Homeಚಳವಳಿಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ.

- Advertisement -
- Advertisement -

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲೊರಟಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ತೀವ್ರ ವಿರೋಧ ವ್ಯಕ್ತಪಡಿಸಿದೆ.

ವೇದಿಕೆಯು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಭೂ ಸುಧಾರಣೆ ಕಾನೂನಿನಲ್ಲಿ ಕಠಿಣ ನಿಯಮಗಳು ಇದ್ದರೂ ಕೃಷಿಕರಲ್ಲದವರು ವಾಮಮಾರ್ಗ ಬಳಸಿ ಜಮೀನು ಖರೀದಿಸುತ್ತಿದ್ದಾರೆ’ ಎಂಬ ಕಾರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ ಎಂಬ ಕಂದಾಯ ಮಂತ್ರಿಗಳಾದ ಆರ್.ಅಶೋಕ್ ಅವರು ಸಮಜಾಯಿಷಿ ಯಾರಿಗೂ ಒಪ್ಪಿಗೆ ಆಗುವಂಥದ್ದಲ್ಲ. ಕಳ್ಳ ಹಾದಿ ಬಳಸುತ್ತಿದ್ದಾರೆಂಬ ಮಾತ್ರಕ್ಕೆ ಆ ಕಳ್ಳ ಹಾದಿಯನ್ನು ರಾಜಮಾರ್ಗ ಮಾಡವು ಸರ್ಕಾರದ ಕ್ರಮ ಸರಿಯಾದುದ್ದಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ.

ಮಹಿಳಾ ರೈತರ ಹಕ್ಕುಗಳ ವೇದಿಕೆಯು (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ರಾಷ್ಟ್ರದ ಅನೌಪಚಾರಿಕ ವೇದಿಕೆಯಾಗಿದ್ದು, ಇದು ಸುಮಾರು 24 ರಾಜ್ಯಗಳ ರೈತ  ಮಹಿಳೆಯರು, ಮಹಿಳಾ ರೈತರ ಸಾಮೂಹಿಕ ಸಂಘಟನೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸಂಶೋಧಕರು ಮತ್ತು ಕಾರ್ಯಕರ್ತರನ್ನು ಒಳಗೊಂಡಿದೆ. ಪ್ರಮುಖವಾಗಿ ಭಾರತದಲ್ಲಿನ  ಮಹಿಳಾ ರೈತರ ಗುರುತಿಸುವಿಕೆ, ಸಿಗಬೇಕಾಗಿರುವ ಮಾನ್ಯತೆ  ಮತ್ತು ಹಕ್ಕುಗಳನ್ನು ಪಡೆಯುವುದಕ್ಕೋಸ್ಕರ  ಶ್ರಮಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷಿಕರಲ್ಲದವರು ಯಾವುದೇ ಅಡೆತಡೆಗಳಿಲ್ಲದೆ ಜಮೀನು ಖರೀದಿಸಬಹುದಾದ ಅವಕಾಶ ಕಲ್ಪಿಸಿಲಿಕ್ಕಾಗಿ ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಕೃಷಿಕರಿಗಷ್ಟೇ ಅಲ್ಲ, ಗ್ರಾಮೀಣ ಭೂಹೀನ ಮತ್ತು ಭೂಮಿ ಉಳ್ಳವರ ಹಿತಾಸಕ್ತಿ ಜನರೆಲ್ಲರಿಗೂ ನಿರಾಶೆ, ಸಿಟ್ಟು ಮೂಡಿಸಿದೆ ಎಂದು ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ ಆರೋಪಿಸಿದೆ.

