Homeಚಳವಳಿಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ.

- Advertisement -
- Advertisement -

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲೊರಟಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ತೀವ್ರ ವಿರೋಧ ವ್ಯಕ್ತಪಡಿಸಿದೆ.

ವೇದಿಕೆಯು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಭೂ ಸುಧಾರಣೆ ಕಾನೂನಿನಲ್ಲಿ ಕಠಿಣ ನಿಯಮಗಳು ಇದ್ದರೂ ಕೃಷಿಕರಲ್ಲದವರು ವಾಮಮಾರ್ಗ ಬಳಸಿ ಜಮೀನು ಖರೀದಿಸುತ್ತಿದ್ದಾರೆ’ ಎಂಬ ಕಾರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ ಎಂಬ ಕಂದಾಯ ಮಂತ್ರಿಗಳಾದ ಆರ್.ಅಶೋಕ್ ಅವರು ಸಮಜಾಯಿಷಿ ಯಾರಿಗೂ ಒಪ್ಪಿಗೆ ಆಗುವಂಥದ್ದಲ್ಲ. ಕಳ್ಳ ಹಾದಿ ಬಳಸುತ್ತಿದ್ದಾರೆಂಬ ಮಾತ್ರಕ್ಕೆ ಆ ಕಳ್ಳ ಹಾದಿಯನ್ನು ರಾಜಮಾರ್ಗ ಮಾಡವು ಸರ್ಕಾರದ ಕ್ರಮ ಸರಿಯಾದುದ್ದಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ.

ಮಹಿಳಾ ರೈತರ ಹಕ್ಕುಗಳ ವೇದಿಕೆಯು (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ರಾಷ್ಟ್ರದ ಅನೌಪಚಾರಿಕ ವೇದಿಕೆಯಾಗಿದ್ದು, ಇದು ಸುಮಾರು 24 ರಾಜ್ಯಗಳ ರೈತ  ಮಹಿಳೆಯರು, ಮಹಿಳಾ ರೈತರ ಸಾಮೂಹಿಕ ಸಂಘಟನೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸಂಶೋಧಕರು ಮತ್ತು ಕಾರ್ಯಕರ್ತರನ್ನು ಒಳಗೊಂಡಿದೆ. ಪ್ರಮುಖವಾಗಿ ಭಾರತದಲ್ಲಿನ  ಮಹಿಳಾ ರೈತರ ಗುರುತಿಸುವಿಕೆ, ಸಿಗಬೇಕಾಗಿರುವ ಮಾನ್ಯತೆ  ಮತ್ತು ಹಕ್ಕುಗಳನ್ನು ಪಡೆಯುವುದಕ್ಕೋಸ್ಕರ  ಶ್ರಮಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷಿಕರಲ್ಲದವರು ಯಾವುದೇ ಅಡೆತಡೆಗಳಿಲ್ಲದೆ ಜಮೀನು ಖರೀದಿಸಬಹುದಾದ ಅವಕಾಶ ಕಲ್ಪಿಸಿಲಿಕ್ಕಾಗಿ ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಕೃಷಿಕರಿಗಷ್ಟೇ ಅಲ್ಲ, ಗ್ರಾಮೀಣ ಭೂಹೀನ ಮತ್ತು ಭೂಮಿ ಉಳ್ಳವರ ಹಿತಾಸಕ್ತಿ ಜನರೆಲ್ಲರಿಗೂ ನಿರಾಶೆ, ಸಿಟ್ಟು ಮೂಡಿಸಿದೆ ಎಂದು ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ ಆರೋಪಿಸಿದೆ.

