Homeಚಳವಳಿಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

2022ರ ಮೇ ತಿಂಗಳಿನಲ್ಲಿ ನಡೆದ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದು ಶಿಕ್ಷಕ ವೃತ್ತಿಗೆ ಆಯ್ಕೆಯಾಗಿದ್ದರೂ ಸರ್ಕಾರಗಳ ವಿಳಂಬನೀತಿಯಿಂದಾಗಿ ಸ್ಥಳನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ ಸತಾಯಿಸಲಾಗುತ್ತಿದೆ...

- Advertisement -
- Advertisement -

ಶಿಕ್ಷಕ ವೃತ್ತಿಗೆ ಆಯ್ಕೆಯಾಗಿ ವರ್ಷ ಕಳೆದರೂ ಸ್ಥಳನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ ಸತಾಯಿಸಲಾಗುತ್ತಿರುವುದನ್ನು ಖಂಡಿಸಿ, ಕೂಡಲೇ ಕೌನ್ಸೆಲಿಂಗ್ ನಡೆಸಿ ಕೆಲಸಕ್ಕೆ ಕಳಿಸಬೇಕೆಂದು ಒತ್ತಾಯಿಸಿ ಸಾವಿರಾರು ಭಾವೀ ಶಿಕ್ಷಕರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ 2022ರ ಮಾರ್ಚ್‌ನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಯಿತು. ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಯಿತು. ನವೆಂಬರ್‌ನಲ್ಲಿ 1:2 ಮತ್ತು 1:1ರ ಆಧಾರದಲ್ಲಿ 13,353 ಶಿಕ್ಷಕರನ್ನು ಆಯ್ಕೆ ಮಾಡಿ ತಾತ್ಕಾಲಿಕ ಪಟ್ಟಿ ಪ್ರಕಟ ಮಾಡಿಲಾಯಿತು. ಆಯ್ಕೆಯಾದ ಭಾವೀ ಶಿಕ್ಷಕರು ಕೊನೆಗೂ ತಮ್ಮ ಆಸೆ ನೆರವೇರಿತು ಎಂಬ ಸಂಭ್ರಮದಲ್ಲಿದ್ದರು. ಆದರೆ ಪಟ್ಟಿ ಪ್ರಕಟವಾಗಿ 9 ತಿಂಗಳಾಗುತ್ತ ಬಂದರೂ ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ ಎಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳು ಕಿಡಿಕಾರಿದರು.

ಈ ಹಿಂದೆ ಪೋಷಕರ ಜಾತಿ ಮತ್ತು ಅದಾಯ ಸಲ್ಲಿಸಿದ ವಿವಾಹಿತರನ್ನು ಸಾಮಾನ್ಯ ವರ್ಗದಲ್ಲಿ ಪರಿಗಣಿಸಿದ್ದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿದರು. ಹಾಗಾಗಿ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಪೋಷಕರ ಜಾತಿ ಮತ್ತು ಅದಾಯ ಪ್ರಮಾಣ ಪತ್ರ ಸಲ್ಲಿಸಿದ ವಿವಾಹಿತರನ್ನು ಮೀಸಲಾತಿಯಲ್ಲಿ ಪರಿಗಣಿಸುವಂತೆ ಹಾಗೂ ಇರುವ ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿ ಹೊಸ ಪಟ್ಟಿ ಬಿಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಹಾಗಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಆನಂತರ ಮಾರ್ಚ್ 08ರಂದು ಸರ್ಕಾರ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೆಲ ಅಭ್ಯರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ಆಯ್ಕೆ ಪಟ್ಟಿಗೆ ಮತ್ತೆ ತಡೆಯಾಜ್ಞೆ ತಂದಿದ್ದರು. ಆ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದರೂ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪದೇ ಪದೇ ನೇಮಕಾತಿ ಪ್ರಕ್ರಿಯೆ ಮುಂದೆ ಹೋಗುತ್ತಿರುವುದರಿಂದ ಆಕ್ರೋಶಗೊಂಡಿರುವ ಭಾವೀ ಶಿಕ್ಷಕರು ಕಳೆದ ಸರ್ಕಾರದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು. ಆದರೆ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸದ್ಯ ಭಾವೀ ಶಿಕ್ಷಕರು ಖಾಸಗಿ ಶಾಲೆಗಳಿಂದ ಹೊರಹಾಕಿಸಿಕೊಂಡಿದ್ದಾರೆ. ಸರ್ಕಾರಿ ಶಿಕ್ಷಕರಾಗಿ ಆಯ್ಕೆಯಾಗಿರುವುದರಿಂದ ಈ ವರ್ಷದ ಅಂತ್ಯಕ್ಕೆ ಅವರನ್ನು ಕೆಲಸದಿಂದ ತೆಗೆಯಲಾಗಿದೆ. ಅವರ ದಾಖಲೆ ಪತ್ರಗಳು ಪರಿಶೀಲನೆಗಾಗಿ ಇಲಾಖೆ ಬಳಿ ಇವೆ. ಹೊಸದಾಗಿ ಕೆಲಸಕ್ಕೂ ಸೇರಲೂ ಆಗುತ್ತಿಲ್ಲ. ಇನ್ನೊಂದೆ ಸರ್ಕಾರಿ ಕೆಲಸದ ನೇಮಕಾತಿ ಆದೇಶ ಸಿಗದುದ್ದರಿಂದ ಎರಡು ಕಡೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಅಲೆಯಬೇಕಾದ, ಜೀವನ ನಿರ್ವಹಣೆಗೆ ಸಾಲದ ಮೇಲೆ ಸಾಲ ಮಾಡಬೇಕಾದ ದುಸ್ಥಿತಿಯಲ್ಲಿದ್ದಾರೆ ಎಂದು ಹಲವು ಅಭ್ಯರ್ಥಿಗಳು ಅಳಲು ತೋಡಿಕೊಂಡರು.

ಇನ್ನೊಂದೆಡೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದುಕಾಣುತ್ತಿದೆ. ಅದರಿಂದ ಮಕ್ಕಳ ಶಿಕ್ಷಣ ಕುಂಠಿತಗೊಳ್ಳಲಿದೆ. ಮುಂದೆ ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆದರೆ ಮತ್ತೆ ನೀತಿ ಸಂಹಿತೆ ಜಾರಿಯಾಗಿ ಪ್ರಕ್ರಿಯೆ ಮತ್ತಷ್ಟು ತಿಂಗಳು ಮುಂದೆ ಹೋಗುವ ಅಪಾಯವಿದೆ. ಹಾಗಾಗಿ ಕೂಡಲೇ ಆದೇಶ ಪತ್ರ ನೀಡಿ ಆಯ್ಕೆಯಾದವರನ್ನು ಶಿಕ್ಷಕರಾಗಿ ನೇಮಿಸಬೇಕೆಂದು ಅಭ್ಯರ್ಥಿಗಳು ಒತ್ತಾಯಿಸಿದರು.

ಇದನ್ನೂ ಓದಿ: ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...