Homeಕರ್ನಾಟಕಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

ಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಹೇಳಿಕೇಳಿ ಸಂಘಪರಿವಾರದ ಪುಂಡ-ಪೋಕರಿಗಳ ಆಡಂಬೋಲ. ಹಿಂದುತ್ವದ ಪ್ರಯೋಗ ಶಾಲೆಯೆಂಬ ಭೀಭತ್ಸ ’ಅಡ್ಡ’ ಹೆಸರು ದಕ್ಷಿಣ ಕನ್ನಡಕ್ಕೆ ಬಿದ್ದು ಅದ್ಯಾವುದೋ ಕಾಲವಾಗಿ ಹೋಗಿದೆ! ಕೊರೊನಾದ ಆತಂಕದಿಂದ ಒಂಚೂರು ಹಿಮ್ಮೆಟ್ಟಿದ್ದ ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿ ಈಗ ಮತ್ತೆ ಬಾಲ ಬಿಚ್ಚಿದೆ. ಸಂಘ ಪರಿವಾರದ ಸರದಾರರು ರೋಡ್ ರೌಡಿಗಳು, ಭೂಗತ ಪಾತಕಿಗಳು, ಬೀದಿ ಕಾಮಣ್ಣರು ಮತ್ತು ಕ್ರಿಮಿನಲ್ ಪುಂಡರಿಗೆ ಹಿಂದುತ್ವ ದೀಕ್ಷೆಕೊಟ್ಟು ಧರ್ಮಕಾರಣದ ಹಿಡನ್ ಅಜೆಂಡಾ ಈಡೇರಿಸಿಕೊಳ್ಳಲು ಹವಣಿಸುತ್ತಿದ್ದಾರೆಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಮಡುಗಟ್ಟಿದೆ.

ಈ ಹಿಂದುತ್ವದ ಯಜ್ಞಕ್ಕೆ ಗೋಪ್ರಾಣ ಮತ್ತು ಹಿಂದೂ ಹೆಣ್ಣಿನ ಮಾನವೇ ಹವಿಸ್ಸು! ಮುಸ್ಲಿಮ್ ಹುಡುಗ ಮತ್ತು ಹಿಂದೂ ಹುಡುಗಿ ಸಹಪಾಠಿಗಳೆಂಬ ನೈತಿಕ ನೆಲೆಯಲ್ಲಿ ಒಡನಾಡಿದರೂ ಸಾಕು, ಧರ್ಮ “ದಂಡ” ಎತ್ತಿಕೊಂಡು ಅಟ್ಟಾಡಿಸಿ-ಅವಮಾನಿಸಿ ದಾಳಿ ಮಾಡುವ ಸಂಘಪರಿವಾರದ ತರಹೇವಾರಿ ತಂಡಗಳ ಹಾವಳಿ ಈಗಿತ್ತಲಾಗಿ ಮಿತಿಮೀರುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಕೇಸರಿ ಸರ್ಕಾರವೇ ಇರುವುದು ಪರಿವಾರದ ಹಲ್ಲೆಕೋರರ ಹಾರಾಟವನ್ನು ಹೆಚ್ಚಿಸಿಬಿಟ್ಟಿದೆ. ಕಳೆದ ಕೆಲವು ದಿನಗಳಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವೆಡೆ ಹಿಂದೂ ರಕ್ಷಕ ಮುಖವಾಡದಲ್ಲಿ ಪಕ್ಕ ರೌಡಿಗಳು ಅನೈತಿಕ ಪೊಲೀಸ್‌ಗಿರಿಯನ್ನು ನಿರಂತಕವಾಗಿ ಪ್ರದರ್ಶಿಸುತ್ತಿದ್ದಾರೆ.

