Homeಕರ್ನಾಟಕಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

ಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

- Advertisement -
- Advertisement -

ಅವಿಭಜಿತ ದಕ್ಷಿಣ ಕನ್ನಡ ಹೇಳಿಕೇಳಿ ಸಂಘಪರಿವಾರದ ಪುಂಡ-ಪೋಕರಿಗಳ ಆಡಂಬೋಲ. ಹಿಂದುತ್ವದ ಪ್ರಯೋಗ ಶಾಲೆಯೆಂಬ ಭೀಭತ್ಸ ’ಅಡ್ಡ’ ಹೆಸರು ದಕ್ಷಿಣ ಕನ್ನಡಕ್ಕೆ ಬಿದ್ದು ಅದ್ಯಾವುದೋ ಕಾಲವಾಗಿ ಹೋಗಿದೆ! ಕೊರೊನಾದ ಆತಂಕದಿಂದ ಒಂಚೂರು ಹಿಮ್ಮೆಟ್ಟಿದ್ದ ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿ ಈಗ ಮತ್ತೆ ಬಾಲ ಬಿಚ್ಚಿದೆ. ಸಂಘ ಪರಿವಾರದ ಸರದಾರರು ರೋಡ್ ರೌಡಿಗಳು, ಭೂಗತ ಪಾತಕಿಗಳು, ಬೀದಿ ಕಾಮಣ್ಣರು ಮತ್ತು ಕ್ರಿಮಿನಲ್ ಪುಂಡರಿಗೆ ಹಿಂದುತ್ವ ದೀಕ್ಷೆಕೊಟ್ಟು ಧರ್ಮಕಾರಣದ ಹಿಡನ್ ಅಜೆಂಡಾ ಈಡೇರಿಸಿಕೊಳ್ಳಲು ಹವಣಿಸುತ್ತಿದ್ದಾರೆಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಮಡುಗಟ್ಟಿದೆ.

ಈ ಹಿಂದುತ್ವದ ಯಜ್ಞಕ್ಕೆ ಗೋಪ್ರಾಣ ಮತ್ತು ಹಿಂದೂ ಹೆಣ್ಣಿನ ಮಾನವೇ ಹವಿಸ್ಸು! ಮುಸ್ಲಿಮ್ ಹುಡುಗ ಮತ್ತು ಹಿಂದೂ ಹುಡುಗಿ ಸಹಪಾಠಿಗಳೆಂಬ ನೈತಿಕ ನೆಲೆಯಲ್ಲಿ ಒಡನಾಡಿದರೂ ಸಾಕು, ಧರ್ಮ “ದಂಡ” ಎತ್ತಿಕೊಂಡು ಅಟ್ಟಾಡಿಸಿ-ಅವಮಾನಿಸಿ ದಾಳಿ ಮಾಡುವ ಸಂಘಪರಿವಾರದ ತರಹೇವಾರಿ ತಂಡಗಳ ಹಾವಳಿ ಈಗಿತ್ತಲಾಗಿ ಮಿತಿಮೀರುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಕೇಸರಿ ಸರ್ಕಾರವೇ ಇರುವುದು ಪರಿವಾರದ ಹಲ್ಲೆಕೋರರ ಹಾರಾಟವನ್ನು ಹೆಚ್ಚಿಸಿಬಿಟ್ಟಿದೆ. ಕಳೆದ ಕೆಲವು ದಿನಗಳಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವೆಡೆ ಹಿಂದೂ ರಕ್ಷಕ ಮುಖವಾಡದಲ್ಲಿ ಪಕ್ಕ ರೌಡಿಗಳು ಅನೈತಿಕ ಪೊಲೀಸ್‌ಗಿರಿಯನ್ನು ನಿರಂತಕವಾಗಿ ಪ್ರದರ್ಶಿಸುತ್ತಿದ್ದಾರೆ.

