Homeಕರ್ನಾಟಕಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

ಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಹೇಳಿಕೇಳಿ ಸಂಘಪರಿವಾರದ ಪುಂಡ-ಪೋಕರಿಗಳ ಆಡಂಬೋಲ. ಹಿಂದುತ್ವದ ಪ್ರಯೋಗ ಶಾಲೆಯೆಂಬ ಭೀಭತ್ಸ ’ಅಡ್ಡ’ ಹೆಸರು ದಕ್ಷಿಣ ಕನ್ನಡಕ್ಕೆ ಬಿದ್ದು ಅದ್ಯಾವುದೋ ಕಾಲವಾಗಿ ಹೋಗಿದೆ! ಕೊರೊನಾದ ಆತಂಕದಿಂದ ಒಂಚೂರು ಹಿಮ್ಮೆಟ್ಟಿದ್ದ ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿ ಈಗ ಮತ್ತೆ ಬಾಲ ಬಿಚ್ಚಿದೆ. ಸಂಘ ಪರಿವಾರದ ಸರದಾರರು ರೋಡ್ ರೌಡಿಗಳು, ಭೂಗತ ಪಾತಕಿಗಳು, ಬೀದಿ ಕಾಮಣ್ಣರು ಮತ್ತು ಕ್ರಿಮಿನಲ್ ಪುಂಡರಿಗೆ ಹಿಂದುತ್ವ ದೀಕ್ಷೆಕೊಟ್ಟು ಧರ್ಮಕಾರಣದ ಹಿಡನ್ ಅಜೆಂಡಾ ಈಡೇರಿಸಿಕೊಳ್ಳಲು ಹವಣಿಸುತ್ತಿದ್ದಾರೆಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಮಡುಗಟ್ಟಿದೆ.

ಈ ಹಿಂದುತ್ವದ ಯಜ್ಞಕ್ಕೆ ಗೋಪ್ರಾಣ ಮತ್ತು ಹಿಂದೂ ಹೆಣ್ಣಿನ ಮಾನವೇ ಹವಿಸ್ಸು! ಮುಸ್ಲಿಮ್ ಹುಡುಗ ಮತ್ತು ಹಿಂದೂ ಹುಡುಗಿ ಸಹಪಾಠಿಗಳೆಂಬ ನೈತಿಕ ನೆಲೆಯಲ್ಲಿ ಒಡನಾಡಿದರೂ ಸಾಕು, ಧರ್ಮ “ದಂಡ” ಎತ್ತಿಕೊಂಡು ಅಟ್ಟಾಡಿಸಿ-ಅವಮಾನಿಸಿ ದಾಳಿ ಮಾಡುವ ಸಂಘಪರಿವಾರದ ತರಹೇವಾರಿ ತಂಡಗಳ ಹಾವಳಿ ಈಗಿತ್ತಲಾಗಿ ಮಿತಿಮೀರುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಕೇಸರಿ ಸರ್ಕಾರವೇ ಇರುವುದು ಪರಿವಾರದ ಹಲ್ಲೆಕೋರರ ಹಾರಾಟವನ್ನು ಹೆಚ್ಚಿಸಿಬಿಟ್ಟಿದೆ. ಕಳೆದ ಕೆಲವು ದಿನಗಳಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವೆಡೆ ಹಿಂದೂ ರಕ್ಷಕ ಮುಖವಾಡದಲ್ಲಿ ಪಕ್ಕ ರೌಡಿಗಳು ಅನೈತಿಕ ಪೊಲೀಸ್‌ಗಿರಿಯನ್ನು ನಿರಂತಕವಾಗಿ ಪ್ರದರ್ಶಿಸುತ್ತಿದ್ದಾರೆ.

