Homeಚಳವಳಿಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ.

- Advertisement -
- Advertisement -

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲೊರಟಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ತೀವ್ರ ವಿರೋಧ ವ್ಯಕ್ತಪಡಿಸಿದೆ.

ವೇದಿಕೆಯು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಭೂ ಸುಧಾರಣೆ ಕಾನೂನಿನಲ್ಲಿ ಕಠಿಣ ನಿಯಮಗಳು ಇದ್ದರೂ ಕೃಷಿಕರಲ್ಲದವರು ವಾಮಮಾರ್ಗ ಬಳಸಿ ಜಮೀನು ಖರೀದಿಸುತ್ತಿದ್ದಾರೆ’ ಎಂಬ ಕಾರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ ಎಂಬ ಕಂದಾಯ ಮಂತ್ರಿಗಳಾದ ಆರ್.ಅಶೋಕ್ ಅವರು ಸಮಜಾಯಿಷಿ ಯಾರಿಗೂ ಒಪ್ಪಿಗೆ ಆಗುವಂಥದ್ದಲ್ಲ. ಕಳ್ಳ ಹಾದಿ ಬಳಸುತ್ತಿದ್ದಾರೆಂಬ ಮಾತ್ರಕ್ಕೆ ಆ ಕಳ್ಳ ಹಾದಿಯನ್ನು ರಾಜಮಾರ್ಗ ಮಾಡವು ಸರ್ಕಾರದ ಕ್ರಮ ಸರಿಯಾದುದ್ದಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ.

ಮಹಿಳಾ ರೈತರ ಹಕ್ಕುಗಳ ವೇದಿಕೆಯು (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ರಾಷ್ಟ್ರದ ಅನೌಪಚಾರಿಕ ವೇದಿಕೆಯಾಗಿದ್ದು, ಇದು ಸುಮಾರು 24 ರಾಜ್ಯಗಳ ರೈತ  ಮಹಿಳೆಯರು, ಮಹಿಳಾ ರೈತರ ಸಾಮೂಹಿಕ ಸಂಘಟನೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸಂಶೋಧಕರು ಮತ್ತು ಕಾರ್ಯಕರ್ತರನ್ನು ಒಳಗೊಂಡಿದೆ. ಪ್ರಮುಖವಾಗಿ ಭಾರತದಲ್ಲಿನ  ಮಹಿಳಾ ರೈತರ ಗುರುತಿಸುವಿಕೆ, ಸಿಗಬೇಕಾಗಿರುವ ಮಾನ್ಯತೆ  ಮತ್ತು ಹಕ್ಕುಗಳನ್ನು ಪಡೆಯುವುದಕ್ಕೋಸ್ಕರ  ಶ್ರಮಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷಿಕರಲ್ಲದವರು ಯಾವುದೇ ಅಡೆತಡೆಗಳಿಲ್ಲದೆ ಜಮೀನು ಖರೀದಿಸಬಹುದಾದ ಅವಕಾಶ ಕಲ್ಪಿಸಿಲಿಕ್ಕಾಗಿ ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಕೃಷಿಕರಿಗಷ್ಟೇ ಅಲ್ಲ, ಗ್ರಾಮೀಣ ಭೂಹೀನ ಮತ್ತು ಭೂಮಿ ಉಳ್ಳವರ ಹಿತಾಸಕ್ತಿ ಜನರೆಲ್ಲರಿಗೂ ನಿರಾಶೆ, ಸಿಟ್ಟು ಮೂಡಿಸಿದೆ ಎಂದು ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ ಆರೋಪಿಸಿದೆ.