ಲವ್ ಜಿಹಾದ್‌ನಿಂದ ಹಿಂದೂ ಹೆಣ್ಣುಮಕ್ಕಳನ್ನು ಸಂರಕ್ಷಿಸುವ ಹುಸಿ ಪೋಸು ಕೊಡುತ್ತ ಪೂರ್ವಾಪರ ಯೋಚಿಸಿದೆ ಅಮಾಯಕ ಹಿಂದೂ ಹುಡುಗಿಯರನ್ನು ಸಾರ್ವಜನಿಕವಾಗಿ ಅಡ್ಡಹಾಕಿ ಅಶ್ಲೀಲವಾಗಿ ನಿಂದಿಸಿ, ದೈಹಿಕ ಕುಚೇಷ್ಟೆ ಮತ್ತು ಹಲ್ಲೆ ಮಾಡಿ ಮಾನ ಹರಾಜು ಹಾಕುವ ’ಧರ್ಮಕಾರ್ಯ ದಕ್ಷಿಣ ಕನ್ನಡದಲ್ಲಿ ಜೋರಾಗಿದೆ. ಕಳೆದೆರಡು ತಿಂಗಳಲ್ಲಿ ಮಂಗಳೂರಿನ ಬೀಚು, ಪಾರ್ಕುಗಳಲ್ಲಿ ಅನ್ಯಧರ್ಮೀಯ ಹುಡುಗ-ಹುಡುಗಿಯರ ಚಾರಿತ್ರ್ಯವಧೆ-ಹಲ್ಲೆ ನಡೆದುಹೋಗಿದೆ. ನೈತಿಕತೆ ಹೆಸರಲ್ಲಿ ಈ ಪಡೆಗಳು ಕಾನೂನು ಕೈಗೆತ್ತಿಕೊಂಡ ಪ್ರಕರಣ ಕಳೆದ ವಾರ ಸುರತ್ಕಲ್ ಮತ್ತು ಬೆಳ್ತಂಗಡಿಯಲ್ಲಾಗಿದೆ. ದೇಶವನ್ನು ಕಾಡುತ್ತಿರುವ ಆರ್ಥಿಕ ಹಿಂಜರಿತ ಮತ್ತು ಕೊರೊನಾ ಆರ್ಭಟದಿಂದ ಮಂಗಳೂರಿನ ವ್ಯಾಪಾರ-ವಹಿವಾಟಿಗೆ ದೊಡ್ಡ ಹೊಡೆತ ಬಿದ್ದಿರುವ ಈ ಕಾಲಘಟ್ಟದಲ್ಲಿ ಅನೈತಿಕ ಪೊಲೀಸ್‌ಗಿರಿ ಭುಗಿಲೇಳುತ್ತಿರುವುದು ಜನರನ್ನು ಕಂಗಾಲಾಗಿಸಿಬಿಟ್ಟಿದೆ.

ಈ ಹಿಂದೆಯೂ ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿಯಿಂದ ದಕ್ಷಿಣ ಕನ್ನಡದ ಆರ್ಥಿಕ ವಲಯ ಘಾಸಿಗೊಂಡಿತ್ತು; ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಮಂಗಳೂರು ಮತ್ತು ದಕ್ಷಿಣ ಕನ್ನಡದ ಇನ್ನಿತರ ಪಟ್ಟಣಗಳಿಗೆ ಬರಲು ಉದ್ಯಮಿಗಳು ಬಂಡವಾಳಗಾರರು, ವರ್ತಕರು ಹಾಗೂ ಗ್ರಾಹಕರು ಹೆದರುತ್ತಿದ್ದರು. ಆ ಕಳಂಕದಿಂದ ಹೊರಬರುತ್ತಿರುವ ಹೊತ್ತಲ್ಲೇ ಮಂಗಳೂರು ಮತ್ತದರ ಸುತ್ತಮುತ್ತ ಅನೈತಿಕ ಪೊಲೀಸ್‌ಗಿರಿ ಪ್ರವರ ಪ್ರಾರಂಭವಾಗಿರುವುದು ಸ್ಥಳೀಯ ಆರ್ಥಿಕತೆಯನ್ನೂ ಬುಡಮೇಲಾಗಿಸುತ್ತಿದೆ. ಕಳೆದ ಗುರುವಾರ (ಏಪ್ರಿಲ್ 1, 2021) ರಾತ್ರಿ ಅಸ್ವಿದ್ ಅನ್ವರ್ ಮುಹಮ್ಮದ್ ಎಂಬ 24 ವರ್ಷದ ಸಾಬರ ಪೋರ ಮತ್ತಾತನ ಹಿಂದೂ ಸಹಪಾಠಿಯಾದ ಕೊಂಕಣಿ ಹುಡುಗಿಯ ಮೇಲೆ ಭಜರಂಗಿಗಳು ಮಾರಣಾಂತಿಕ ದಾಳಿ ಮಾಡಿ ಸುಖಾಸುಮ್ಮನೆ ಅವರ ಮಾನ ಬೀದಿಪಾಲು ಮಾಡಲು ಹವಣಿಸಿದ್ದಾರೆ.

