Homeಚಳವಳಿಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ.

- Advertisement -
- Advertisement -

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲೊರಟಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ತೀವ್ರ ವಿರೋಧ ವ್ಯಕ್ತಪಡಿಸಿದೆ.

ವೇದಿಕೆಯು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಭೂ ಸುಧಾರಣೆ ಕಾನೂನಿನಲ್ಲಿ ಕಠಿಣ ನಿಯಮಗಳು ಇದ್ದರೂ ಕೃಷಿಕರಲ್ಲದವರು ವಾಮಮಾರ್ಗ ಬಳಸಿ ಜಮೀನು ಖರೀದಿಸುತ್ತಿದ್ದಾರೆ’ ಎಂಬ ಕಾರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ ಎಂಬ ಕಂದಾಯ ಮಂತ್ರಿಗಳಾದ ಆರ್.ಅಶೋಕ್ ಅವರು ಸಮಜಾಯಿಷಿ ಯಾರಿಗೂ ಒಪ್ಪಿಗೆ ಆಗುವಂಥದ್ದಲ್ಲ. ಕಳ್ಳ ಹಾದಿ ಬಳಸುತ್ತಿದ್ದಾರೆಂಬ ಮಾತ್ರಕ್ಕೆ ಆ ಕಳ್ಳ ಹಾದಿಯನ್ನು ರಾಜಮಾರ್ಗ ಮಾಡವು ಸರ್ಕಾರದ ಕ್ರಮ ಸರಿಯಾದುದ್ದಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ.

ಮಹಿಳಾ ರೈತರ ಹಕ್ಕುಗಳ ವೇದಿಕೆಯು (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ರಾಷ್ಟ್ರದ ಅನೌಪಚಾರಿಕ ವೇದಿಕೆಯಾಗಿದ್ದು, ಇದು ಸುಮಾರು 24 ರಾಜ್ಯಗಳ ರೈತ  ಮಹಿಳೆಯರು, ಮಹಿಳಾ ರೈತರ ಸಾಮೂಹಿಕ ಸಂಘಟನೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸಂಶೋಧಕರು ಮತ್ತು ಕಾರ್ಯಕರ್ತರನ್ನು ಒಳಗೊಂಡಿದೆ. ಪ್ರಮುಖವಾಗಿ ಭಾರತದಲ್ಲಿನ  ಮಹಿಳಾ ರೈತರ ಗುರುತಿಸುವಿಕೆ, ಸಿಗಬೇಕಾಗಿರುವ ಮಾನ್ಯತೆ  ಮತ್ತು ಹಕ್ಕುಗಳನ್ನು ಪಡೆಯುವುದಕ್ಕೋಸ್ಕರ  ಶ್ರಮಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷಿಕರಲ್ಲದವರು ಯಾವುದೇ ಅಡೆತಡೆಗಳಿಲ್ಲದೆ ಜಮೀನು ಖರೀದಿಸಬಹುದಾದ ಅವಕಾಶ ಕಲ್ಪಿಸಿಲಿಕ್ಕಾಗಿ ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಕೃಷಿಕರಿಗಷ್ಟೇ ಅಲ್ಲ, ಗ್ರಾಮೀಣ ಭೂಹೀನ ಮತ್ತು ಭೂಮಿ ಉಳ್ಳವರ ಹಿತಾಸಕ್ತಿ ಜನರೆಲ್ಲರಿಗೂ ನಿರಾಶೆ, ಸಿಟ್ಟು ಮೂಡಿಸಿದೆ ಎಂದು ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ ಆರೋಪಿಸಿದೆ.

