Homeಚಳವಳಿಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

2022ರ ಮೇ ತಿಂಗಳಿನಲ್ಲಿ ನಡೆದ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದು ಶಿಕ್ಷಕ ವೃತ್ತಿಗೆ ಆಯ್ಕೆಯಾಗಿದ್ದರೂ ಸರ್ಕಾರಗಳ ವಿಳಂಬನೀತಿಯಿಂದಾಗಿ ಸ್ಥಳನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ ಸತಾಯಿಸಲಾಗುತ್ತಿದೆ...

- Advertisement -
- Advertisement -

ಶಿಕ್ಷಕ ವೃತ್ತಿಗೆ ಆಯ್ಕೆಯಾಗಿ ವರ್ಷ ಕಳೆದರೂ ಸ್ಥಳನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ ಸತಾಯಿಸಲಾಗುತ್ತಿರುವುದನ್ನು ಖಂಡಿಸಿ, ಕೂಡಲೇ ಕೌನ್ಸೆಲಿಂಗ್ ನಡೆಸಿ ಕೆಲಸಕ್ಕೆ ಕಳಿಸಬೇಕೆಂದು ಒತ್ತಾಯಿಸಿ ಸಾವಿರಾರು ಭಾವೀ ಶಿಕ್ಷಕರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ 2022ರ ಮಾರ್ಚ್‌ನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಯಿತು. ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಯಿತು. ನವೆಂಬರ್‌ನಲ್ಲಿ 1:2 ಮತ್ತು 1:1ರ ಆಧಾರದಲ್ಲಿ 13,353 ಶಿಕ್ಷಕರನ್ನು ಆಯ್ಕೆ ಮಾಡಿ ತಾತ್ಕಾಲಿಕ ಪಟ್ಟಿ ಪ್ರಕಟ ಮಾಡಿಲಾಯಿತು. ಆಯ್ಕೆಯಾದ ಭಾವೀ ಶಿಕ್ಷಕರು ಕೊನೆಗೂ ತಮ್ಮ ಆಸೆ ನೆರವೇರಿತು ಎಂಬ ಸಂಭ್ರಮದಲ್ಲಿದ್ದರು. ಆದರೆ ಪಟ್ಟಿ ಪ್ರಕಟವಾಗಿ 9 ತಿಂಗಳಾಗುತ್ತ ಬಂದರೂ ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ ಎಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳು ಕಿಡಿಕಾರಿದರು.

ಈ ಹಿಂದೆ ಪೋಷಕರ ಜಾತಿ ಮತ್ತು ಅದಾಯ ಸಲ್ಲಿಸಿದ ವಿವಾಹಿತರನ್ನು ಸಾಮಾನ್ಯ ವರ್ಗದಲ್ಲಿ ಪರಿಗಣಿಸಿದ್ದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿದರು. ಹಾಗಾಗಿ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಪೋಷಕರ ಜಾತಿ ಮತ್ತು ಅದಾಯ ಪ್ರಮಾಣ ಪತ್ರ ಸಲ್ಲಿಸಿದ ವಿವಾಹಿತರನ್ನು ಮೀಸಲಾತಿಯಲ್ಲಿ ಪರಿಗಣಿಸುವಂತೆ ಹಾಗೂ ಇರುವ ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿ ಹೊಸ ಪಟ್ಟಿ ಬಿಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಹಾಗಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಆನಂತರ ಮಾರ್ಚ್ 08ರಂದು ಸರ್ಕಾರ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೆಲ ಅಭ್ಯರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ಆಯ್ಕೆ ಪಟ್ಟಿಗೆ ಮತ್ತೆ ತಡೆಯಾಜ್ಞೆ ತಂದಿದ್ದರು. ಆ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದರೂ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪದೇ ಪದೇ ನೇಮಕಾತಿ ಪ್ರಕ್ರಿಯೆ ಮುಂದೆ ಹೋಗುತ್ತಿರುವುದರಿಂದ ಆಕ್ರೋಶಗೊಂಡಿರುವ ಭಾವೀ ಶಿಕ್ಷಕರು ಕಳೆದ ಸರ್ಕಾರದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು. ಆದರೆ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸದ್ಯ ಭಾವೀ ಶಿಕ್ಷಕರು ಖಾಸಗಿ ಶಾಲೆಗಳಿಂದ ಹೊರಹಾಕಿಸಿಕೊಂಡಿದ್ದಾರೆ. ಸರ್ಕಾರಿ ಶಿಕ್ಷಕರಾಗಿ ಆಯ್ಕೆಯಾಗಿರುವುದರಿಂದ ಈ ವರ್ಷದ ಅಂತ್ಯಕ್ಕೆ ಅವರನ್ನು ಕೆಲಸದಿಂದ ತೆಗೆಯಲಾಗಿದೆ. ಅವರ ದಾಖಲೆ ಪತ್ರಗಳು ಪರಿಶೀಲನೆಗಾಗಿ ಇಲಾಖೆ ಬಳಿ ಇವೆ. ಹೊಸದಾಗಿ ಕೆಲಸಕ್ಕೂ ಸೇರಲೂ ಆಗುತ್ತಿಲ್ಲ. ಇನ್ನೊಂದೆ ಸರ್ಕಾರಿ ಕೆಲಸದ ನೇಮಕಾತಿ ಆದೇಶ ಸಿಗದುದ್ದರಿಂದ ಎರಡು ಕಡೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಅಲೆಯಬೇಕಾದ, ಜೀವನ ನಿರ್ವಹಣೆಗೆ ಸಾಲದ ಮೇಲೆ ಸಾಲ ಮಾಡಬೇಕಾದ ದುಸ್ಥಿತಿಯಲ್ಲಿದ್ದಾರೆ ಎಂದು ಹಲವು ಅಭ್ಯರ್ಥಿಗಳು ಅಳಲು ತೋಡಿಕೊಂಡರು.

ಇನ್ನೊಂದೆಡೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದುಕಾಣುತ್ತಿದೆ. ಅದರಿಂದ ಮಕ್ಕಳ ಶಿಕ್ಷಣ ಕುಂಠಿತಗೊಳ್ಳಲಿದೆ. ಮುಂದೆ ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆದರೆ ಮತ್ತೆ ನೀತಿ ಸಂಹಿತೆ ಜಾರಿಯಾಗಿ ಪ್ರಕ್ರಿಯೆ ಮತ್ತಷ್ಟು ತಿಂಗಳು ಮುಂದೆ ಹೋಗುವ ಅಪಾಯವಿದೆ. ಹಾಗಾಗಿ ಕೂಡಲೇ ಆದೇಶ ಪತ್ರ ನೀಡಿ ಆಯ್ಕೆಯಾದವರನ್ನು ಶಿಕ್ಷಕರಾಗಿ ನೇಮಿಸಬೇಕೆಂದು ಅಭ್ಯರ್ಥಿಗಳು ಒತ್ತಾಯಿಸಿದರು.

ಇದನ್ನೂ ಓದಿ: ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...