Homeಮುಖಪುಟಮಕ್ಕಳಿಗೆ ವೇದಗಣಿತ ತರಬೇತಿ ಬದಲು ಸಂವಿಧಾನ ಜಾಗೃತಿ ಮೂಡಿಸಿ: ದಲಿತ ಮುಖಂಡರ ಪಟ್ಟು

ಮಕ್ಕಳಿಗೆ ವೇದಗಣಿತ ತರಬೇತಿ ಬದಲು ಸಂವಿಧಾನ ಜಾಗೃತಿ ಮೂಡಿಸಿ: ದಲಿತ ಮುಖಂಡರ ಪಟ್ಟು

ದಲಿತರ ಹಣ ದುರ್ಬಳಕೆಯಾಗುತ್ತಿರುವುದು ಮತ್ತು ದಲಿತ ಮಕ್ಕಳಿಗೆ ಅವೈಜ್ಞಾನಿಕ ವೇದ ಗಣಿತ ಕಲಿಸಿ ದಿಕ್ಕುತಪ್ಪಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. - ಹ.ರಾ ಮಹೇಶ್

- Advertisement -
- Advertisement -

ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನದಲ್ಲಿ ಕರ್ನಾಟಕ ಸರ್ಕಾರವು ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವುದಕ್ಕೆ ದಲಿತ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದಲಿತರಿಗಾಗಿ ಮೀಸಲಾದ ಹಣದ ದುರ್ಬಳಕೆ ಮಾಡುವ ಈ ಅವೈಜ್ಞಾನಿಕ ಕ್ರಮವನ್ನು ಕೂಡಲೇ ತಡೆಹಿಡಿಯಬೇಕು ಎಂದು ಒತ್ತಾಯಿಸಿ ಸರ್ಕಾರದ ಮುಖ್ಯಕಾರ್ಯದರ್ಶಿಯವರಿಗೆ ಸಮಾಜಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೆ ಹಾಗು ಪಂಚಾಯತ್ ರಾಜ್ ಇಲಾಖೆಯ ಅಪರ ಕಾರ್ಯದರ್ಶಿಗಳಿಗೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರು ಮತ್ತು ವಕೀಲರಾದ ಹ.ರಾ ಮಹೇಶ್‌ರವರು, “ಈ ಯೋಜನೆ ನಮ್ಮ ಗಮನಕ್ಕೆ ಬಾರದೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಅದನ್ನು ನಂಬಲು ನಾವು ಸಿದ್ದರಿಲ್ಲ. ಆದರೂ ಸರ್ಕಾರ ಈ ಕೂಡಲೇ ಮತ್ತೊಂದು ಆದೇಶ ಹೊರಡಿಸಿ ಈ ಯೋಜನೆಯನ್ನು ಹಿಂಪಡೆಯಬೇಕು. ಈ ತಪ್ಪು ಎಸಗಿದ ಅಧಿಕಾರಿಗಳ ಮೇಲೆ ಯಾವ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಬೇಕು. ದಲಿತರಿಗಾಗಿ ಮೀಸಲಾದ ಹಣದಲ್ಲಿ ಎಲ್ಲಾ ವರ್ಗದ ಮಕ್ಕಳಿಗೆ ಸಂವಿಧಾನ ಜಾಗೃತಿ ಮೂಡಿಸಲು ಬಳಸಬೇಕು ಎಂದು ಒತ್ತಾಯಿಸಿದ್ದೇವೆ” ಎಂದರು.