ಲವ್ ಜಿಹಾದ್‌ನಿಂದ ಹಿಂದೂ ಹೆಣ್ಣುಮಕ್ಕಳನ್ನು ಸಂರಕ್ಷಿಸುವ ಹುಸಿ ಪೋಸು ಕೊಡುತ್ತ ಪೂರ್ವಾಪರ ಯೋಚಿಸಿದೆ ಅಮಾಯಕ ಹಿಂದೂ ಹುಡುಗಿಯರನ್ನು ಸಾರ್ವಜನಿಕವಾಗಿ ಅಡ್ಡಹಾಕಿ ಅಶ್ಲೀಲವಾಗಿ ನಿಂದಿಸಿ, ದೈಹಿಕ ಕುಚೇಷ್ಟೆ ಮತ್ತು ಹಲ್ಲೆ ಮಾಡಿ ಮಾನ ಹರಾಜು ಹಾಕುವ ’ಧರ್ಮಕಾರ್ಯ ದಕ್ಷಿಣ ಕನ್ನಡದಲ್ಲಿ ಜೋರಾಗಿದೆ. ಕಳೆದೆರಡು ತಿಂಗಳಲ್ಲಿ ಮಂಗಳೂರಿನ ಬೀಚು, ಪಾರ್ಕುಗಳಲ್ಲಿ ಅನ್ಯಧರ್ಮೀಯ ಹುಡುಗ-ಹುಡುಗಿಯರ ಚಾರಿತ್ರ್ಯವಧೆ-ಹಲ್ಲೆ ನಡೆದುಹೋಗಿದೆ. ನೈತಿಕತೆ ಹೆಸರಲ್ಲಿ ಈ ಪಡೆಗಳು ಕಾನೂನು ಕೈಗೆತ್ತಿಕೊಂಡ ಪ್ರಕರಣ ಕಳೆದ ವಾರ ಸುರತ್ಕಲ್ ಮತ್ತು ಬೆಳ್ತಂಗಡಿಯಲ್ಲಾಗಿದೆ. ದೇಶವನ್ನು ಕಾಡುತ್ತಿರುವ ಆರ್ಥಿಕ ಹಿಂಜರಿತ ಮತ್ತು ಕೊರೊನಾ ಆರ್ಭಟದಿಂದ ಮಂಗಳೂರಿನ ವ್ಯಾಪಾರ-ವಹಿವಾಟಿಗೆ ದೊಡ್ಡ ಹೊಡೆತ ಬಿದ್ದಿರುವ ಈ ಕಾಲಘಟ್ಟದಲ್ಲಿ ಅನೈತಿಕ ಪೊಲೀಸ್‌ಗಿರಿ ಭುಗಿಲೇಳುತ್ತಿರುವುದು ಜನರನ್ನು ಕಂಗಾಲಾಗಿಸಿಬಿಟ್ಟಿದೆ.

ಈ ಹಿಂದೆಯೂ ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿಯಿಂದ ದಕ್ಷಿಣ ಕನ್ನಡದ ಆರ್ಥಿಕ ವಲಯ ಘಾಸಿಗೊಂಡಿತ್ತು; ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಮಂಗಳೂರು ಮತ್ತು ದಕ್ಷಿಣ ಕನ್ನಡದ ಇನ್ನಿತರ ಪಟ್ಟಣಗಳಿಗೆ ಬರಲು ಉದ್ಯಮಿಗಳು ಬಂಡವಾಳಗಾರರು, ವರ್ತಕರು ಹಾಗೂ ಗ್ರಾಹಕರು ಹೆದರುತ್ತಿದ್ದರು. ಆ ಕಳಂಕದಿಂದ ಹೊರಬರುತ್ತಿರುವ ಹೊತ್ತಲ್ಲೇ ಮಂಗಳೂರು ಮತ್ತದರ ಸುತ್ತಮುತ್ತ ಅನೈತಿಕ ಪೊಲೀಸ್‌ಗಿರಿ ಪ್ರವರ ಪ್ರಾರಂಭವಾಗಿರುವುದು ಸ್ಥಳೀಯ ಆರ್ಥಿಕತೆಯನ್ನೂ ಬುಡಮೇಲಾಗಿಸುತ್ತಿದೆ. ಕಳೆದ ಗುರುವಾರ (ಏಪ್ರಿಲ್ 1, 2021) ರಾತ್ರಿ ಅಸ್ವಿದ್ ಅನ್ವರ್ ಮುಹಮ್ಮದ್ ಎಂಬ 24 ವರ್ಷದ ಸಾಬರ ಪೋರ ಮತ್ತಾತನ ಹಿಂದೂ ಸಹಪಾಠಿಯಾದ ಕೊಂಕಣಿ ಹುಡುಗಿಯ ಮೇಲೆ ಭಜರಂಗಿಗಳು ಮಾರಣಾಂತಿಕ ದಾಳಿ ಮಾಡಿ ಸುಖಾಸುಮ್ಮನೆ ಅವರ ಮಾನ ಬೀದಿಪಾಲು ಮಾಡಲು ಹವಣಿಸಿದ್ದಾರೆ.

