Homeಚಳವಳಿಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ.

- Advertisement -
- Advertisement -

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲೊರಟಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ತೀವ್ರ ವಿರೋಧ ವ್ಯಕ್ತಪಡಿಸಿದೆ.

ವೇದಿಕೆಯು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಭೂ ಸುಧಾರಣೆ ಕಾನೂನಿನಲ್ಲಿ ಕಠಿಣ ನಿಯಮಗಳು ಇದ್ದರೂ ಕೃಷಿಕರಲ್ಲದವರು ವಾಮಮಾರ್ಗ ಬಳಸಿ ಜಮೀನು ಖರೀದಿಸುತ್ತಿದ್ದಾರೆ’ ಎಂಬ ಕಾರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ ಎಂಬ ಕಂದಾಯ ಮಂತ್ರಿಗಳಾದ ಆರ್.ಅಶೋಕ್ ಅವರು ಸಮಜಾಯಿಷಿ ಯಾರಿಗೂ ಒಪ್ಪಿಗೆ ಆಗುವಂಥದ್ದಲ್ಲ. ಕಳ್ಳ ಹಾದಿ ಬಳಸುತ್ತಿದ್ದಾರೆಂಬ ಮಾತ್ರಕ್ಕೆ ಆ ಕಳ್ಳ ಹಾದಿಯನ್ನು ರಾಜಮಾರ್ಗ ಮಾಡವು ಸರ್ಕಾರದ ಕ್ರಮ ಸರಿಯಾದುದ್ದಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ.

ಮಹಿಳಾ ರೈತರ ಹಕ್ಕುಗಳ ವೇದಿಕೆಯು (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ರಾಷ್ಟ್ರದ ಅನೌಪಚಾರಿಕ ವೇದಿಕೆಯಾಗಿದ್ದು, ಇದು ಸುಮಾರು 24 ರಾಜ್ಯಗಳ ರೈತ  ಮಹಿಳೆಯರು, ಮಹಿಳಾ ರೈತರ ಸಾಮೂಹಿಕ ಸಂಘಟನೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸಂಶೋಧಕರು ಮತ್ತು ಕಾರ್ಯಕರ್ತರನ್ನು ಒಳಗೊಂಡಿದೆ. ಪ್ರಮುಖವಾಗಿ ಭಾರತದಲ್ಲಿನ  ಮಹಿಳಾ ರೈತರ ಗುರುತಿಸುವಿಕೆ, ಸಿಗಬೇಕಾಗಿರುವ ಮಾನ್ಯತೆ  ಮತ್ತು ಹಕ್ಕುಗಳನ್ನು ಪಡೆಯುವುದಕ್ಕೋಸ್ಕರ  ಶ್ರಮಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷಿಕರಲ್ಲದವರು ಯಾವುದೇ ಅಡೆತಡೆಗಳಿಲ್ಲದೆ ಜಮೀನು ಖರೀದಿಸಬಹುದಾದ ಅವಕಾಶ ಕಲ್ಪಿಸಿಲಿಕ್ಕಾಗಿ ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಕೃಷಿಕರಿಗಷ್ಟೇ ಅಲ್ಲ, ಗ್ರಾಮೀಣ ಭೂಹೀನ ಮತ್ತು ಭೂಮಿ ಉಳ್ಳವರ ಹಿತಾಸಕ್ತಿ ಜನರೆಲ್ಲರಿಗೂ ನಿರಾಶೆ, ಸಿಟ್ಟು ಮೂಡಿಸಿದೆ ಎಂದು ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ ಆರೋಪಿಸಿದೆ.