SCSP TSP ಹಣವನ್ನು ದಲಿತೇತರ ಸಂಸ್ಥೆಗಳಿಗೆ ನೀಡುವುದು ಕಾಯ್ದೆ ಪ್ರಕಾರ ಅಪರಾಧವಾಗಿದೆ ಎಂಬುದನ್ನು ಅಧಿಕಾರಿಗಳಿಗೆ ತಿಳಿಸಿದ್ದೇವೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಕಾರ್ಯದರ್ಶಿಗಳಾದ ಎಲ್.ಕೆ ಅತೀಕ್‌ರವರು ಆಗಿರುವ ಪ್ರಮಾದವನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ ಮತ್ತೊಂದು ತಿದ್ದೋಲೆಯನ್ನು ಕಳಿಸುತ್ತೇವೆ. ತಪ್ಪಿತಸ್ಥರಿಗೆ ಕ್ರಮವನ್ನೂ ಕೈಗೊಳ್ಳುತ್ತೇವೆ ಎಂದು ತಿಳಿಸಿದರು ಎಂದರು.

ಹ.ರಾ ಮಹೇಶ್ ಮತ್ತು ಇತರ ವಕೀಲರು ಹಕ್ಕೊತ್ತಾಯ ಸಲ್ಲಿಸುತ್ತಿರುವುದು

ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಾದ ಮಣಿವಣ್ಣನ್‌ರವರ ಜೊತೆ ದೂರವಾಣಿ ಮೂಲಕ ಮಾತನಾಡಿ ನಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿದ್ದೇವೆ. ಅವರು ಸೋಮವಾರ ಸಂಜೆ ಈ ಕುರಿತು ಸಭೆ ಕರೆದಿದ್ದಾರೆ. ಒಟ್ಟಿನಲ್ಲಿ ದಲಿತರ ಹಣ ದುರ್ಬಳಕೆಯಾಗುತ್ತಿರುವುದು ಮತ್ತು ದಲಿತ ಮಕ್ಕಳಿಗೆ ಅವೈಜ್ಞಾನಿಕ ವೇದ ಗಣಿತ ಕಲಿಸಿ ದಿಕ್ಕುತಪ್ಪಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈ ಕುರಿತು ಹೋರಾಟ ಮುಂದುವರೆಯುತ್ತದೆ ಎಂದು ಹ.ರಾ ಮಹೇಶ್‌ ಹೇಳಿದರು.

ಏನಿದು ವಿವಾದ?

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಜನವರಿ 06, 2022ರಂದು ಪತ್ರ ಬರೆದಿದ್ದರು. ಅದರಲ್ಲಿ “ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಬಳಸಿಕೊಳ್ಳಬಹುದು” ಎಂದು ಸೂಚಿಸಲಾಗಿತ್ತು. ಅದರಂತೆ ಈ ತರಬೇತಿ ನೀಡುವ ಟೆಂಡರ್‌ ಅನ್ನು ಹಿರಿಯೂರಿನ ಎವಿಎಂ ಎಂಬ ಸಂಸ್ಥೆಗೆ ನೀಡಲಾಗಿದೆ. ಅದಕ್ಕಾಗಿ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳು ಒಂದು ಲಕ್ಷ ರೂಗಳನ್ನು ಈ ಸಂಸ್ಥೆಗೆ ಚೆಕ್ ಮೂಲಕ ನೀಡಬೇಕು ಸೂಚಿಸಲಾಗಿದೆ.

