Homeಕರ್ನಾಟಕಬಳಸಿದ ಮಾಸ್ಕ್‌ & ಪಿಪಿಇ ಕಿಟ್ ವಿವೇವಾರಿಗೆ ಮಾರ್ಗಸೂಚಿ ಹೊರಡಿಸುವಂತೆ ರಾಜ್ಯಕ್ಕೆ ಹೈಕೋರ್ಟ್ ಸೂಚನೆ

ಬಳಸಿದ ಮಾಸ್ಕ್‌ & ಪಿಪಿಇ ಕಿಟ್ ವಿವೇವಾರಿಗೆ ಮಾರ್ಗಸೂಚಿ ಹೊರಡಿಸುವಂತೆ ರಾಜ್ಯಕ್ಕೆ ಹೈಕೋರ್ಟ್ ಸೂಚನೆ

ಆಮ್ಲಜನಕ ಸಿಲಿಂಡರ್‌ಗಳ ಸಾಗಣೆಗೆ ಬೆಲೆ ನಿಗದಿಪಡಿಸುವಂತೆ ಕೂಡಾ ನಿರ್ದೇಶನ ನೀಡಿದೆ

- Advertisement -
- Advertisement -

ಬಳಸಿದ ಮಾಸ್ಕ್ ಮತ್ತು ಪಿಪಿಇ ಕಿಟ್‌ಗಳನ್ನು ವಿಲೇವಾರಿ ಮಾಡಲು ಮಾರ್ಗಸೂಚಿಗಳನ್ನು ಹೊರಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜೊತೆಗೆ ಆಮ್ಲಜನಕ ಸಿಲಿಂಡರ್‌ಗಳ ಸಾಗಣೆಗೆ ಬೆಲೆ ನಿಗದಿಪಡಿಸುವಂತೆ ಕೂಡಾ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಮಾಸ್ಕ್‌‌ಗಳು ಮತ್ತು ಪಿಪಿಇ ಕಿಟ್‌ಗಳ ವಿಲೇವಾರಿ ವಿಷಯವು ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ಸುಮಾರು 1.3 ಕೋಟಿ ಜನಸಂಖ್ಯೆ ಹೊಂದಿರುವ ಬೆಂಗಳೂರಿನಂತಹ ನಗರದಲ್ಲಿ ಪ್ರತಿದಿನ ಲಕ್ಷಾಂತರ ಜನರು ಮಾಸ್ಕ್‌‌ಗಳನ್ನು ಬಳಸುತ್ತಾರೆ ಎಂದ ನ್ಯಾಯಪೀಠ, ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ಮತ್ತು ವ್ಯಾಪಕ ಪ್ರಚಾರ ಮಾಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿತು. ಬಳಸಿದ ಮಾಸ್ಕ್‌ಗಳು ಮತ್ತು ಪಿಪಿಇ ಕಿಟ್‌ಗಳು ಬಯೋಮೆಡಿಕಲ್ ತ್ಯಾಜ್ಯ ಎಂದ ನ್ಯಾಯಾಲಯ, ಈ ನಿಟ್ಟಿನಲ್ಲಿ ಪೌರಕರ್ಮಿಕರಿಗೆ ಅಗತ್ಯ ತರಬೇತಿ ನೀಡುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಿತು.

ಕೊರೊನಾ ಆಸ್ಪತ್ರೆಗಳಿಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಪೂರೈಸುವ ಸಾರಿಗೆ ಶುಲ್ಕವನ್ನು ತಕ್ಷಣವೇ ತಿಳಿಸುವಂತೆ ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿತು. ಅಕ್ಟೋಬರ್ 24 ರಂದು ಅಥವಾ ಅದಕ್ಕೂ ಮೊದಲು ಆದೇಶಗಳನ್ನು ಪಾಲಿಸುವಂತೆ ರಾಜ್ಯವನ್ನು ಕೋರಲಾಗಿದೆ.

ಸಾಗಣೆಯ ಮೇಲೆ ಬೆಲೆ ನಿಗದಿ ಮಾಡಲು ಸರ್ಕಾರ ವಿಫಲವಾದ ಕಾರಣ ರೋಗಿಗಳು ಆಮ್ಲಜನಕ್ಕೆ ಹೆಚ್ಚಿನ ಹಣವನ್ನು ಪಾವತಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಅರ್ಜಿದಾರರೊಬ್ಬರ ಪರ ಹಾಜರಾದ ವಕೀಲರು, ಸರಬರಾಜುದಾರರು ಸಾಗಣಿಕೆಗಾಗಿ ವಿವಿಧ ದರಗಳನ್ನು ವಿಧಿಸುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಮುಜುಗರಕ್ಕೊಳಗಾಗಿ ಸಂಖ್ಯೆ ಮರೆಮಾಚಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...