ಕೋವಿಡ್ -19 ಮಹಾಮಾರಿ ಸಂಕ್ರಮಣದ ಸನ್ನಿವೇಶದಲ್ಲಿ ಆರ್ಥಿಕತೆಯ “ಅಗತ್ಯ ಸೇವೆಗಳ ಮೇಲೆ ಕೇಂದ್ರೀಕೃತವಾಗರಬೇಕು. ಕೃಷಿ ಮತ್ತು ಆಹಾರ ಸುರಕ್ಷತೆಯನ್ನು ಆದ್ಯತೆಯ ವಿಷಯವಾಗಿರಬೇಕು. ಇಂತಹ ಸಂದರ್ಭದಲ್ಲಿ ಕೃಷಿ ಭೂಮಿಯನ್ನು ರೈತರಿಂದ ಕಿತ್ತುಕೊಂಡು ಕೃಷಿಯ ದಿಕ್ಕು ಬದಲಿಸಿ, ಕೃಷಿಯೇತರ ಬಳಕೆ ತಿರುಗಿಸುವುದು ಮತ್ತು ಕೃಷಿಯೇತರರಿಗೆ ಸ್ವತಃ ಸರ್ಕಾರ ಮುಂದೆ ನಿಂತು ದಾರಿ ಮಾಡಿಕೊಡುತ್ತಿರುವುದು ಅತ್ಯಂತ ಅವಿವೇಕದ ಸಂಗತಿಯಾಗಿದೆ ಎಂದು ವೇದಿಕೆ ಆರೋಪಿಸಿದೆ.

‘ಯಾವ ಕೈಗಳು ಭೂಮಿಯಲ್ಲಿ ಉಳುಮೆ ಮಾಡುತ್ತವೆಯೋ ಅ ಕೈಗಳ ಕುಟುಂಬವೇ ರೈತ ಕುಟುಂಬ’ ಎನ್ನುವುದು ನಿಜವಾದರೆ, ಮಹಿಳೆಯರಷ್ಟು ಕೈಯನ್ನು ಮಣ್ಣು ಮಾಡಿಕೊಳ್ಳುವವರು ಇನ್ನಾರು ಇಲ್ಲ. ಆದಾಗ್ಯೂ ಮಹಿಳೆಯರು ಎಂದು ಭೂಹೀನರು. ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಶೇಕಡಾ 24% ಪುರುಷರು ಭೂಮಿಯನ್ನು ಹೊಂದಿದ್ದಾರೆ, ಕೇವಲ 4% ಗ್ರಾಮೀಣ ಮಹಿಳೆಯರು ಮಾತ್ರ ಭೂಮಿಯನ್ನು ಹೊಂದಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕೇಂದು ವೇದಿಕೆ ಒತ್ತಾಯಿಸಿದೆ.

ಮಹಿಳಾ ರೈತರಿಗೆ, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಮಹಿಳಾ ರೈತರಿಗೆ ಸರ್ಕಾರ ಎಂದಿಗೂ ಆದ್ಯತೆ ನೀಡಿಲ್ಲ. ಈಗ ಇರುವ ಕಾನೂನನ್ನು ದುರ್ಬಲಗೊಳಿಸುವ ಬದಲು, ಅವರಿಗೆ ಭೂಮಿಯನ್ನು ನೀಡಬೇಕು. ಪಶುಗಳನ್ನು ಮೇಯಿಸಲಿಕ್ಕೆ, ಗುಂಪು ಕೃಷಿ, ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ ಮತ್ತು ಕೃತಕ ಮೀನುಗಾರಿಕೆಗೆ ಅನುವು ಮಾಡಿಕೊಡಬೇಕು, ಭೂರಹಿತ ಕುಟುಂಬಗಳಿಗೆ 5 ಎಕರೆ ಜಮೀನನ್ನು ಮಹಿಳೆಯನ್ನು ಸೇರಿದಂತೆ ಜಂಟಿ ಪಟ್ಟ ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಪತ್ರಿಕಾ  ಹೇಳಿಕೆಗೆ ಕವಿತಾ ಕುರುಗಂಟಿ, ಜ್ಯೋತಿ ರಾಜ್, ಇಂದಿರಾ ಕೃಷ್ಣಪ್ಪ, ಶಾರದಾ ದಾಬಡೆ, ಮಮತಾ ಯಜಮಾನ್, ಮಧು ಭೂಷಣ, ರಾಜೇಶ್ವರಿ ಜೋಶಿ, ಸುವರ್ಣ ಕುಠಾಳೆ, ಮಹಾನಂದ ತಳವಾರ, ಸ್ವಾಮಿ, ನಿಂಗಮ್ಮ ಸವಣೂರ, ಶಶಿರಾಜ್, ಕವಿತಾ ಶ್ರೀನಿವಾಸನ್, ನೀಲಮ್ಮ ಮುಂತಾದವರು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...