ಕೋವಿಡ್ -19 ಮಹಾಮಾರಿ ಸಂಕ್ರಮಣದ ಸನ್ನಿವೇಶದಲ್ಲಿ ಆರ್ಥಿಕತೆಯ “ಅಗತ್ಯ ಸೇವೆಗಳ ಮೇಲೆ ಕೇಂದ್ರೀಕೃತವಾಗರಬೇಕು. ಕೃಷಿ ಮತ್ತು ಆಹಾರ ಸುರಕ್ಷತೆಯನ್ನು ಆದ್ಯತೆಯ ವಿಷಯವಾಗಿರಬೇಕು. ಇಂತಹ ಸಂದರ್ಭದಲ್ಲಿ ಕೃಷಿ ಭೂಮಿಯನ್ನು ರೈತರಿಂದ ಕಿತ್ತುಕೊಂಡು ಕೃಷಿಯ ದಿಕ್ಕು ಬದಲಿಸಿ, ಕೃಷಿಯೇತರ ಬಳಕೆ ತಿರುಗಿಸುವುದು ಮತ್ತು ಕೃಷಿಯೇತರರಿಗೆ ಸ್ವತಃ ಸರ್ಕಾರ ಮುಂದೆ ನಿಂತು ದಾರಿ ಮಾಡಿಕೊಡುತ್ತಿರುವುದು ಅತ್ಯಂತ ಅವಿವೇಕದ ಸಂಗತಿಯಾಗಿದೆ ಎಂದು ವೇದಿಕೆ ಆರೋಪಿಸಿದೆ.

‘ಯಾವ ಕೈಗಳು ಭೂಮಿಯಲ್ಲಿ ಉಳುಮೆ ಮಾಡುತ್ತವೆಯೋ ಅ ಕೈಗಳ ಕುಟುಂಬವೇ ರೈತ ಕುಟುಂಬ’ ಎನ್ನುವುದು ನಿಜವಾದರೆ, ಮಹಿಳೆಯರಷ್ಟು ಕೈಯನ್ನು ಮಣ್ಣು ಮಾಡಿಕೊಳ್ಳುವವರು ಇನ್ನಾರು ಇಲ್ಲ. ಆದಾಗ್ಯೂ ಮಹಿಳೆಯರು ಎಂದು ಭೂಹೀನರು. ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಶೇಕಡಾ 24% ಪುರುಷರು ಭೂಮಿಯನ್ನು ಹೊಂದಿದ್ದಾರೆ, ಕೇವಲ 4% ಗ್ರಾಮೀಣ ಮಹಿಳೆಯರು ಮಾತ್ರ ಭೂಮಿಯನ್ನು ಹೊಂದಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕೇಂದು ವೇದಿಕೆ ಒತ್ತಾಯಿಸಿದೆ.

ಮಹಿಳಾ ರೈತರಿಗೆ, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಮಹಿಳಾ ರೈತರಿಗೆ ಸರ್ಕಾರ ಎಂದಿಗೂ ಆದ್ಯತೆ ನೀಡಿಲ್ಲ. ಈಗ ಇರುವ ಕಾನೂನನ್ನು ದುರ್ಬಲಗೊಳಿಸುವ ಬದಲು, ಅವರಿಗೆ ಭೂಮಿಯನ್ನು ನೀಡಬೇಕು. ಪಶುಗಳನ್ನು ಮೇಯಿಸಲಿಕ್ಕೆ, ಗುಂಪು ಕೃಷಿ, ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ ಮತ್ತು ಕೃತಕ ಮೀನುಗಾರಿಕೆಗೆ ಅನುವು ಮಾಡಿಕೊಡಬೇಕು, ಭೂರಹಿತ ಕುಟುಂಬಗಳಿಗೆ 5 ಎಕರೆ ಜಮೀನನ್ನು ಮಹಿಳೆಯನ್ನು ಸೇರಿದಂತೆ ಜಂಟಿ ಪಟ್ಟ ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಪತ್ರಿಕಾ  ಹೇಳಿಕೆಗೆ ಕವಿತಾ ಕುರುಗಂಟಿ, ಜ್ಯೋತಿ ರಾಜ್, ಇಂದಿರಾ ಕೃಷ್ಣಪ್ಪ, ಶಾರದಾ ದಾಬಡೆ, ಮಮತಾ ಯಜಮಾನ್, ಮಧು ಭೂಷಣ, ರಾಜೇಶ್ವರಿ ಜೋಶಿ, ಸುವರ್ಣ ಕುಠಾಳೆ, ಮಹಾನಂದ ತಳವಾರ, ಸ್ವಾಮಿ, ನಿಂಗಮ್ಮ ಸವಣೂರ, ಶಶಿರಾಜ್, ಕವಿತಾ ಶ್ರೀನಿವಾಸನ್, ನೀಲಮ್ಮ ಮುಂತಾದವರು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...