ಅಸ್ವಿದ್ ಮತ್ತು ಆ ಕೊಂಕಣಿ ಹುಡುಗಿ ಕ್ಲಾಸ್‌ಮೇಟ್‌ಗಳು. ಇತ್ತೀಚೆಗಷ್ಟೆ ಡಿಗ್ರಿ ಮುಗಿಸಿದ್ದ ಈ ಸಹಪಾಠಿಗಳು ಉದ್ಯೋಗ ಹುಡುಕುತ್ತಿದ್ದರು. ಹುಡುಗಿಗೆ ಬೆಂಗಳೂರಿನ ಕಂಪನಿಯೊಂದು ಸಂದರ್ಶನಕ್ಕೆ ಕರೆದಿತ್ತು. ಬೆಂಗಳೂರು ಅಷ್ಟಾಗಿ ಪರಿಚಯವಿಲ್ಲದ ಆಕೆ ಆ ಮಾಯಾನಗರಿಯ ಬಗ್ಗೆ ಗೊತ್ತಿದ್ದ ಅಸ್ವಿದ್‌ನನ್ನು ತನ್ನೊಂದಿಗೆ ಬರುವಂತೆ ಹೇಳಿದ್ದಳು. ಗುರುವಾರ ರಾತ್ರಿ ಬೆಂಗಳೂರಿಗೆ ಹೋಗಲೆಂದು ಖಾಸಗಿ ಬಸ್ ಹತ್ತಿದ್ದರು. ಬಸ್ಸು ಪಂಪ್‌ವೆಲ್ ಬಳಿ ಬರುತ್ತಿದ್ದಂತೆ ಹಲವು ಕ್ರಿಮಿನಲ್ ಕೇಸ್‌ಗಳಲ್ಲಿ ಆರೋಪಿಗಳಾದ ಆರೆಂಟು ಮಂದಿ ಅಡ್ಡಗಟ್ಟಿದ್ದಾರೆ. ತಮ್ಮ ಸಂಬಂಧಿ ಪ್ರಯಾಣಿಕರೊಬ್ಬರಿಗೆ ಹುಷಾರಿಲ್ಲ; ಅವರನ್ನು ಉಪಚರಿಸಬೇಕಿದೆ ಎಂದು ಹೇಳಿ ಬಸ್ಸಿಗೆ ನುಗ್ಗಿದ್ದಾರೆ.

