Homeಚಳವಳಿಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಭೂಸುಧಾರಣೆ ಕಾಯ್ದೆ ತಿದ್ದುಪಡಿಗೆ ಮಹಿಳಾ ರೈತರ ಹಕ್ಕುಗಳ ವೇದಿಕೆಯ ಖಂಡನೆ

ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ.

- Advertisement -
- Advertisement -

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲೊರಟಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ತೀವ್ರ ವಿರೋಧ ವ್ಯಕ್ತಪಡಿಸಿದೆ.

ವೇದಿಕೆಯು ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಭೂ ಸುಧಾರಣೆ ಕಾನೂನಿನಲ್ಲಿ ಕಠಿಣ ನಿಯಮಗಳು ಇದ್ದರೂ ಕೃಷಿಕರಲ್ಲದವರು ವಾಮಮಾರ್ಗ ಬಳಸಿ ಜಮೀನು ಖರೀದಿಸುತ್ತಿದ್ದಾರೆ’ ಎಂಬ ಕಾರಣಕ್ಕೆ ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ ಎಂಬ ಕಂದಾಯ ಮಂತ್ರಿಗಳಾದ ಆರ್.ಅಶೋಕ್ ಅವರು ಸಮಜಾಯಿಷಿ ಯಾರಿಗೂ ಒಪ್ಪಿಗೆ ಆಗುವಂಥದ್ದಲ್ಲ. ಕಳ್ಳ ಹಾದಿ ಬಳಸುತ್ತಿದ್ದಾರೆಂಬ ಮಾತ್ರಕ್ಕೆ ಆ ಕಳ್ಳ ಹಾದಿಯನ್ನು ರಾಜಮಾರ್ಗ ಮಾಡವು ಸರ್ಕಾರದ ಕ್ರಮ ಸರಿಯಾದುದ್ದಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ.

ಮಹಿಳಾ ರೈತರ ಹಕ್ಕುಗಳ ವೇದಿಕೆಯು (ಮಕಾಮ್-ಮಹಿಳಾ ಕಿಸಾನ್ ಅಧಿಕಾರ್ ಮಂಚ್) ರಾಷ್ಟ್ರದ ಅನೌಪಚಾರಿಕ ವೇದಿಕೆಯಾಗಿದ್ದು, ಇದು ಸುಮಾರು 24 ರಾಜ್ಯಗಳ ರೈತ  ಮಹಿಳೆಯರು, ಮಹಿಳಾ ರೈತರ ಸಾಮೂಹಿಕ ಸಂಘಟನೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸಂಶೋಧಕರು ಮತ್ತು ಕಾರ್ಯಕರ್ತರನ್ನು ಒಳಗೊಂಡಿದೆ. ಪ್ರಮುಖವಾಗಿ ಭಾರತದಲ್ಲಿನ  ಮಹಿಳಾ ರೈತರ ಗುರುತಿಸುವಿಕೆ, ಸಿಗಬೇಕಾಗಿರುವ ಮಾನ್ಯತೆ  ಮತ್ತು ಹಕ್ಕುಗಳನ್ನು ಪಡೆಯುವುದಕ್ಕೋಸ್ಕರ  ಶ್ರಮಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷಿಕರಲ್ಲದವರು ಯಾವುದೇ ಅಡೆತಡೆಗಳಿಲ್ಲದೆ ಜಮೀನು ಖರೀದಿಸಬಹುದಾದ ಅವಕಾಶ ಕಲ್ಪಿಸಿಲಿಕ್ಕಾಗಿ ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಕೃಷಿಕರಿಗಷ್ಟೇ ಅಲ್ಲ, ಗ್ರಾಮೀಣ ಭೂಹೀನ ಮತ್ತು ಭೂಮಿ ಉಳ್ಳವರ ಹಿತಾಸಕ್ತಿ ಜನರೆಲ್ಲರಿಗೂ ನಿರಾಶೆ, ಸಿಟ್ಟು ಮೂಡಿಸಿದೆ ಎಂದು ಮಹಿಳಾ ರೈತರ ಹಕ್ಕುಗಳ ವೇದಿಕೆ – ಕರ್ನಾಟಕ ಆರೋಪಿಸಿದೆ.

ಕೋವಿಡ್ -19 ಮಹಾಮಾರಿ ಸಂಕ್ರಮಣದ ಸನ್ನಿವೇಶದಲ್ಲಿ ಆರ್ಥಿಕತೆಯ “ಅಗತ್ಯ ಸೇವೆಗಳ ಮೇಲೆ ಕೇಂದ್ರೀಕೃತವಾಗರಬೇಕು. ಕೃಷಿ ಮತ್ತು ಆಹಾರ ಸುರಕ್ಷತೆಯನ್ನು ಆದ್ಯತೆಯ ವಿಷಯವಾಗಿರಬೇಕು. ಇಂತಹ ಸಂದರ್ಭದಲ್ಲಿ ಕೃಷಿ ಭೂಮಿಯನ್ನು ರೈತರಿಂದ ಕಿತ್ತುಕೊಂಡು ಕೃಷಿಯ ದಿಕ್ಕು ಬದಲಿಸಿ, ಕೃಷಿಯೇತರ ಬಳಕೆ ತಿರುಗಿಸುವುದು ಮತ್ತು ಕೃಷಿಯೇತರರಿಗೆ ಸ್ವತಃ ಸರ್ಕಾರ ಮುಂದೆ ನಿಂತು ದಾರಿ ಮಾಡಿಕೊಡುತ್ತಿರುವುದು ಅತ್ಯಂತ ಅವಿವೇಕದ ಸಂಗತಿಯಾಗಿದೆ ಎಂದು ವೇದಿಕೆ ಆರೋಪಿಸಿದೆ.