ಲವ್ ಜಿಹಾದ್‌ನಿಂದ ಹಿಂದೂ ಹೆಣ್ಣುಮಕ್ಕಳನ್ನು ಸಂರಕ್ಷಿಸುವ ಹುಸಿ ಪೋಸು ಕೊಡುತ್ತ ಪೂರ್ವಾಪರ ಯೋಚಿಸಿದೆ ಅಮಾಯಕ ಹಿಂದೂ ಹುಡುಗಿಯರನ್ನು ಸಾರ್ವಜನಿಕವಾಗಿ ಅಡ್ಡಹಾಕಿ ಅಶ್ಲೀಲವಾಗಿ ನಿಂದಿಸಿ, ದೈಹಿಕ ಕುಚೇಷ್ಟೆ ಮತ್ತು ಹಲ್ಲೆ ಮಾಡಿ ಮಾನ ಹರಾಜು ಹಾಕುವ ’ಧರ್ಮಕಾರ್ಯ ದಕ್ಷಿಣ ಕನ್ನಡದಲ್ಲಿ ಜೋರಾಗಿದೆ. ಕಳೆದೆರಡು ತಿಂಗಳಲ್ಲಿ ಮಂಗಳೂರಿನ ಬೀಚು, ಪಾರ್ಕುಗಳಲ್ಲಿ ಅನ್ಯಧರ್ಮೀಯ ಹುಡುಗ-ಹುಡುಗಿಯರ ಚಾರಿತ್ರ್ಯವಧೆ-ಹಲ್ಲೆ ನಡೆದುಹೋಗಿದೆ. ನೈತಿಕತೆ ಹೆಸರಲ್ಲಿ ಈ ಪಡೆಗಳು ಕಾನೂನು ಕೈಗೆತ್ತಿಕೊಂಡ ಪ್ರಕರಣ ಕಳೆದ ವಾರ ಸುರತ್ಕಲ್ ಮತ್ತು ಬೆಳ್ತಂಗಡಿಯಲ್ಲಾಗಿದೆ. ದೇಶವನ್ನು ಕಾಡುತ್ತಿರುವ ಆರ್ಥಿಕ ಹಿಂಜರಿತ ಮತ್ತು ಕೊರೊನಾ ಆರ್ಭಟದಿಂದ ಮಂಗಳೂರಿನ ವ್ಯಾಪಾರ-ವಹಿವಾಟಿಗೆ ದೊಡ್ಡ ಹೊಡೆತ ಬಿದ್ದಿರುವ ಈ ಕಾಲಘಟ್ಟದಲ್ಲಿ ಅನೈತಿಕ ಪೊಲೀಸ್‌ಗಿರಿ ಭುಗಿಲೇಳುತ್ತಿರುವುದು ಜನರನ್ನು ಕಂಗಾಲಾಗಿಸಿಬಿಟ್ಟಿದೆ.

ಈ ಹಿಂದೆಯೂ ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿಯಿಂದ ದಕ್ಷಿಣ ಕನ್ನಡದ ಆರ್ಥಿಕ ವಲಯ ಘಾಸಿಗೊಂಡಿತ್ತು; ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಮಂಗಳೂರು ಮತ್ತು ದಕ್ಷಿಣ ಕನ್ನಡದ ಇನ್ನಿತರ ಪಟ್ಟಣಗಳಿಗೆ ಬರಲು ಉದ್ಯಮಿಗಳು ಬಂಡವಾಳಗಾರರು, ವರ್ತಕರು ಹಾಗೂ ಗ್ರಾಹಕರು ಹೆದರುತ್ತಿದ್ದರು. ಆ ಕಳಂಕದಿಂದ ಹೊರಬರುತ್ತಿರುವ ಹೊತ್ತಲ್ಲೇ ಮಂಗಳೂರು ಮತ್ತದರ ಸುತ್ತಮುತ್ತ ಅನೈತಿಕ ಪೊಲೀಸ್‌ಗಿರಿ ಪ್ರವರ ಪ್ರಾರಂಭವಾಗಿರುವುದು ಸ್ಥಳೀಯ ಆರ್ಥಿಕತೆಯನ್ನೂ ಬುಡಮೇಲಾಗಿಸುತ್ತಿದೆ. ಕಳೆದ ಗುರುವಾರ (ಏಪ್ರಿಲ್ 1, 2021) ರಾತ್ರಿ ಅಸ್ವಿದ್ ಅನ್ವರ್ ಮುಹಮ್ಮದ್ ಎಂಬ 24 ವರ್ಷದ ಸಾಬರ ಪೋರ ಮತ್ತಾತನ ಹಿಂದೂ ಸಹಪಾಠಿಯಾದ ಕೊಂಕಣಿ ಹುಡುಗಿಯ ಮೇಲೆ ಭಜರಂಗಿಗಳು ಮಾರಣಾಂತಿಕ ದಾಳಿ ಮಾಡಿ ಸುಖಾಸುಮ್ಮನೆ ಅವರ ಮಾನ ಬೀದಿಪಾಲು ಮಾಡಲು ಹವಣಿಸಿದ್ದಾರೆ.

