Homeಚಳವಳಿಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ.

- Advertisement -
- Advertisement -

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲೊರಟಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ತೀವ್ರ ವಿರೋಧ ವ್ಯಕ್ತಪಡಿಸಿದೆ.

ವೇದಿಕೆಯು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಭೂ ಸುಧಾರಣೆ ಕಾನೂನಿನಲ್ಲಿ ಕಠಿಣ ನಿಯಮಗಳು ಇದ್ದರೂ ಕೃಷಿಕರಲ್ಲದವರು ವಾಮಮಾರ್ಗ ಬಳಸಿ ಜಮೀನು ಖರೀದಿಸುತ್ತಿದ್ದಾರೆ’ ಎಂಬ ಕಾರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ ಎಂಬ ಕಂದಾಯ ಮಂತ್ರಿಗಳಾದ ಆರ್.ಅಶೋಕ್ ಅವರು ಸಮಜಾಯಿಷಿ ಯಾರಿಗೂ ಒಪ್ಪಿಗೆ ಆಗುವಂಥದ್ದಲ್ಲ. ಕಳ್ಳ ಹಾದಿ ಬಳಸುತ್ತಿದ್ದಾರೆಂಬ ಮಾತ್ರಕ್ಕೆ ಆ ಕಳ್ಳ ಹಾದಿಯನ್ನು ರಾಜಮಾರ್ಗ ಮಾಡವು ಸರ್ಕಾರದ ಕ್ರಮ ಸರಿಯಾದುದ್ದಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ.

ಮಹಿಳಾ ರೈತರ ಹಕ್ಕುಗಳ ವೇದಿಕೆಯು (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ರಾಷ್ಟ್ರದ ಅನೌಪಚಾರಿಕ ವೇದಿಕೆಯಾಗಿದ್ದು, ಇದು ಸುಮಾರು 24 ರಾಜ್ಯಗಳ ರೈತ  ಮಹಿಳೆಯರು, ಮಹಿಳಾ ರೈತರ ಸಾಮೂಹಿಕ ಸಂಘಟನೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸಂಶೋಧಕರು ಮತ್ತು ಕಾರ್ಯಕರ್ತರನ್ನು ಒಳಗೊಂಡಿದೆ. ಪ್ರಮುಖವಾಗಿ ಭಾರತದಲ್ಲಿನ  ಮಹಿಳಾ ರೈತರ ಗುರುತಿಸುವಿಕೆ, ಸಿಗಬೇಕಾಗಿರುವ ಮಾನ್ಯತೆ  ಮತ್ತು ಹಕ್ಕುಗಳನ್ನು ಪಡೆಯುವುದಕ್ಕೋಸ್ಕರ  ಶ್ರಮಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷಿಕರಲ್ಲದವರು ಯಾವುದೇ ಅಡೆತಡೆಗಳಿಲ್ಲದೆ ಜಮೀನು ಖರೀದಿಸಬಹುದಾದ ಅವಕಾಶ ಕಲ್ಪಿಸಿಲಿಕ್ಕಾಗಿ ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಕೃಷಿಕರಿಗಷ್ಟೇ ಅಲ್ಲ, ಗ್ರಾಮೀಣ ಭೂಹೀನ ಮತ್ತು ಭೂಮಿ ಉಳ್ಳವರ ಹಿತಾಸಕ್ತಿ ಜನರೆಲ್ಲರಿಗೂ ನಿರಾಶೆ, ಸಿಟ್ಟು ಮೂಡಿಸಿದೆ ಎಂದು ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ ಆರೋಪಿಸಿದೆ.

