Homeಚಳವಳಿಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

2022ರ ಮೇ ತಿಂಗಳಿನಲ್ಲಿ ನಡೆದ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದು ಶಿಕ್ಷಕ ವೃತ್ತಿಗೆ ಆಯ್ಕೆಯಾಗಿದ್ದರೂ ಸರ್ಕಾರಗಳ ವಿಳಂಬನೀತಿಯಿಂದಾಗಿ ಸ್ಥಳನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ ಸತಾಯಿಸಲಾಗುತ್ತಿದೆ...

- Advertisement -
- Advertisement -

ಶಿಕ್ಷಕ ವೃತ್ತಿಗೆ ಆಯ್ಕೆಯಾಗಿ ವರ್ಷ ಕಳೆದರೂ ಸ್ಥಳನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ ಸತಾಯಿಸಲಾಗುತ್ತಿರುವುದನ್ನು ಖಂಡಿಸಿ, ಕೂಡಲೇ ಕೌನ್ಸೆಲಿಂಗ್ ನಡೆಸಿ ಕೆಲಸಕ್ಕೆ ಕಳಿಸಬೇಕೆಂದು ಒತ್ತಾಯಿಸಿ ಸಾವಿರಾರು ಭಾವೀ ಶಿಕ್ಷಕರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ 2022ರ ಮಾರ್ಚ್‌ನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಯಿತು. ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಯಿತು. ನವೆಂಬರ್‌ನಲ್ಲಿ 1:2 ಮತ್ತು 1:1ರ ಆಧಾರದಲ್ಲಿ 13,353 ಶಿಕ್ಷಕರನ್ನು ಆಯ್ಕೆ ಮಾಡಿ ತಾತ್ಕಾಲಿಕ ಪಟ್ಟಿ ಪ್ರಕಟ ಮಾಡಿಲಾಯಿತು. ಆಯ್ಕೆಯಾದ ಭಾವೀ ಶಿಕ್ಷಕರು ಕೊನೆಗೂ ತಮ್ಮ ಆಸೆ ನೆರವೇರಿತು ಎಂಬ ಸಂಭ್ರಮದಲ್ಲಿದ್ದರು. ಆದರೆ ಪಟ್ಟಿ ಪ್ರಕಟವಾಗಿ 9 ತಿಂಗಳಾಗುತ್ತ ಬಂದರೂ ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ ಎಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳು ಕಿಡಿಕಾರಿದರು.

ಈ ಹಿಂದೆ ಪೋಷಕರ ಜಾತಿ ಮತ್ತು ಅದಾಯ ಸಲ್ಲಿಸಿದ ವಿವಾಹಿತರನ್ನು ಸಾಮಾನ್ಯ ವರ್ಗದಲ್ಲಿ ಪರಿಗಣಿಸಿದ್ದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿದರು. ಹಾಗಾಗಿ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಪೋಷಕರ ಜಾತಿ ಮತ್ತು ಅದಾಯ ಪ್ರಮಾಣ ಪತ್ರ ಸಲ್ಲಿಸಿದ ವಿವಾಹಿತರನ್ನು ಮೀಸಲಾತಿಯಲ್ಲಿ ಪರಿಗಣಿಸುವಂತೆ ಹಾಗೂ ಇರುವ ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿ ಹೊಸ ಪಟ್ಟಿ ಬಿಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಹಾಗಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಆನಂತರ ಮಾರ್ಚ್ 08ರಂದು ಸರ್ಕಾರ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೆಲ ಅಭ್ಯರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ಆಯ್ಕೆ ಪಟ್ಟಿಗೆ ಮತ್ತೆ ತಡೆಯಾಜ್ಞೆ ತಂದಿದ್ದರು. ಆ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದರೂ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪದೇ ಪದೇ ನೇಮಕಾತಿ ಪ್ರಕ್ರಿಯೆ ಮುಂದೆ ಹೋಗುತ್ತಿರುವುದರಿಂದ ಆಕ್ರೋಶಗೊಂಡಿರುವ ಭಾವೀ ಶಿಕ್ಷಕರು ಕಳೆದ ಸರ್ಕಾರದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು. ಆದರೆ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸದ್ಯ ಭಾವೀ ಶಿಕ್ಷಕರು ಖಾಸಗಿ ಶಾಲೆಗಳಿಂದ ಹೊರಹಾಕಿಸಿಕೊಂಡಿದ್ದಾರೆ. ಸರ್ಕಾರಿ ಶಿಕ್ಷಕರಾಗಿ ಆಯ್ಕೆಯಾಗಿರುವುದರಿಂದ ಈ ವರ್ಷದ ಅಂತ್ಯಕ್ಕೆ ಅವರನ್ನು ಕೆಲಸದಿಂದ ತೆಗೆಯಲಾಗಿದೆ. ಅವರ ದಾಖಲೆ ಪತ್ರಗಳು ಪರಿಶೀಲನೆಗಾಗಿ ಇಲಾಖೆ ಬಳಿ ಇವೆ. ಹೊಸದಾಗಿ ಕೆಲಸಕ್ಕೂ ಸೇರಲೂ ಆಗುತ್ತಿಲ್ಲ. ಇನ್ನೊಂದೆ ಸರ್ಕಾರಿ ಕೆಲಸದ ನೇಮಕಾತಿ ಆದೇಶ ಸಿಗದುದ್ದರಿಂದ ಎರಡು ಕಡೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಅಲೆಯಬೇಕಾದ, ಜೀವನ ನಿರ್ವಹಣೆಗೆ ಸಾಲದ ಮೇಲೆ ಸಾಲ ಮಾಡಬೇಕಾದ ದುಸ್ಥಿತಿಯಲ್ಲಿದ್ದಾರೆ ಎಂದು ಹಲವು ಅಭ್ಯರ್ಥಿಗಳು ಅಳಲು ತೋಡಿಕೊಂಡರು.

ಇನ್ನೊಂದೆಡೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದುಕಾಣುತ್ತಿದೆ. ಅದರಿಂದ ಮಕ್ಕಳ ಶಿಕ್ಷಣ ಕುಂಠಿತಗೊಳ್ಳಲಿದೆ. ಮುಂದೆ ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆದರೆ ಮತ್ತೆ ನೀತಿ ಸಂಹಿತೆ ಜಾರಿಯಾಗಿ ಪ್ರಕ್ರಿಯೆ ಮತ್ತಷ್ಟು ತಿಂಗಳು ಮುಂದೆ ಹೋಗುವ ಅಪಾಯವಿದೆ. ಹಾಗಾಗಿ ಕೂಡಲೇ ಆದೇಶ ಪತ್ರ ನೀಡಿ ಆಯ್ಕೆಯಾದವರನ್ನು ಶಿಕ್ಷಕರಾಗಿ ನೇಮಿಸಬೇಕೆಂದು ಅಭ್ಯರ್ಥಿಗಳು ಒತ್ತಾಯಿಸಿದರು.

ಇದನ್ನೂ ಓದಿ: ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...