ಅಸ್ವಿದ್ ಮತ್ತು ಆ ಕೊಂಕಣಿ ಹುಡುಗಿ ಕ್ಲಾಸ್‌ಮೇಟ್‌ಗಳು. ಇತ್ತೀಚೆಗಷ್ಟೆ ಡಿಗ್ರಿ ಮುಗಿಸಿದ್ದ ಈ ಸಹಪಾಠಿಗಳು ಉದ್ಯೋಗ ಹುಡುಕುತ್ತಿದ್ದರು. ಹುಡುಗಿಗೆ ಬೆಂಗಳೂರಿನ ಕಂಪನಿಯೊಂದು ಸಂದರ್ಶನಕ್ಕೆ ಕರೆದಿತ್ತು. ಬೆಂಗಳೂರು ಅಷ್ಟಾಗಿ ಪರಿಚಯವಿಲ್ಲದ ಆಕೆ ಆ ಮಾಯಾನಗರಿಯ ಬಗ್ಗೆ ಗೊತ್ತಿದ್ದ ಅಸ್ವಿದ್‌ನನ್ನು ತನ್ನೊಂದಿಗೆ ಬರುವಂತೆ ಹೇಳಿದ್ದಳು. ಗುರುವಾರ ರಾತ್ರಿ ಬೆಂಗಳೂರಿಗೆ ಹೋಗಲೆಂದು ಖಾಸಗಿ ಬಸ್ ಹತ್ತಿದ್ದರು. ಬಸ್ಸು ಪಂಪ್‌ವೆಲ್ ಬಳಿ ಬರುತ್ತಿದ್ದಂತೆ ಹಲವು ಕ್ರಿಮಿನಲ್ ಕೇಸ್‌ಗಳಲ್ಲಿ ಆರೋಪಿಗಳಾದ ಆರೆಂಟು ಮಂದಿ ಅಡ್ಡಗಟ್ಟಿದ್ದಾರೆ. ತಮ್ಮ ಸಂಬಂಧಿ ಪ್ರಯಾಣಿಕರೊಬ್ಬರಿಗೆ ಹುಷಾರಿಲ್ಲ; ಅವರನ್ನು ಉಪಚರಿಸಬೇಕಿದೆ ಎಂದು ಹೇಳಿ ಬಸ್ಸಿಗೆ ನುಗ್ಗಿದ್ದಾರೆ.

