Homeಚಳವಳಿಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್‌ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ

ಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್‌ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ದೆಹಲಿಯ ಗಡಿಗಳಲ್ಲೊಂದಾದ ದೆಹಲಿ- ಗಾಜಿಪುರ್ ಗಡಿಯಲ್ಲಿ ಉತ್ತರ ಪ್ರದೇಶದ 75 ವರ್ಷದ ರೈತನ ಮೃತ ದೇಹವೊಂದು ಡೆತ್‌ನೋಟ್‌ನೊಂದಿಗೆ ಪತ್ತೆಯಾಗಿದೆ.

ಉತ್ತರ ಪ್ರದೇಶದ ಕಾಶ್ಮೀರ್ ಸಿಂಗ್ ಲಧಿ ಎಂಬುವವರು ಗಡಿಯಲ್ಲಿನ ಶೌಚಾಲಯವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹದ ಜೊತೆಗೆ ಆತ್ಮಹತ್ಯಾ ಪತ್ರ ಸಹ ದೊರಕಿದೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂತೆಗದುಕೊಳ್ಳದೆ ರೈತರೊಂದಿಗೆ ಕೇವಲ ಮಾತುಕತೆ ನಡೆಸುತ್ತಿದೆ ಎಂದು ಅವರು ಹತಾಶೆಗೊಂಡಿದ್ದರು. ಹಾಗಾಗಿ ಅವರ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಭಾರತೀಯ ಕಿಸಾನ್ ಯೂನಿಯನ್ ಆರೋಪಿಸಿದೆ.

“ನಾವು ಎಷ್ಟು ದಿನ ಎಂದು ಈ ಕೊರೆಯುವ ಚಳಿಯಲ್ಲಿ ಪ್ರತಿಭಟನೆ ನಡೆಸಬೇಕು? ಕೇಂದ್ರ ಸರ್ಕಾರವಂತೂ ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತಿಲ್ಲ. ಹಾಗಾಗಿ ನಾನು ಪ್ರಾಣ ಬಿಡಲು ನಿರ್ಧರಿಸುತ್ತಿದ್ದೇನೆ. ಇದರಿಂದಾದರೂ ಕೆಲ ಪರಿಹಾರ ಸಿಗಲಿ. ನನ್ನ ಮೊಮ್ಮಕ್ಕಳು ಇದೇ ಪ್ರತಿಭಟನಾ ಸ್ಥಳದಲ್ಲಿ ನನ್ನ ಅಂತ್ಯಕ್ರಿಯೆ ಮಾಡಲಿ” ಎಂದು ಆತ್ಮಹತ್ಯಾ ಪತ್ರದಲ್ಲಿ ಬರೆಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯ ಬಿಲಾಸ್ಪುರ್ ಪ್ರದೇಶದವರಾದ ಕಾಶ್ಮೀರ್ ಸಿಂಗ್ ಲಧಿಯವರು ಮಕ್ಕಳು ಮತ್ತು ಮೊಮ್ಮಕ್ಕಳು ಸಹ ಗಾಜಿಪುರ್ ಗಡಿಯಲ್ಲಿ ರೈತ ಹೋರಾಟದಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 38ನೇ ದಿನ ಪ್ರವೇಶಿಸಿದೆ. ಕೇಂದ್ರದ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಿ ಕಾರ್ಪೊರೇಟ್ ಲೂಟಿಗೆ ಅನುಕೂಲ ಮಾಡಿಕೊಡಲಿದೆ ಎಂದು ರೈತರು ದೂರಿದ್ದಾರೆ. ಇದುವರೆಗೂ ಪ್ರತಿಭಟನಾ ಸ್ಥಳದಲ್ಲಿ 30ಕ್ಕೂ ಹೆಚ್ಚು ರೈತರು ಪ್ರಾಣ ಬಿಟ್ಟಿದ್ದಾರೆ. ಕೆಲವರು ತೀವ್ರ ಚಳಿಗೆ ಮೃತಪಟ್ಟರೆ ಮತ್ತೆ ಕೆಲವರು ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಇರುವುದರಿಂದ ಹತಾಶೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಷ್ಟೆಲ್ಲ ರೈತರು ಸಾಯುತ್ತಿದ್ದರೂ ಮೋದಿ ಸರ್ಕಾರ ಕಾಯ್ದೆಗಳ ಕುರಿತಾಗಿ ಹಠಮಾರಿ ಧೋರಣೆ ಮುಂದುವರೆಸುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ಕೇಳಿಬಂದಿದೆ.

ಹೊಸ ವರ್ಷ ಅಂತೆ! ಎಂತ ಹೊಸ ವರ್ಷ?
ಗಾಜಿಪುರಗಡಿಯಲ್ಲಿ ಎರಡು ಗಂಟೆ ಹಿಂದೆಯಷ್ಟೇ ಮತ್ತೊಬ್ಬ ರೈತ ಹೋರಾಟಗಾರ ಆತ್ಮಹತ್ಯೆ ಮಾಡಿಕೊಂಡ.
ಮತ್ತೆ ಕೇಳಬೇಕಾದ ಪ್ರಶ್ನೆ – ಈ ಸರಕಾರದ ಹೃದಯ ಕರಗಲು ಇನ್ನೆಷ್ಟು ರೈತರ ಬಲಿದಾನ ಆಗಬೇಕು? ಎಂದು ಕನ್ನಡದ ಚಿಂತಕರಾದ ಶ್ರೀನಿವಾಸ ಕಾರ್ಕಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿದ್ಯುತ್ ಕಂಪನಿಯಿಂದ ಕಿರುಕುಳ: ಪ್ರಧಾನಿಗೆ ಪತ್ರ ಬರೆದು ಪ್ರಾಣತ್ಯಾಗ ಮಾಡಿದ ರೈತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...