ಕೋವಿಡ್ -19 ಮಹಾಮಾರಿ ಸಂಕ್ರಮಣದ ಸನ್ನಿವೇಶದಲ್ಲಿ ಆರ್ಥಿಕತೆಯ “ಅಗತ್ಯ ಸೇವೆಗಳ ಮೇಲೆ ಕೇಂದ್ರೀಕೃತವಾಗರಬೇಕು. ಕೃಷಿ ಮತ್ತು ಆಹಾರ ಸುರಕ್ಷತೆಯನ್ನು ಆದ್ಯತೆಯ ವಿಷಯವಾಗಿರಬೇಕು. ಇಂತಹ ಸಂದರ್ಭದಲ್ಲಿ ಕೃಷಿ ಭೂಮಿಯನ್ನು ರೈತರಿಂದ ಕಿತ್ತುಕೊಂಡು ಕೃಷಿಯ ದಿಕ್ಕು ಬದಲಿಸಿ, ಕೃಷಿಯೇತರ ಬಳಕೆ ತಿರುಗಿಸುವುದು ಮತ್ತು ಕೃಷಿಯೇತರರಿಗೆ ಸ್ವತಃ ಸರ್ಕಾರ ಮುಂದೆ ನಿಂತು ದಾರಿ ಮಾಡಿಕೊಡುತ್ತಿರುವುದು ಅತ್ಯಂತ ಅವಿವೇಕದ ಸಂಗತಿಯಾಗಿದೆ ಎಂದು ವೇದಿಕೆ ಆರೋಪಿಸಿದೆ.

‘ಯಾವ ಕೈಗಳು ಭೂಮಿಯಲ್ಲಿ ಉಳುಮೆ ಮಾಡುತ್ತವೆಯೋ ಅ ಕೈಗಳ ಕುಟುಂಬವೇ ರೈತ ಕುಟುಂಬ’ ಎನ್ನುವುದು ನಿಜವಾದರೆ, ಮಹಿಳೆಯರಷ್ಟು ಕೈಯನ್ನು ಮಣ್ಣು ಮಾಡಿಕೊಳ್ಳುವವರು ಇನ್ನಾರು ಇಲ್ಲ. ಆದಾಗ್ಯೂ ಮಹಿಳೆಯರು ಎಂದು ಭೂಹೀನರು. ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಶೇಕಡಾ 24% ಪುರುಷರು ಭೂಮಿಯನ್ನು ಹೊಂದಿದ್ದಾರೆ, ಕೇವಲ 4% ಗ್ರಾಮೀಣ ಮಹಿಳೆಯರು ಮಾತ್ರ ಭೂಮಿಯನ್ನು ಹೊಂದಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕೇಂದು ವೇದಿಕೆ ಒತ್ತಾಯಿಸಿದೆ.

ಮಹಿಳಾ ರೈತರಿಗೆ, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಮಹಿಳಾ ರೈತರಿಗೆ ಸರ್ಕಾರ ಎಂದಿಗೂ ಆದ್ಯತೆ ನೀಡಿಲ್ಲ. ಈಗ ಇರುವ ಕಾನೂನನ್ನು ದುರ್ಬಲಗೊಳಿಸುವ ಬದಲು, ಅವರಿಗೆ ಭೂಮಿಯನ್ನು ನೀಡಬೇಕು. ಪಶುಗಳನ್ನು ಮೇಯಿಸಲಿಕ್ಕೆ, ಗುಂಪು ಕೃಷಿ, ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ ಮತ್ತು ಕೃತಕ ಮೀನುಗಾರಿಕೆಗೆ ಅನುವು ಮಾಡಿಕೊಡಬೇಕು, ಭೂರಹಿತ ಕುಟುಂಬಗಳಿಗೆ 5 ಎಕರೆ ಜಮೀನನ್ನು ಮಹಿಳೆಯನ್ನು ಸೇರಿದಂತೆ ಜಂಟಿ ಪಟ್ಟ ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಪತ್ರಿಕಾ  ಹೇಳಿಕೆಗೆ ಕವಿತಾ ಕುರುಗಂಟಿ, ಜ್ಯೋತಿ ರಾಜ್, ಇಂದಿರಾ ಕೃಷ್ಣಪ್ಪ, ಶಾರದಾ ದಾಬಡೆ, ಮಮತಾ ಯಜಮಾನ್, ಮಧು ಭೂಷಣ, ರಾಜೇಶ್ವರಿ ಜೋಶಿ, ಸುವರ್ಣ ಕುಠಾಳೆ, ಮಹಾನಂದ ತಳವಾರ, ಸ್ವಾಮಿ, ನಿಂಗಮ್ಮ ಸವಣೂರ, ಶಶಿರಾಜ್, ಕವಿತಾ ಶ್ರೀನಿವಾಸನ್, ನೀಲಮ್ಮ ಮುಂತಾದವರು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...