ಅಸ್ವಿದ್ ಮತ್ತು ಆ ಕೊಂಕಣಿ ಹುಡುಗಿ ಕ್ಲಾಸ್‌ಮೇಟ್‌ಗಳು. ಇತ್ತೀಚೆಗಷ್ಟೆ ಡಿಗ್ರಿ ಮುಗಿಸಿದ್ದ ಈ ಸಹಪಾಠಿಗಳು ಉದ್ಯೋಗ ಹುಡುಕುತ್ತಿದ್ದರು. ಹುಡುಗಿಗೆ ಬೆಂಗಳೂರಿನ ಕಂಪನಿಯೊಂದು ಸಂದರ್ಶನಕ್ಕೆ ಕರೆದಿತ್ತು. ಬೆಂಗಳೂರು ಅಷ್ಟಾಗಿ ಪರಿಚಯವಿಲ್ಲದ ಆಕೆ ಆ ಮಾಯಾನಗರಿಯ ಬಗ್ಗೆ ಗೊತ್ತಿದ್ದ ಅಸ್ವಿದ್‌ನನ್ನು ತನ್ನೊಂದಿಗೆ ಬರುವಂತೆ ಹೇಳಿದ್ದಳು. ಗುರುವಾರ ರಾತ್ರಿ ಬೆಂಗಳೂರಿಗೆ ಹೋಗಲೆಂದು ಖಾಸಗಿ ಬಸ್ ಹತ್ತಿದ್ದರು. ಬಸ್ಸು ಪಂಪ್‌ವೆಲ್ ಬಳಿ ಬರುತ್ತಿದ್ದಂತೆ ಹಲವು ಕ್ರಿಮಿನಲ್ ಕೇಸ್‌ಗಳಲ್ಲಿ ಆರೋಪಿಗಳಾದ ಆರೆಂಟು ಮಂದಿ ಅಡ್ಡಗಟ್ಟಿದ್ದಾರೆ. ತಮ್ಮ ಸಂಬಂಧಿ ಪ್ರಯಾಣಿಕರೊಬ್ಬರಿಗೆ ಹುಷಾರಿಲ್ಲ; ಅವರನ್ನು ಉಪಚರಿಸಬೇಕಿದೆ ಎಂದು ಹೇಳಿ ಬಸ್ಸಿಗೆ ನುಗ್ಗಿದ್ದಾರೆ.