ಬಸ್‌ನಲ್ಲಿ ಅಸ್ವಿದ್ ಮತ್ತಾತನ ಕ್ಲಾಸ್‌ಮೇಟ್ ಹುಡುಗಿಯನ್ನು ದರದರನೆ ಎಳೆದು ಕೆಳಗೆ ಇಳಿಸಿದ್ದಾರೆ. ಹಿಂದೆ ಮುಂದೆ ನೋಡದೆ ಧರ್ಮೋನ್ಮಾದದ ವಿಚಾರಣೆ ನಡೆಸಿದ್ದಾರೆ. ಹೀಗೆ ಸಾಬರ ಹುಡುಗನ ಜತೆ ಹೋಗುವುದು ಧರ್ಮ ವಿರೋಧಿ ಎಂದೆನ್ನುತ್ತ ಹಿಂದೂ ಹುಡುಗಿಗೆ ಹೊಡೆಯತೊಡಗಿದ್ದಾರೆ. ಹುಡುಗನಿಗೂ ರೌಡಿಗಳು ಹಿಗ್ಗಾಮುಗ್ಗಾ ಹೊಡೆಯಲಾರಂಭಿಸಿದ್ದಾರೆ. ಆಗ ಆಕೆ ಈ ಹಲ್ಲೆಯನ್ನು ವಿರೋಧಿಸಿದ್ದಾಳೆ. ತಾನೇ ಆತನನ್ನು ಬರುವಂತೆ ಕರೆದಿದ್ದೇನೆ. ಇದು ಅನೈತಿಕ ಪ್ರಯಾಣವಲ್ಲ; ಬೆಂಗಳೂರಿನ ಪರಿಚಯ ಆತನಿಗಿರುವುದರಿಂದ ಜತೆಯಾಗಿ ಹೊರಟಿದ್ದೇನೆಂದು ಪರಿಪರಿಯಾಗಿ ಹೇಳಿದ್ದಾರೆ. ಆದರೆ “ದೆವ್ವ” ಮೈಮೇಲೆ ಬಂದಂತಿದ್ದ ಭಜರಂಗಿಗಳು ಇದ್ಯಾವುದನ್ನೂ ಕೇಳಿಲ್ಲ! ಹಿಂದೂ ಹೆಣ್ಣಿನ ರಕ್ಷಣೆಯ ಹೆಸರಲ್ಲಿ ಹಿಂದೂ ಹುಡುಗಿ ಮೈಮೇಲೆ ಕೈ ಮಾಡಿದ್ದಾರೆ. ಸಹಪಾಠಿಯ ಸಹಾಯಕ್ಕೆಂದು ಬೆಂಗಳೂರಿಗೆ ಹೊರಟ್ಟಿದ್ದ “ತಪ್ಪಿಗೆ” ಅಸ್ವಿದ್‌ಗೆ ಭಜರಂಗಿಗಳು ಚೂರಿಯಿಂದ ಕಂಡಕಂಡಲ್ಲಿ ಇರಿದಿದ್ದಾರೆ.

ಅಸ್ವಿದ್ ಹಲ್ಲೆಯಿಂದ ಜರ್ಜರಿತನಾಗಿ ಆಸ್ಪತ್ರೆ ಪಾಲಾಗಿದ್ದಾನೆ. ಹುಡುಗಿ ಇದ್ದದ್ದು ಇದ್ದಂತೆ ಪೊಲೀಸ್ ಕಂಪ್ಲೇಟು ಕೊಟಿದ್ದಾಳೆ. ಹಲ್ಲೆಕೋರ ಭಜರಂಗಿಗಳಲು “ಹಿಂದೂ ಹೀರೊ” ಇಮೇಜಿಗಾಗಿ ತಾವು ಹಿಂದೂ ಹುಡುಗಿ-ಸಾಬರ ಹುಡುಗನ ಮಾನ-ಪ್ರಾಣಕ್ಕೆ ಹಿಂಸೆ ಕೊಡುವುದನ್ನು, ಬೈದು ಕೇಕೆ ಹಾಕುವುದನ್ನು ವೀಡಿಯೋ ಮಾಡಿ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲಿಗೆ ಅಮಾಯಕ ಹಿಂದೂ ಹುಡುಗಿಯ ಮಾನ ಹರಾಜು ಹಾಕಿದ ಕಿರಾತಕರ ಅಸಲಿ ಉದ್ದೇಶವೂ ಜಗಜ್ಜಾಹೀರಾಗಿದೆ! ಹಿಂದೂ ಹೆಣ್ಣಿನ ರಕ್ಷಣೆ-ಧರ್ಮ ರಕ್ಷಣೆ ಹೆಸರಲ್ಲಿ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡುವ ಮತ್ತು ಅವರ ಚಾರಿತ್ರ್ಯವಧೆ ಮಾಡುವ ಪುಂಡರ ಉದ್ದೇಶ, ಸಂಘ ಪರಿವಾರದ ದೊರೆಗಳನ್ನು ಸಂಪ್ರೀತಗೊಳಿಸಿ ರಾಜಕೀಯ ಸ್ಥಾನಮಾನ ಅಥವಾ ಆರ್ಥಿಕ ಲಾಭ ಗಿಟ್ಟಿಸುವುದೇ ಹೊರತು ಹಿಂದೂ ಹುಡುಗಿಯರನ್ನು ಅಥವಾ ಧರ್ಮವನ್ನು ಕಾಪಾಡುವುದಲ್ಲ ಎಂಬುದು ಜನರಿಗೀಗ ಖಾತ್ರಿಯಾಗಿ ಹೋಗಿದೆ.