ಈ ಎವಿಎಂ ಸಂಸ್ಥೆಯು ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಈ ತರಬೇತಿಯನ್ನು ಜಾರಿಗೊಳಿಸಲು ಮಧ್ಯವರ್ತಿಗಳಿಗೆ ಸಬ್‌ ಟೆಂಡರ್ ನೀಡುತ್ತಿದೆ. ಈ ಮಧ್ಯವರ್ತಿಗಳು ಪ್ರತಿ ತಾಲ್ಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿಗಳ ಜೊತೆ ಸಮನ್ವಯ ಸಾಧಿಸಿ ಈ ತರಬೇತಿ ಯೋಜನೆ ಜಾರಿಯಾಗುವಂತೆ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ. ಅಂದರೆ ಪ್ರತಿ ಗ್ರಾಮ ಪಂಚಾಯ್ತಿಗಳು ಎವಿಎಂ ಹೆಸರಿಗೆ ಒಂದು ಲಕ್ಷ ರೂಗಳ ಚೆಕ್ ಹಾಕುವಂತೆ ಆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿಗಳ ಪಿಡಿಓಗಳನ್ನು ಮನವೊಲಿಸುವುದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು, ತರಬೇತಿಯ ವರದಿಗಳನ್ನು ಸಲ್ಲಿಸುವ ಕೆಲಸ ಅವರದಾಗಿದೆ. ಅದಕ್ಕೆ ಪ್ರತಿಯಾಗಿ ಮಧ್ಯವರ್ತಿಗಳು ಎವಿಎಂ ಅಕಾಡೆಮಿಯಿಂದ ಇಂತಿಷ್ಟು ಹಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ಮಕ್ಕಳಿಗೆ ವೇದ ಗಣಿತ ಹೇಳಿಕೊಡಲು ಸರ್ಕಾರಿ ಶಾಲೆಗಳ ಗಣಿತ ಶಿಕ್ಷಕರನ್ನೇ ಬಳಸಿಕೊಳ್ಳಲಾಗುತ್ತಿದೆ. ತಾಲ್ಲೂಕು ಮಟ್ಟದಲ್ಲಿ ಗಣಿತ ಶಿಕ್ಷಕರನ್ನು ಸೇರಿಸಿ ಅವರಿಗೆ ವೇದ ಗಣಿತದ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ. ಆ ಶಿಕ್ಷಕರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ದಲಿತ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ತರಬೇತಿಗೆ ಒಳಪಡುವ ಪ್ರತಿ ವಿದ್ಯಾರ್ಥಿಗೂ ಒಂದು ಟೀಶರ್ಟ್, ಕಲಿಕಾ ನೋಟ್ಸ್‌ಗಳನ್ನು ಒದಗಿಸಲಾಗುತ್ತದೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಗ್ರಾಮೀಣಾಭಿವೃದ್ದಿ ಇಲಾಖೆಯು ಶಿಕ್ಷಣ ಇಲಾಖೆಯಲ್ಲಿ ತಲೆ ಹಾಕುತ್ತಿರುವುದೇಕೆ ಎಂಬ ಪ್ರಶ್ನೆ ಎದ್ದಿದೆ. ಒಂದಷ್ಟು ಪುಸ್ತಕ, ಒಂದು ಟೀ ಶರ್ಟ್ ನೀಡುವುದಕ್ಕೆ 60 ಕೋಟಿ ರೂ ಹಣ ಖರ್ಚಾಗುವುದಿಲ್ಲ. ಹಣ ಲೂಟಿ ಹೊಡೆಯಲೆಂದೇ ಈ ಯೋಜನೆ ಸೃಷ್ಟಿಸಲಾಗಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಇನ್ನೊಂದೆಡೆ ಈಗಾಗಲೇ ಶಾಲೆಗಳಲ್ಲಿ ಗಣಿತ ಕಲಿಸುತ್ತಿರುವಾಗ ವೈಜ್ಞಾನಿಕವಲ್ಲದ, ಗೊಂದಲ ಮೂಡಿಸುವ ಈ ವೇದ ಗಣಿತ ತರಬೇತಿ ಬೇಡ ಎಂದು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳ ಮಕ್ಕಳ ಮೇಲೆ ಪ್ರಯೋಗ ಸಲ್ಲದು -ಡಾ.ವಿ.ಪಿ ನಿರಂಜನಾರಾಧ್ಯ