ಬಸ್‌ನಲ್ಲಿ ಅಸ್ವಿದ್ ಮತ್ತಾತನ ಕ್ಲಾಸ್‌ಮೇಟ್ ಹುಡುಗಿಯನ್ನು ದರದರನೆ ಎಳೆದು ಕೆಳಗೆ ಇಳಿಸಿದ್ದಾರೆ. ಹಿಂದೆ ಮುಂದೆ ನೋಡದೆ ಧರ್ಮೋನ್ಮಾದದ ವಿಚಾರಣೆ ನಡೆಸಿದ್ದಾರೆ. ಹೀಗೆ ಸಾಬರ ಹುಡುಗನ ಜತೆ ಹೋಗುವುದು ಧರ್ಮ ವಿರೋಧಿ ಎಂದೆನ್ನುತ್ತ ಹಿಂದೂ ಹುಡುಗಿಗೆ ಹೊಡೆಯತೊಡಗಿದ್ದಾರೆ. ಹುಡುಗನಿಗೂ ರೌಡಿಗಳು ಹಿಗ್ಗಾಮುಗ್ಗಾ ಹೊಡೆಯಲಾರಂಭಿಸಿದ್ದಾರೆ. ಆಗ ಆಕೆ ಈ ಹಲ್ಲೆಯನ್ನು ವಿರೋಧಿಸಿದ್ದಾಳೆ. ತಾನೇ ಆತನನ್ನು ಬರುವಂತೆ ಕರೆದಿದ್ದೇನೆ. ಇದು ಅನೈತಿಕ ಪ್ರಯಾಣವಲ್ಲ; ಬೆಂಗಳೂರಿನ ಪರಿಚಯ ಆತನಿಗಿರುವುದರಿಂದ ಜತೆಯಾಗಿ ಹೊರಟಿದ್ದೇನೆಂದು ಪರಿಪರಿಯಾಗಿ ಹೇಳಿದ್ದಾರೆ. ಆದರೆ “ದೆವ್ವ” ಮೈಮೇಲೆ ಬಂದಂತಿದ್ದ ಭಜರಂಗಿಗಳು ಇದ್ಯಾವುದನ್ನೂ ಕೇಳಿಲ್ಲ! ಹಿಂದೂ ಹೆಣ್ಣಿನ ರಕ್ಷಣೆಯ ಹೆಸರಲ್ಲಿ ಹಿಂದೂ ಹುಡುಗಿ ಮೈಮೇಲೆ ಕೈ ಮಾಡಿದ್ದಾರೆ. ಸಹಪಾಠಿಯ ಸಹಾಯಕ್ಕೆಂದು ಬೆಂಗಳೂರಿಗೆ ಹೊರಟ್ಟಿದ್ದ “ತಪ್ಪಿಗೆ” ಅಸ್ವಿದ್‌ಗೆ ಭಜರಂಗಿಗಳು ಚೂರಿಯಿಂದ ಕಂಡಕಂಡಲ್ಲಿ ಇರಿದಿದ್ದಾರೆ.

ಅಸ್ವಿದ್ ಹಲ್ಲೆಯಿಂದ ಜರ್ಜರಿತನಾಗಿ ಆಸ್ಪತ್ರೆ ಪಾಲಾಗಿದ್ದಾನೆ. ಹುಡುಗಿ ಇದ್ದದ್ದು ಇದ್ದಂತೆ ಪೊಲೀಸ್ ಕಂಪ್ಲೇಟು ಕೊಟಿದ್ದಾಳೆ. ಹಲ್ಲೆಕೋರ ಭಜರಂಗಿಗಳಲು “ಹಿಂದೂ ಹೀರೊ” ಇಮೇಜಿಗಾಗಿ ತಾವು ಹಿಂದೂ ಹುಡುಗಿ-ಸಾಬರ ಹುಡುಗನ ಮಾನ-ಪ್ರಾಣಕ್ಕೆ ಹಿಂಸೆ ಕೊಡುವುದನ್ನು, ಬೈದು ಕೇಕೆ ಹಾಕುವುದನ್ನು ವೀಡಿಯೋ ಮಾಡಿ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲಿಗೆ ಅಮಾಯಕ ಹಿಂದೂ ಹುಡುಗಿಯ ಮಾನ ಹರಾಜು ಹಾಕಿದ ಕಿರಾತಕರ ಅಸಲಿ ಉದ್ದೇಶವೂ ಜಗಜ್ಜಾಹೀರಾಗಿದೆ! ಹಿಂದೂ ಹೆಣ್ಣಿನ ರಕ್ಷಣೆ-ಧರ್ಮ ರಕ್ಷಣೆ ಹೆಸರಲ್ಲಿ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡುವ ಮತ್ತು ಅವರ ಚಾರಿತ್ರ್ಯವಧೆ ಮಾಡುವ ಪುಂಡರ ಉದ್ದೇಶ, ಸಂಘ ಪರಿವಾರದ ದೊರೆಗಳನ್ನು ಸಂಪ್ರೀತಗೊಳಿಸಿ ರಾಜಕೀಯ ಸ್ಥಾನಮಾನ ಅಥವಾ ಆರ್ಥಿಕ ಲಾಭ ಗಿಟ್ಟಿಸುವುದೇ ಹೊರತು ಹಿಂದೂ ಹುಡುಗಿಯರನ್ನು ಅಥವಾ ಧರ್ಮವನ್ನು ಕಾಪಾಡುವುದಲ್ಲ ಎಂಬುದು ಜನರಿಗೀಗ ಖಾತ್ರಿಯಾಗಿ ಹೋಗಿದೆ.

