Homeಚಳವಳಿಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಿ: ಬೆಂಗಳೂರಿನಲ್ಲಿ ಭಾವೀ ಶಿಕ್ಷಕರ ಹೋರಾಟ

2022ರ ಮೇ ತಿಂಗಳಿನಲ್ಲಿ ನಡೆದ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದು ಶಿಕ್ಷಕ ವೃತ್ತಿಗೆ ಆಯ್ಕೆಯಾಗಿದ್ದರೂ ಸರ್ಕಾರಗಳ ವಿಳಂಬನೀತಿಯಿಂದಾಗಿ ಸ್ಥಳನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ ಸತಾಯಿಸಲಾಗುತ್ತಿದೆ...

- Advertisement -
- Advertisement -

ಶಿಕ್ಷಕ ವೃತ್ತಿಗೆ ಆಯ್ಕೆಯಾಗಿ ವರ್ಷ ಕಳೆದರೂ ಸ್ಥಳನಿಯುಕ್ತಿ ಮಾಡದೆ, ಆದೇಶ ಪ್ರತಿ ನೀಡದೆ ಸತಾಯಿಸಲಾಗುತ್ತಿರುವುದನ್ನು ಖಂಡಿಸಿ, ಕೂಡಲೇ ಕೌನ್ಸೆಲಿಂಗ್ ನಡೆಸಿ ಕೆಲಸಕ್ಕೆ ಕಳಿಸಬೇಕೆಂದು ಒತ್ತಾಯಿಸಿ ಸಾವಿರಾರು ಭಾವೀ ಶಿಕ್ಷಕರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ 2022ರ ಮಾರ್ಚ್‌ನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಯಿತು. ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಯಿತು. ನವೆಂಬರ್‌ನಲ್ಲಿ 1:2 ಮತ್ತು 1:1ರ ಆಧಾರದಲ್ಲಿ 13,353 ಶಿಕ್ಷಕರನ್ನು ಆಯ್ಕೆ ಮಾಡಿ ತಾತ್ಕಾಲಿಕ ಪಟ್ಟಿ ಪ್ರಕಟ ಮಾಡಿಲಾಯಿತು. ಆಯ್ಕೆಯಾದ ಭಾವೀ ಶಿಕ್ಷಕರು ಕೊನೆಗೂ ತಮ್ಮ ಆಸೆ ನೆರವೇರಿತು ಎಂಬ ಸಂಭ್ರಮದಲ್ಲಿದ್ದರು. ಆದರೆ ಪಟ್ಟಿ ಪ್ರಕಟವಾಗಿ 9 ತಿಂಗಳಾಗುತ್ತ ಬಂದರೂ ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ ಎಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳು ಕಿಡಿಕಾರಿದರು.

ಈ ಹಿಂದೆ ಪೋಷಕರ ಜಾತಿ ಮತ್ತು ಅದಾಯ ಸಲ್ಲಿಸಿದ ವಿವಾಹಿತರನ್ನು ಸಾಮಾನ್ಯ ವರ್ಗದಲ್ಲಿ ಪರಿಗಣಿಸಿದ್ದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿದರು. ಹಾಗಾಗಿ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಪೋಷಕರ ಜಾತಿ ಮತ್ತು ಅದಾಯ ಪ್ರಮಾಣ ಪತ್ರ ಸಲ್ಲಿಸಿದ ವಿವಾಹಿತರನ್ನು ಮೀಸಲಾತಿಯಲ್ಲಿ ಪರಿಗಣಿಸುವಂತೆ ಹಾಗೂ ಇರುವ ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿ ಹೊಸ ಪಟ್ಟಿ ಬಿಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಹಾಗಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಆನಂತರ ಮಾರ್ಚ್ 08ರಂದು ಸರ್ಕಾರ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೆಲ ಅಭ್ಯರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ಆಯ್ಕೆ ಪಟ್ಟಿಗೆ ಮತ್ತೆ ತಡೆಯಾಜ್ಞೆ ತಂದಿದ್ದರು. ಆ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದರೂ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಪದೇ ಪದೇ ನೇಮಕಾತಿ ಪ್ರಕ್ರಿಯೆ ಮುಂದೆ ಹೋಗುತ್ತಿರುವುದರಿಂದ ಆಕ್ರೋಶಗೊಂಡಿರುವ ಭಾವೀ ಶಿಕ್ಷಕರು ಕಳೆದ ಸರ್ಕಾರದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದರು. ಆದರೆ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಕೂಡಲೇ ಸ್ಥಳನಿಯುಕ್ತಿ ಮಾಡಿ ಆದೇಶ ಪ್ರತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸದ್ಯ ಭಾವೀ ಶಿಕ್ಷಕರು ಖಾಸಗಿ ಶಾಲೆಗಳಿಂದ ಹೊರಹಾಕಿಸಿಕೊಂಡಿದ್ದಾರೆ. ಸರ್ಕಾರಿ ಶಿಕ್ಷಕರಾಗಿ ಆಯ್ಕೆಯಾಗಿರುವುದರಿಂದ ಈ ವರ್ಷದ ಅಂತ್ಯಕ್ಕೆ ಅವರನ್ನು ಕೆಲಸದಿಂದ ತೆಗೆಯಲಾಗಿದೆ. ಅವರ ದಾಖಲೆ ಪತ್ರಗಳು ಪರಿಶೀಲನೆಗಾಗಿ ಇಲಾಖೆ ಬಳಿ ಇವೆ. ಹೊಸದಾಗಿ ಕೆಲಸಕ್ಕೂ ಸೇರಲೂ ಆಗುತ್ತಿಲ್ಲ. ಇನ್ನೊಂದೆ ಸರ್ಕಾರಿ ಕೆಲಸದ ನೇಮಕಾತಿ ಆದೇಶ ಸಿಗದುದ್ದರಿಂದ ಎರಡು ಕಡೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಅಲೆಯಬೇಕಾದ, ಜೀವನ ನಿರ್ವಹಣೆಗೆ ಸಾಲದ ಮೇಲೆ ಸಾಲ ಮಾಡಬೇಕಾದ ದುಸ್ಥಿತಿಯಲ್ಲಿದ್ದಾರೆ ಎಂದು ಹಲವು ಅಭ್ಯರ್ಥಿಗಳು ಅಳಲು ತೋಡಿಕೊಂಡರು.

ಇನ್ನೊಂದೆಡೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದುಕಾಣುತ್ತಿದೆ. ಅದರಿಂದ ಮಕ್ಕಳ ಶಿಕ್ಷಣ ಕುಂಠಿತಗೊಳ್ಳಲಿದೆ. ಮುಂದೆ ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆದರೆ ಮತ್ತೆ ನೀತಿ ಸಂಹಿತೆ ಜಾರಿಯಾಗಿ ಪ್ರಕ್ರಿಯೆ ಮತ್ತಷ್ಟು ತಿಂಗಳು ಮುಂದೆ ಹೋಗುವ ಅಪಾಯವಿದೆ. ಹಾಗಾಗಿ ಕೂಡಲೇ ಆದೇಶ ಪತ್ರ ನೀಡಿ ಆಯ್ಕೆಯಾದವರನ್ನು ಶಿಕ್ಷಕರಾಗಿ ನೇಮಿಸಬೇಕೆಂದು ಅಭ್ಯರ್ಥಿಗಳು ಒತ್ತಾಯಿಸಿದರು.

ಇದನ್ನೂ ಓದಿ: ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಲು ಒತ್ತಾಯ: ಬಜೆಟ್‌ನಲ್ಲಿ ಘೋಷಿಸುವಂತೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...