ನಮ್ಮ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲೆ ಮಾಟ, ಮಂತ್ರ, ಮ್ಯಾಜಿಕ್‌ನಂತಹ ಪಾಠಗಳನ್ನು ಹೇರುವುದು ಏಕೆ? ಇದರಿಂದ ಮಕ್ಕಳಿಗೆ ಬಹಳ ಗೊಂದಲವಾಗುತ್ತದೆ. ಆ ಗಣಿತ ಕಲಿಯಬೇಕಾ, ಈ ಗಣಿತ ಕಲಿಯಬೇಕಾ ಎಂದು ತಳಮಳಗೊಳ್ಳುತ್ತಾರೆ. ಈ ವೇದಗಣಿತ ಕಲಿಸುವ ಪ್ರಯೋಗಕ್ಕೆ ನಮ್ಮ ಸರ್ಕಾರಿ ಶಾಲಾ ಮಕ್ಕಳನ್ನೆ ಏಕೆ ಬಲಿಪಶು ಮಾಡಲಾಗುತ್ತಿದೆ? ಈ ವೇದಗಣಿತದಿಂದ ಯಾವುದೇ ಪ್ರಯೋಜನವಾಗುವುದಿಲ್ಲವೆಂದು ಈ ಹಿಂದೆಯೇ ಹಲವಾರು ಗಣಿತಜ್ಞರು ವಾದಿಸಿದ್ದಾರೆ. ಅದು ವೈಜ್ಞಾನಿಕವೂ ಅಲ್ಲ, ಆಧುನಿಕ ಶಿಕ್ಷಣಕ್ಕೆ ಹೊಂದಿಕೊಳ್ಳುವುದು ಇಲ್ಲ ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಅಭಿಪ್ರಾಯಪಟ್ಟಿದ್ದಾರೆ.

ವೇದಗಣಿತದಿಂದ ಮಕ್ಕಳು ನಿಜವಾದ ಗಣಿತ ಕಲಿಯದಿರುವ ಅಪಾಯವಿದೆ – ಎಸ್.ಬಾಲಚಂದ್ರ ರಾವ್

ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಅಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯೂಸ್ ವಿಭಾಗದ ಗೌರವ ನಿರ್ದೇಶಕರೂ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಬಾಲಚಂದ್ರ ರಾವ್ ರವರು ಈ ವೇದಗಣಿತ ಕಲಿಕೆಯಿಂದ ಮಕ್ಕಳಿ ನಿಜವಾದ ಗಣಿತ ಕಲಿಯದಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. “ವೇದಗಣಿತ ಕಲಿಕೆಯಿಂದ ಏನೂ ಉಪಯೋಗವಿಲ್ಲ. ಅದರಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಶಾರ್ಟ್‌ಕಟ್ ವಿಧಾನದಲ್ಲಿ ಗುಣಾಕಾರ ಮತ್ತು ಭಾಗಕಾರವನ್ನು ಹೇಳಿಕೊಡಲಾಗುತ್ತದೆ. ಆದರೆ ಅದರಿಂದ ಗಣಿತಕ್ಕೆ ಬೇಕಾದ ತಾರ್ಕಿಕ ಚಿಂತನೆಗಳು ಅಭಿವೃದ್ಧಿಯಾಗುವುದಿಲ್ಲ. ಈ ವೇದಗಣಿತ ಕಲಿಕೆಯಿಂದ ಗಣಿತದ ಬಗ್ಗೆ ತಪ್ಪು ಅಭಿಪ್ರಾಯ ಬರುತ್ತದೆ. ಗಣಿತ ಎಂದರೆ ಕೇವಲ ಮ್ಯಾಜಿಕ್ ಎಂದು ವಿದ್ಯಾರ್ಥಿಗಳು ಭಾವಿಸುವ ಅಪಾಯವಿದೆ. ಅಲ್ಲದೆ ವೇದಗಣಿತದ ಬಗ್ಗೆ ಯಾವ ವೇದಗಳಲ್ಲಿಯೂ ಹೇಳಿಲ್ಲ. ಹಿಂದಿನ ಶತಮಾನದ ಕೆಲ ಸ್ವಾಮಿಗಳು ಮಾಡಿರುವ ಸೂತ್ರಗಳು ಇವು. ಅವು ವೇದಿಕ್ ಅಲ್ಲ ಮತ್ತು ಮ್ಯಾಥಮ್ಯಾಟಿಕ್ಸ್ ಕೂಡ ಅಲ್ಲ. ಅವುಗಳಿಗೆ ವೇದಿಕ್ ಎಂದು ಹೆಸರು ಕೊಟ್ಟು ಮಕ್ಕಳಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.


ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...