‘ಯಾವ ಕೈಗಳು ಭೂಮಿಯಲ್ಲಿ ಉಳುಮೆ ಮಾಡುತ್ತವೆಯೋ ಅ ಕೈಗಳ ಕುಟುಂಬವೇ ರೈತ ಕುಟುಂಬ’ ಎನ್ನುವುದು ನಿಜವಾದರೆ, ಮಹಿಳೆಯರಷ್ಟು ಕೈಯನ್ನು ಮಣ್ಣು ಮಾಡಿಕೊಳ್ಳುವವರು ಇನ್ನಾರು ಇಲ್ಲ. ಆದಾಗ್ಯೂ ಮಹಿಳೆಯರು ಎಂದು ಭೂಹೀನರು. ಜಾಗತಿಕವಾಗಿ ಮಹಿಳೆಯರು 66% ಗ್ರಾಮೀಣ ಕೆಲಸವನ್ನು ಮಾಡುತ್ತಾರೆ. ವಿಶ್ವದ 50% ಆಹಾರ ಪೂರೈಕೆಯನ್ನು ಮಾಡುತ್ತಾರೆ. ಕೃಷಿ ಆದಾಯದ 10% ಗಳಿಸುತ್ತಾರೆ ಮತ್ತು ಕೇವಲ 1% ರಷ್ಟು ಆಸ್ತಿಯನ್ನು ಹೊಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಶೇಕಡಾ 24% ಪುರುಷರು ಭೂಮಿಯನ್ನು ಹೊಂದಿದ್ದಾರೆ, ಕೇವಲ 4% ಗ್ರಾಮೀಣ ಮಹಿಳೆಯರು ಮಾತ್ರ ಭೂಮಿಯನ್ನು ಹೊಂದಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕೇಂದು ವೇದಿಕೆ ಒತ್ತಾಯಿಸಿದೆ.

ಮಹಿಳಾ ರೈತರಿಗೆ, ವಿಶೇಷವಾಗಿ ದಲಿತ ಮತ್ತು ಆದಿವಾಸಿ ಮಹಿಳಾ ರೈತರಿಗೆ ಸರ್ಕಾರ ಎಂದಿಗೂ ಆದ್ಯತೆ ನೀಡಿಲ್ಲ. ಈಗ ಇರುವ ಕಾನೂನನ್ನು ದುರ್ಬಲಗೊಳಿಸುವ ಬದಲು, ಅವರಿಗೆ ಭೂಮಿಯನ್ನು ನೀಡಬೇಕು. ಪಶುಗಳನ್ನು ಮೇಯಿಸಲಿಕ್ಕೆ, ಗುಂಪು ಕೃಷಿ, ಸಣ್ಣ ಅರಣ್ಯ ಉತ್ಪನ್ನಗಳ ಸಂಗ್ರಹ ಮತ್ತು ಕೃತಕ ಮೀನುಗಾರಿಕೆಗೆ ಅನುವು ಮಾಡಿಕೊಡಬೇಕು, ಭೂರಹಿತ ಕುಟುಂಬಗಳಿಗೆ 5 ಎಕರೆ ಜಮೀನನ್ನು ಮಹಿಳೆಯನ್ನು ಸೇರಿದಂತೆ ಜಂಟಿ ಪಟ್ಟ ನೀಡಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಪತ್ರಿಕಾ  ಹೇಳಿಕೆಗೆ ಕವಿತಾ ಕುರುಗಂಟಿ, ಜ್ಯೋತಿ ರಾಜ್, ಇಂದಿರಾ ಕೃಷ್ಣಪ್ಪ, ಶಾರದಾ ದಾಬಡೆ, ಮಮತಾ ಯಜಮಾನ್, ಮಧು ಭೂಷಣ, ರಾಜೇಶ್ವರಿ ಜೋಶಿ, ಸುವರ್ಣ ಕುಠಾಳೆ, ಮಹಾನಂದ ತಳವಾರ, ಸ್ವಾಮಿ, ನಿಂಗಮ್ಮ ಸವಣೂರ, ಶಶಿರಾಜ್, ಕವಿತಾ ಶ್ರೀನಿವಾಸನ್, ನೀಲಮ್ಮ ಮುಂತಾದವರು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರಕಾರ ಕೃಷಿ ಉತ್ಪನ್ನ ಮಾರಾಟದಲ್ಲಿಯೂ ಮಾಫಿಯ ಸೃಷ್ಠಿ ಮಾಡುತ್ತಿದೆ: ಕರ್ನಾಟಕ ಪ್ರಾಂತ ರೈತ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....