ಈ ಅನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಬಂಧಿಸಿರುವ ನಾಲ್ವರ “ಮಹಿಮೆ” ನೋಡಿದರೆ ಸಂಘ ಪರಿವಾರದ ರಿಂಗ್‌ಮಾಸ್ಟರ್‌ಗಳು ಹಿಂದುತ್ವ ಪ್ರಚಾರಕ್ಕೆ ಕ್ರಿಮಿನಲ್ ಪಾತಕಿಗಳನ್ನು ಬಳಸುತ್ತಿರುವುದು ನಿಸ್ಸಂಶಯವಾಗಿ ಸಾಬೀತಾಗುತ್ತದೆ. ಬಂಧಿಸಲಾಗಿರುವ ಅತ್ತಾವರ ಬಾಬುಗುಡ್ಡೆಯ ಬಾಲಚಂದ್ರ(28) ಕಂದಕದ ಧನುಷ್ ಭಂಡಾರಿ(25), ಶಕ್ತಿನಗರದ ಜಯಪ್ರಕಾಶ್(27) ಮತ್ತು ಉರ್ವದ ಅನಿಲ್‌ಕುಮಾರ್(38) ನಾಲ್ವರೂ ಕ್ರಿಮಿನಲ್ ಹಿನ್ನೆಲೆಯವರು. ಹಲವು ಪಾತಕದಲ್ಲಿ ಭಾಗಿಯಾಗಿರುವ ಈ ನಾಲ್ವರ ಮೇಲೆ ಒಂದಲ್ಲ; ಎರಡೆರಡು ಮತ್ತು ಮೂರುಮೂರು ಕೇಸುಗಳಿವೆ! ಇವರೆಲ್ಲರ ಮೇಲೆ ಕೊಲೆ ಯತ್ನ ಮತ್ತು ಹಲ್ಲೆ ಕೇಸು ಜಡಿಯಲಾಗಿದೆಯಾದರೂ, ಆಳುವ ಪಕ್ಷದ ಸಂಸದ, ಶಾಸಕ, ಮಂತ್ರಿಗಳ ಕೃಪಾಕಟಾಕ್ಷ ಭಜರಂಗಿಗಳಿಗೆ ಇರುವುದರಿಂದ ಕೇಸು ಹಳ್ಳ ಹಿಡಿಯುವುದು ಖಂಡಿತ ಎಂದು ಮಂಗಳೂರಿನಲ್ಲೀಗ ಚರ್ಚೆಯೂ ನಡೆದಿದೆ!

ಮಂಗಳೂರಿಗೆ ಮುಂದೆ ಇನ್ನೂ ಅದೆಂಥ ಕೇಡು ಕಾದಿದೆಯೋ?!


ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...