ಕೋವಿಡ್ -19 ಮಹಾಮಾರಿ ಸಂಕ್ರಮಣದ ಸನ್ನಿವೇಶದಲ್ಲಿ ಆರ್ಥಿಕತೆಯ “ಅಗತ್ಯ ಸೇವೆಗಳ ಮೇಲೆ ಕೇಂದ್ರೀಕೃತವಾಗರಬೇಕು. ಕೃಷಿ ಮತ್ತು ಆಹಾರ ಸುರಕ್ಷತೆಯನ್ನು ಆದ್ಯತೆಯ ವಿಷಯವಾಗಿರಬೇಕು. ಇಂತಹ ಸಂದರ್ಭದಲ್ಲಿ ಕೃಷಿ ಭೂಮಿಯನ್ನು ರೈತರಿಂದ ಕಿತ್ತುಕೊಂಡು ಕೃಷಿಯ ದಿಕ್ಕು ಬದಲಿಸಿ, ಕೃಷಿಯೇತರ ಬಳಕೆ ತಿರುಗಿಸುವುದು ಮತ್ತು ಕೃಷಿಯೇತರರಿಗೆ ಸ್ವತಃ ಸರ್ಕಾರ ಮುಂದೆ ನಿಂತು ದಾರಿ ಮಾಡಿಕೊಡುತ್ತಿರುವುದು ಅತ್ಯಂತ ಅವಿವೇಕದ ಸಂಗತಿಯಾಗಿದೆ ಎಂದು ವೇದಿಕೆ ಆರೋಪಿಸಿದೆ.

‘ಯಾವ ಕೈಗಳು ಭೂಮಿಯಲ್ಲಿ ಉಳುಮೆ ಮಾಡುತ್ತವೆಯೋ ಅ ಕೈಗಳ ಕುಟುಂಬವೇ ರೈತ ಕುಟುಂಬ’ ಎನ್ನುವುದು ನಿಜವಾದರೆ, ಮಹಿಳೆಯರಷ್ಟು ಕೈಯನ್ನು ಮಣ್ಣು ಮಾಡಿಕೊಳ್ಳುವವರು ಇನ್ನಾರು ಇಲ್ಲ. ಆದಾಗ್ಯೂ ಮಹಿಳೆಯರು ಎಂದು ಭೂಹೀನರು. ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಶೇಕಡಾ 24% ಪುರುಷರು ಭೂಮಿಯನ್ನು ಹೊಂದಿದ್ದಾರೆ, ಕೇವಲ 4% ಗ್ರಾಮೀಣ ಮಹಿಳೆಯರು ಮಾತ್ರ ಭೂಮಿಯನ್ನು ಹೊಂದಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕೇಂದು ವೇದಿಕೆ ಒತ್ತಾಯಿಸಿದೆ.

ಮಹಿಳಾ ರೈತರಿಗೆ, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಮಹಿಳಾ ರೈತರಿಗೆ ಸರ್ಕಾರ ಎಂದಿಗೂ ಆದ್ಯತೆ ನೀಡಿಲ್ಲ. ಈಗ ಇರುವ ಕಾನೂನನ್ನು ದುರ್ಬಲಗೊಳಿಸುವ ಬದಲು, ಅವರಿಗೆ ಭೂಮಿಯನ್ನು ನೀಡಬೇಕು. ಪಶುಗಳನ್ನು ಮೇಯಿಸಲಿಕ್ಕೆ, ಗುಂಪು ಕೃಷಿ, ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ ಮತ್ತು ಕೃತಕ ಮೀನುಗಾರಿಕೆಗೆ ಅನುವು ಮಾಡಿಕೊಡಬೇಕು, ಭೂರಹಿತ ಕುಟುಂಬಗಳಿಗೆ 5 ಎಕರೆ ಜಮೀನನ್ನು ಮಹಿಳೆಯನ್ನು ಸೇರಿದಂತೆ ಜಂಟಿ ಪಟ್ಟ ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಪತ್ರಿಕಾ  ಹೇಳಿಕೆಗೆ ಕವಿತಾ ಕುರುಗಂಟಿ, ಜ್ಯೋತಿ ರಾಜ್, ಇಂದಿರಾ ಕೃಷ್ಣಪ್ಪ, ಶಾರದಾ ದಾಬಡೆ, ಮಮತಾ ಯಜಮಾನ್, ಮಧು ಭೂಷಣ, ರಾಜೇಶ್ವರಿ ಜೋಶಿ, ಸುವರ್ಣ ಕುಠಾಳೆ, ಮಹಾನಂದ ತಳವಾರ, ಸ್ವಾಮಿ, ನಿಂಗಮ್ಮ ಸವಣೂರ, ಶಶಿರಾಜ್, ಕವಿತಾ ಶ್ರೀನಿವಾಸನ್, ನೀಲಮ್ಮ ಮುಂತಾದವರು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...