Homeಮುಖಪುಟಅನರ್ಹಗೊಳಿಸಿದ ವೇಗದಲ್ಲೇ ರಾಹುಲ್ ಗಾಂಧಿರನ್ನ ಮತ್ತೆ ಸಂಸದರನ್ನಾಗಿ ಮಾಡಿ: ಚೌಧರಿ ಒತ್ತಾಯ

ಅನರ್ಹಗೊಳಿಸಿದ ವೇಗದಲ್ಲೇ ರಾಹುಲ್ ಗಾಂಧಿರನ್ನ ಮತ್ತೆ ಸಂಸದರನ್ನಾಗಿ ಮಾಡಿ: ಚೌಧರಿ ಒತ್ತಾಯ

- Advertisement -
- Advertisement -

ಮಾನನಷ್ಟ ಮೊಕದ್ದಮೆಯಲ್ಲಿ ಅಪರಾಧಿ ಎಂದು ಸಾಬೀತಾದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ವೇಗದಲ್ಲೇ ಅವರನ್ನು ಮತ್ತೆ ಸಂಸದರನ್ನಾಗಿ ಮಾಡಬೇಕು ಎಂದು ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯರನ್ನಾಗಿ ಮರುಸ್ಥಾಪಿಸುವಂತೆ ಚೌಧರಿ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಒತ್ತಾಯಿಸಿದರು.

2019ರ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಅನೇಕ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕೆ ಇದೆ? ಎಂದು ಕೇಳಿದ್ದರು. ಈ ಹೇಳಿಕೆಗೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಆನಂತರ ಅವರನ್ನು ಅಪರಾಧಿ ಎಂದು ಹೇಳಿ ