ಲಾಸ್‌ಮೇಟ್‌ಗಳು. ಇತ್ತೀಚೆಗಷ್ಟೆ ಡಿಗ್ರಿ ಮುಗಿಸಿದ್ದ ಈ ಸಹಪಾಠಿಗಳು ಉದ್ಯೋಗ ಹುಡುಕುತ್ತಿದ್ದರು. ಹುಡುಗಿಗೆ ಬೆಂಗಳೂರಿನ ಕಂಪನಿಯೊಂದು ಸಂದರ್ಶನಕ್ಕೆ ಕರೆದಿತ್ತು. ಬೆಂಗಳೂರು ಅಷ್ಟಾಗಿ ಪರಿಚಯವಿಲ್ಲದ ಆಕೆ ಆ ಮಾಯಾನಗರಿಯ ಬಗ್ಗೆ ಗೊತ್ತಿದ್ದ ಅಸ್ವಿದ್‌ನನ್ನು ತನ್ನೊಂದಿಗೆ ಬರುವಂತೆ ಹೇಳಿದ್ದಳು. ಗುರುವಾರ ರಾತ್ರಿ ಬೆಂಗಳೂರಿಗೆ ಹೋಗಲೆಂದು ಖಾಸಗಿ ಬಸ್ ಹತ್ತಿದ್ದರು. ಬಸ್ಸು ಪಂಪ್‌ವೆಲ್ ಬಳಿ ಬರುತ್ತಿದ್ದಂತೆ ಹಲವು ಕ್ರಿಮಿನಲ್ ಕೇಸ್‌ಗಳಲ್ಲಿ ಆರೋಪಿಗಳಾದ ಆರೆಂಟು ಮಂದಿ ಅಡ್ಡಗಟ್ಟಿದ್ದಾರೆ. ತಮ್ಮ ಸಂಬಂಧಿ ಪ್ರಯಾಣಿಕರೊಬ್ಬರಿಗೆ ಹುಷಾರಿಲ್ಲ; ಅವರನ್ನು ಉಪಚರಿಸಬೇಕಿದೆ ಎಂದು ಹೇಳಿ ಬಸ್ಸಿಗೆ ನುಗ್ಗಿದ್ದಾರೆ.

ಬಸ್‌ನಲ್ಲಿ ಅಸ್ವಿದ್ ಮತ್ತಾತನ ಕ್ಲಾಸ್‌ಮೇಟ್ ಹುಡುಗಿಯನ್ನು ದರದರನೆ ಎಳೆದು ಕೆಳಗೆ ಇಳಿಸಿದ್ದಾರೆ. ಹಿಂದೆ ಮುಂದೆ ನೋಡದೆ ಧರ್ಮೋನ್ಮಾದದ ವಿಚಾರಣೆ ನಡೆಸಿದ್ದಾರೆ. ಹೀಗೆ ಸಾಬರ ಹುಡುಗನ ಜತೆ ಹೋಗುವುದು ಧರ್ಮ ವಿರೋಧಿ ಎಂದೆನ್ನುತ್ತ ಹಿಂದೂ ಹುಡುಗಿಗೆ ಹೊಡೆಯತೊಡಗಿದ್ದಾರೆ. ಹುಡುಗನಿಗೂ ರೌಡಿಗಳು ಹಿಗ್ಗಾಮುಗ್ಗಾ ಹೊಡೆಯಲಾರಂಭಿಸಿದ್ದಾರೆ. ಆಗ ಆಕೆ ಈ ಹಲ್ಲೆಯನ್ನು ವಿರೋಧಿಸಿದ್ದಾಳೆ. ತಾನೇ ಆತನನ್ನು ಬರುವಂತೆ ಕರೆದಿದ್ದೇನೆ. ಇದು ಅನೈತಿಕ ಪ್ರಯಾಣವಲ್ಲ; ಬೆಂಗಳೂರಿನ ಪರಿಚಯ ಆತನಿಗಿರುವುದರಿಂದ ಜತೆಯಾಗಿ ಹೊರಟಿದ್ದೇನೆಂದು ಪರಿಪರಿಯಾಗಿ ಹೇಳಿದ್ದಾರೆ. ಆದರೆ “ದೆವ್ವ” ಮೈಮೇಲೆ ಬಂದಂತಿದ್ದ ಭಜರಂಗಿಗಳು ಇದ್ಯಾವುದನ್ನೂ ಕೇಳಿಲ್ಲ! ಹಿಂದೂ ಹೆಣ್ಣಿನ ರಕ್ಷಣೆಯ ಹೆಸರಲ್ಲಿ ಹಿಂದೂ ಹುಡುಗಿ ಮೈಮೇಲೆ ಕೈ ಮಾಡಿದ್ದಾರೆ. ಸಹಪಾಠಿಯ ಸಹಾಯಕ್ಕೆಂದು ಬೆಂಗಳೂರಿಗೆ ಹೊರಟ್ಟಿದ್ದ “ತಪ್ಪಿಗೆ” ಅಸ್ವಿದ್‌ಗೆ ಭಜರಂಗಿಗಳು ಚೂರಿಯಿಂದ ಕಂಡಕಂಡಲ್ಲಿ ಇರಿದಿದ್ದಾರೆ.