ಈ ಅನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ಮಂಗಳೂರು ಪೊಲೀಸ್ ಬಂಧಿಸಿರುವ ನಾಲ್ವರ “ಮಹಿಮೆ” ನೋಡಿದರೆ ಸಂಘ ಪರಿವಾರದ ರಿಂಗ್‌ಮಾಸ್ಟರ್‌ಗಳು ಹಿಂದುತ್ವ ಪ್ರಚಾರಕ್ಕೆ ಕ್ರಿಮಿನಲ್ ಪಾತಕಿಗಳನ್ನು ಬಳಸುತ್ತಿರುವುದು ನಿಸ್ಸಂಶಯವಾಗಿ ಸಾಬೀತಾಗುತ್ತದೆ. ಬಂಧಿಸಲಾಗಿರುವ ಅತ್ತಾವರ ಬಾಬುಗುಡ್ಡೆಯ ಬಾಲಚಂದ್ರ(28) ಕಂದಕದ ಧನುಷ್ ಭಂಡಾರಿ(25), ಶಕ್ತಿನಗರದ ಜಯಪ್ರಕಾಶ್(27) ಮತ್ತು ಉರ್ವದ ಅನಿಲ್‌ಕುಮಾರ್(38) ನಾಲ್ವರೂ ಕ್ರಿಮಿನಲ್ ಹಿನ್ನೆಲೆಯವರು. ಹಲವು ಪಾತಕದಲ್ಲಿ ಭಾಗಿಯಾಗಿರುವ ಈ ನಾಲ್ವರ ಮೇಲೆ ಒಂದಲ್ಲ; ಎರಡೆರಡು ಮತ್ತು ಮೂರುಮೂರು ಕೇಸುಗಳಿವೆ! ಇವರೆಲ್ಲರ ಮೇಲೆ ಕೊಲೆ ಯತ್ನ ಮತ್ತು ಹಲ್ಲೆ ಕೇಸು ಜಡಿಯಲಾಗಿದೆಯಾದರೂ, ಆಳುವ ಪಕ್ಷದ ಸಂಸದ, ಶಾಸಕ, ಮಂತ್ರಿಗಳ ಕೃಪಾಕಟಾಕ್ಷ ಭಜರಂಗಿಗಳಿಗೆ ಇರುವುದರಿಂದ ಕೇಸು ಹಳ್ಳ ಹಿಡಿಯುವುದು ಖಂಡಿತ ಎಂದು ಮಂಗಳೂರಿನಲ್ಲೀಗ ಚರ್ಚೆಯೂ ನಡೆದಿದೆ!

ಮಂಗಳೂರಿಗೆ ಮುಂದೆ ಇನ್ನೂ ಅದೆಂಥ ಕೇಡು ಕಾದಿದೆಯೋ?!


ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....