ಬಸ್‌ನಲ್ಲಿ ಅಸ್ವಿದ್ ಮತ್ತಾತನ ಕ್ಲಾಸ್‌ಮೇಟ್ ಹುಡುಗಿಯನ್ನು ದರದರನೆ ಎಳೆದು ಕೆಳಗೆ ಇಳಿಸಿದ್ದಾರೆ. ಹಿಂದೆ ಮುಂದೆ ನೋಡದೆ ಧರ್ಮೋನ್ಮಾದದ ವಿಚಾರಣೆ ನಡೆಸಿದ್ದಾರೆ. ಹೀಗೆ ಸಾಬರ ಹುಡುಗನ ಜತೆ ಹೋಗುವುದು ಧರ್ಮ ವಿರೋಧಿ ಎಂದೆನ್ನುತ್ತ ಹಿಂದೂ ಹುಡುಗಿಗೆ ಹೊಡೆಯತೊಡಗಿದ್ದಾರೆ. ಹುಡುಗನಿಗೂ ರೌಡಿಗಳು ಹಿಗ್ಗಾಮುಗ್ಗಾ ಹೊಡೆಯಲಾರಂಭಿಸಿದ್ದಾರೆ. ಆಗ ಆಕೆ ಈ ಹಲ್ಲೆಯನ್ನು ವಿರೋಧಿಸಿದ್ದಾಳೆ. ತಾನೇ ಆತನನ್ನು ಬರುವಂತೆ ಕರೆದಿದ್ದೇನೆ. ಇದು ಅನೈತಿಕ ಪ್ರಯಾಣವಲ್ಲ; ಬೆಂಗಳೂರಿನ ಪರಿಚಯ ಆತನಿಗಿರುವುದರಿಂದ ಜತೆಯಾಗಿ ಹೊರಟಿದ್ದೇನೆಂದು ಪರಿಪರಿಯಾಗಿ ಹೇಳಿದ್ದಾರೆ. ಆದರೆ “ದೆವ್ವ” ಮೈಮೇಲೆ ಬಂದಂತಿದ್ದ ಭಜರಂಗಿಗಳು ಇದ್ಯಾವುದನ್ನೂ ಕೇಳಿಲ್ಲ! ಹಿಂದೂ ಹೆಣ್ಣಿನ ರಕ್ಷಣೆಯ ಹೆಸರಲ್ಲಿ ಹಿಂದೂ ಹುಡುಗಿ ಮೈಮೇಲೆ ಕೈ ಮಾಡಿದ್ದಾರೆ. ಸಹಪಾಠಿಯ ಸಹಾಯಕ್ಕೆಂದು ಬೆಂಗಳೂರಿಗೆ ಹೊರಟ್ಟಿದ್ದ “ತಪ್ಪಿಗೆ” ಅಸ್ವಿದ್‌ಗೆ ಭಜರಂಗಿಗಳು ಚೂರಿಯಿಂದ ಕಂಡಕಂಡಲ್ಲಿ ಇರಿದಿದ್ದಾರೆ.

ಅಸ್ವಿದ್ ಹಲ್ಲೆಯಿಂದ ಜರ್ಜರಿತನಾಗಿ ಆಸ್ಪತ್ರೆ ಪಾಲಾಗಿದ್ದಾನೆ. ಹುಡುಗಿ ಇದ್ದದ್ದು ಇದ್ದಂತೆ ಪೊಲೀಸ್ ಕಂಪ್ಲೇಟು ಕೊಟಿದ್ದಾಳೆ. ಹಲ್ಲೆಕೋರ ಭಜರಂಗಿಗಳಲು “ಹಿಂದೂ ಹೀರೊ” ಇಮೇಜಿಗಾಗಿ ತಾವು ಹಿಂದೂ ಹುಡುಗಿ-ಸಾಬರ ಹುಡುಗನ ಮಾನ-ಪ್ರಾಣಕ್ಕೆ ಹಿಂಸೆ ಕೊಡುವುದನ್ನು, ಬೈದು ಕೇಕೆ ಹಾಕುವುದನ್ನು ವೀಡಿಯೋ ಮಾಡಿ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲಿಗೆ ಅಮಾಯಕ ಹಿಂದೂ ಹುಡುಗಿಯ ಮಾನ ಹರಾಜು ಹಾಕಿದ ಕಿರಾತಕರ ಅಸಲಿ ಉದ್ದೇಶವೂ ಜಗಜ್ಜಾಹೀರಾಗಿದೆ! ಹಿಂದೂ ಹೆಣ್ಣಿನ ರಕ್ಷಣೆ-ಧರ್ಮ ರಕ್ಷಣೆ ಹೆಸರಲ್ಲಿ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡುವ ಮತ್ತು ಅವರ ಚಾರಿತ್ರ್ಯವಧೆ ಮಾಡುವ ಪುಂಡರ ಉದ್ದೇಶ, ಸಂಘ ಪರಿವಾರದ ದೊರೆಗಳನ್ನು ಸಂಪ್ರೀತಗೊಳಿಸಿ ರಾಜಕೀಯ ಸ್ಥಾನಮಾನ ಅಥವಾ ಆರ್ಥಿಕ ಲಾಭ ಗಿಟ್ಟಿಸುವುದೇ ಹೊರತು ಹಿಂದೂ ಹುಡುಗಿಯರನ್ನು ಅಥವಾ ಧರ್ಮವನ್ನು ಕಾಪಾಡುವುದಲ್ಲ ಎಂಬುದು ಜನರಿಗೀಗ ಖಾತ್ರಿಯಾಗಿ ಹೋಗಿದೆ.