ಅಸ್ವಿದ್ ಹಲ್ಲೆಯಿಂದ ಜರ್ಜರಿತನಾಗಿ ಆಸ್ಪತ್ರೆ ಪಾಲಾಗಿದ್ದಾನೆ. ಹುಡುಗಿ ಇದ್ದದ್ದು ಇದ್ದಂತೆ ಪೊಲೀಸ್ ಕಂಪ್ಲೇಟು ಕೊಟಿದ್ದಾಳೆ. ಹಲ್ಲೆಕೋರ ಭಜರಂಗಿಗಳಲು “ಹಿಂದೂ ಹೀರೊ” ಇಮೇಜಿಗಾಗಿ ತಾವು ಹಿಂದೂ ಹುಡುಗಿ-ಸಾಬರ ಹುಡುಗನ ಮಾನ-ಪ್ರಾಣಕ್ಕೆ ಹಿಂಸೆ ಕೊಡುವುದನ್ನು, ಬೈದು ಕೇಕೆ ಹಾಕುವುದನ್ನು ವೀಡಿಯೋ ಮಾಡಿ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲಿಗೆ ಅಮಾಯಕ ಹಿಂದೂ ಹುಡುಗಿಯ ಮಾನ ಹರಾಜು ಹಾಕಿದ ಕಿರಾತಕರ ಅಸಲಿ ಉದ್ದೇಶವೂ ಜಗಜ್ಜಾಹೀರಾಗಿದೆ! ಹಿಂದೂ ಹೆಣ್ಣಿನ ರಕ್ಷಣೆ-ಧರ್ಮ ರಕ್ಷಣೆ ಹೆಸರಲ್ಲಿ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡುವ ಮತ್ತು ಅವರ ಚಾರಿತ್ರ್ಯವಧೆ ಮಾಡುವ ಪುಂಡರ ಉದ್ದೇಶ, ಸಂಘ ಪರಿವಾರದ ದೊರೆಗಳನ್ನು ಸಂಪ್ರೀತಗೊಳಿಸಿ ರಾಜಕೀಯ ಸ್ಥಾನಮಾನ ಅಥವಾ ಆರ್ಥಿಕ ಲಾಭ ಗಿಟ್ಟಿಸುವುದೇ ಹೊರತು ಹಿಂದೂ ಹುಡುಗಿಯರನ್ನು ಅಥವಾ ಧರ್ಮವನ್ನು ಕಾಪಾಡುವುದಲ್ಲ ಎಂಬುದು ಜನರಿಗೀಗ ಖಾತ್ರಿಯಾಗಿ ಹೋಗಿದೆ.

ಈ ಅನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಬಂಧಿಸಿರುವ ನಾಲ್ವರ “ಮಹಿಮೆ” ನೋಡಿದರೆ ಸಂಘ ಪರಿವಾರದ ರಿಂಗ್‌ಮಾಸ್ಟರ್‌ಗಳು ಹಿಂದುತ್ವ ಪ್ರಚಾರಕ್ಕೆ ಕ್ರಿಮಿನಲ್ ಪಾತಕಿಗಳನ್ನು ಬಳಸುತ್ತಿರುವುದು ನಿಸ್ಸಂಶಯವಾಗಿ ಸಾಬೀತಾಗುತ್ತದೆ. ಬಂಧಿಸಲಾಗಿರುವ ಅತ್ತಾವರ ಬಾಬುಗುಡ್ಡೆಯ ಬಾಲಚಂದ್ರ(28) ಕಂದಕದ ಧನುಷ್ ಭಂಡಾರಿ(25), ಶಕ್ತಿನಗರದ ಜಯಪ್ರಕಾಶ್(27) ಮತ್ತು ಉರ್ವದ ಅನಿಲ್‌ಕುಮಾರ್(38) ನಾಲ್ವರೂ ಕ್ರಿಮಿನಲ್ ಹಿನ್ನೆಲೆಯವರು. ಹಲವು ಪಾತಕದಲ್ಲಿ ಭಾಗಿಯಾಗಿರುವ ಈ ನಾಲ್ವರ ಮೇಲೆ ಒಂದಲ್ಲ; ಎರಡೆರಡು ಮತ್ತು ಮೂರುಮೂರು ಕೇಸುಗಳಿವೆ! ಇವರೆಲ್ಲರ ಮೇಲೆ ಕೊಲೆ ಯತ್ನ ಮತ್ತು ಹಲ್ಲೆ ಕೇಸು ಜಡಿಯಲಾಗಿದೆಯಾದರೂ, ಆಳುವ ಪಕ್ಷದ ಸಂಸದ, ಶಾಸಕ, ಮಂತ್ರಿಗಳ ಕೃಪಾಕಟಾಕ್ಷ ಭಜರಂಗಿಗಳಿಗೆ ಇರುವುದರಿಂದ ಕೇಸು ಹಳ್ಳ ಹಿಡಿಯುವುದು ಖಂಡಿತ ಎಂದು ಮಂಗಳೂರಿನಲ್ಲೀಗ ಚರ್ಚೆಯೂ ನಡೆದಿದೆ!

ಮಂಗಳೂರಿಗೆ ಮುಂದೆ ಇನ್ನೂ ಅದೆಂಥ ಕೇಡು ಕಾದಿದೆಯೋ?!


ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...