ಕೋವಿಡ್ -19 ಮಹಾಮಾರಿ ಸಂಕ್ರಮಣದ ಸನ್ನಿವೇಶದಲ್ಲಿ ಆರ್ಥಿಕತೆಯ “ಅಗತ್ಯ ಸೇವೆಗಳ ಮೇಲೆ ಕೇಂದ್ರೀಕೃತವಾಗರಬೇಕು. ಕೃಷಿ ಮತ್ತು ಆಹಾರ ಸುರಕ್ಷತೆಯನ್ನು ಆದ್ಯತೆಯ ವಿಷಯವಾಗಿರಬೇಕು. ಇಂತಹ ಸಂದರ್ಭದಲ್ಲಿ ಕೃಷಿ ಭೂಮಿಯನ್ನು ರೈತರಿಂದ ಕಿತ್ತುಕೊಂಡು ಕೃಷಿಯ ದಿಕ್ಕು ಬದಲಿಸಿ, ಕೃಷಿಯೇತರ ಬಳಕೆ ತಿರುಗಿಸುವುದು ಮತ್ತು ಕೃಷಿಯೇತರರಿಗೆ ಸ್ವತಃ ಸರ್ಕಾರ ಮುಂದೆ ನಿಂತು ದಾರಿ ಮಾಡಿಕೊಡುತ್ತಿರುವುದು ಅತ್ಯಂತ ಅವಿವೇಕದ ಸಂಗತಿಯಾಗಿದೆ ಎಂದು ವೇದಿಕೆ ಆರೋಪಿಸಿದೆ.

‘ಯಾವ ಕೈಗಳು ಭೂಮಿಯಲ್ಲಿ ಉಳುಮೆ ಮಾಡುತ್ತವೆಯೋ ಅ ಕೈಗಳ ಕುಟುಂಬವೇ ರೈತ ಕುಟುಂಬ’ ಎನ್ನುವುದು ನಿಜವಾದರೆ, ಮಹಿಳೆಯರಷ್ಟು ಕೈಯನ್ನು ಮಣ್ಣು ಮಾಡಿಕೊಳ್ಳುವವರು ಇನ್ನಾರು ಇಲ್ಲ. ಆದಾಗ್ಯೂ ಮಹಿಳೆಯರು ಎಂದು ಭೂಹೀನರು. ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಶೇಕಡಾ 24% ಪುರುಷರು ಭೂಮಿಯನ್ನು ಹೊಂದಿದ್ದಾರೆ, ಕೇವಲ 4% ಗ್ರಾಮೀಣ ಮಹಿಳೆಯರು ಮಾತ್ರ ಭೂಮಿಯನ್ನು ಹೊಂದಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕೇಂದು ವೇದಿಕೆ ಒತ್ತಾಯಿಸಿದೆ.

ಮಹಿಳಾ ರೈತರಿಗೆ, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಮಹಿಳಾ ರೈತರಿಗೆ ಸರ್ಕಾರ ಎಂದಿಗೂ ಆದ್ಯತೆ ನೀಡಿಲ್ಲ. ಈಗ ಇರುವ ಕಾನೂನನ್ನು ದುರ್ಬಲಗೊಳಿಸುವ ಬದಲು, ಅವರಿಗೆ ಭೂಮಿಯನ್ನು ನೀಡಬೇಕು. ಪಶುಗಳನ್ನು ಮೇಯಿಸಲಿಕ್ಕೆ, ಗುಂಪು ಕೃಷಿ, ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ ಮತ್ತು ಕೃತಕ ಮೀನುಗಾರಿಕೆಗೆ ಅನುವು ಮಾಡಿಕೊಡಬೇಕು, ಭೂರಹಿತ ಕುಟುಂಬಗಳಿಗೆ 5 ಎಕರೆ ಜಮೀನನ್ನು ಮಹಿಳೆಯನ್ನು ಸೇರಿದಂತೆ ಜಂಟಿ ಪಟ್ಟ ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಪತ್ರಿಕಾ  ಹೇಳಿಕೆಗೆ ಕವಿತಾ ಕುರುಗಂಟಿ, ಜ್ಯೋತಿ ರಾಜ್, ಇಂದಿರಾ ಕೃಷ್ಣಪ್ಪ, ಶಾರದಾ ದಾಬಡೆ, ಮಮತಾ ಯಜಮಾನ್, ಮಧು ಭೂಷಣ, ರಾಜೇಶ್ವರಿ ಜೋಶಿ, ಸುವರ್ಣ ಕುಠಾಳೆ, ಮಹಾನಂದ ತಳವಾರ, ಸ್ವಾಮಿ, ನಿಂಗಮ್ಮ ಸವಣೂರ, ಶಶಿರಾಜ್, ಕವಿತಾ ಶ್ರೀನಿವಾಸನ್, ನೀಲಮ್ಮ ಮುಂತಾದವರು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....