ಈ ಅನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಬಂಧಿಸಿರುವ ನಾಲ್ವರ “ಮಹಿಮೆ” ನೋಡಿದರೆ ಸಂಘ ಪರಿವಾರದ ರಿಂಗ್‌ಮಾಸ್ಟರ್‌ಗಳು ಹಿಂದುತ್ವ ಪ್ರಚಾರಕ್ಕೆ ಕ್ರಿಮಿನಲ್ ಪಾತಕಿಗಳನ್ನು ಬಳಸುತ್ತಿರುವುದು ನಿಸ್ಸಂಶಯವಾಗಿ ಸಾಬೀತಾಗುತ್ತದೆ. ಬಂಧಿಸಲಾಗಿರುವ ಅತ್ತಾವರ ಬಾಬುಗುಡ್ಡೆಯ ಬಾಲಚಂದ್ರ(28) ಕಂದಕದ ಧನುಷ್ ಭಂಡಾರಿ(25), ಶಕ್ತಿನಗರದ ಜಯಪ್ರಕಾಶ್(27) ಮತ್ತು ಉರ್ವದ ಅನಿಲ್‌ಕುಮಾರ್(38) ನಾಲ್ವರೂ ಕ್ರಿಮಿನಲ್ ಹಿನ್ನೆಲೆಯವರು. ಹಲವು ಪಾತಕದಲ್ಲಿ ಭಾಗಿಯಾಗಿರುವ ಈ ನಾಲ್ವರ ಮೇಲೆ ಒಂದಲ್ಲ; ಎರಡೆರಡು ಮತ್ತು ಮೂರುಮೂರು ಕೇಸುಗಳಿವೆ! ಇವರೆಲ್ಲರ ಮೇಲೆ ಕೊಲೆ ಯತ್ನ ಮತ್ತು ಹಲ್ಲೆ ಕೇಸು ಜಡಿಯಲಾಗಿದೆಯಾದರೂ, ಆಳುವ ಪಕ್ಷದ ಸಂಸದ, ಶಾಸಕ, ಮಂತ್ರಿಗಳ ಕೃಪಾಕಟಾಕ್ಷ ಭಜರಂಗಿಗಳಿಗೆ ಇರುವುದರಿಂದ ಕೇಸು ಹಳ್ಳ ಹಿಡಿಯುವುದು ಖಂಡಿತ ಎಂದು ಮಂಗಳೂರಿನಲ್ಲೀಗ ಚರ್ಚೆಯೂ ನಡೆದಿದೆ!

ಮಂಗಳೂರಿಗೆ ಮುಂದೆ ಇನ್ನೂ ಅದೆಂಥ ಕೇಡು ಕಾದಿದೆಯೋ?!


ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...