ಕೋವಿಡ್ -19 ಮಹಾಮಾರಿ ಸಂಕ್ರಮಣದ ಸನ್ನಿವೇಶದಲ್ಲಿ ಆರ್ಥಿಕತೆಯ “ಅಗತ್ಯ ಸೇವೆಗಳ ಮೇಲೆ ಕೇಂದ್ರೀಕೃತವಾಗರಬೇಕು. ಕೃಷಿ ಮತ್ತು ಆಹಾರ ಸುರಕ್ಷತೆಯನ್ನು ಆದ್ಯತೆಯ ವಿಷಯವಾಗಿರಬೇಕು. ಇಂತಹ ಸಂದರ್ಭದಲ್ಲಿ ಕೃಷಿ ಭೂಮಿಯನ್ನು ರೈತರಿಂದ ಕಿತ್ತುಕೊಂಡು ಕೃಷಿಯ ದಿಕ್ಕು ಬದಲಿಸಿ, ಕೃಷಿಯೇತರ ಬಳಕೆ ತಿರುಗಿಸುವುದು ಮತ್ತು ಕೃಷಿಯೇತರರಿಗೆ ಸ್ವತಃ ಸರ್ಕಾರ ಮುಂದೆ ನಿಂತು ದಾರಿ ಮಾಡಿಕೊಡುತ್ತಿರುವುದು ಅತ್ಯಂತ ಅವಿವೇಕದ ಸಂಗತಿಯಾಗಿದೆ ಎಂದು ವೇದಿಕೆ ಆರೋಪಿಸಿದೆ.

‘ಯಾವ ಕೈಗಳು ಭೂಮಿಯಲ್ಲಿ ಉಳುಮೆ ಮಾಡುತ್ತವೆಯೋ ಅ ಕೈಗಳ ಕುಟುಂಬವೇ ರೈತ ಕುಟುಂಬ’ ಎನ್ನುವುದು ನಿಜವಾದರೆ, ಮಹಿಳೆಯರಷ್ಟು ಕೈಯನ್ನು ಮಣ್ಣು ಮಾಡಿಕೊಳ್ಳುವವರು ಇನ್ನಾರು ಇಲ್ಲ. ಆದಾಗ್ಯೂ ಮಹಿಳೆಯರು ಎಂದು ಭೂಹೀನರು. ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಶೇಕಡಾ 24% ಪುರುಷರು ಭೂಮಿಯನ್ನು ಹೊಂದಿದ್ದಾರೆ, ಕೇವಲ 4% ಗ್ರಾಮೀಣ ಮಹಿಳೆಯರು ಮಾತ್ರ ಭೂಮಿಯನ್ನು ಹೊಂದಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕೇಂದು ವೇದಿಕೆ ಒತ್ತಾಯಿಸಿದೆ.

ಮಹಿಳಾ ರೈತರಿಗೆ, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಮಹಿಳಾ ರೈತರಿಗೆ ಸರ್ಕಾರ ಎಂದಿಗೂ ಆದ್ಯತೆ ನೀಡಿಲ್ಲ. ಈಗ ಇರುವ ಕಾನೂನನ್ನು ದುರ್ಬಲಗೊಳಿಸುವ ಬದಲು, ಅವರಿಗೆ ಭೂಮಿಯನ್ನು ನೀಡಬೇಕು. ಪಶುಗಳನ್ನು ಮೇಯಿಸಲಿಕ್ಕೆ, ಗುಂಪು ಕೃಷಿ, ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ ಮತ್ತು ಕೃತಕ ಮೀನುಗಾರಿಕೆಗೆ ಅನುವು ಮಾಡಿಕೊಡಬೇಕು, ಭೂರಹಿತ ಕುಟುಂಬಗಳಿಗೆ 5 ಎಕರೆ ಜಮೀನನ್ನು ಮಹಿಳೆಯನ್ನು ಸೇರಿದಂತೆ ಜಂಟಿ ಪಟ್ಟ ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಪತ್ರಿಕಾ  ಹೇಳಿಕೆಗೆ ಕವಿತಾ ಕುರುಗಂಟಿ, ಜ್ಯೋತಿ ರಾಜ್, ಇಂದಿರಾ ಕೃಷ್ಣಪ್ಪ, ಶಾರದಾ ದಾಬಡೆ, ಮಮತಾ ಯಜಮಾನ್, ಮಧು ಭೂಷಣ, ರಾಜೇಶ್ವರಿ ಜೋಶಿ, ಸುವರ್ಣ ಕುಠಾಳೆ, ಮಹಾನಂದ ತಳವಾರ, ಸ್ವಾಮಿ, ನಿಂಗಮ್ಮ ಸವಣೂರ, ಶಶಿರಾಜ್, ಕವಿತಾ ಶ್ರೀನಿವಾಸನ್, ನೀಲಮ್ಮ ಮುಂತಾದವರು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...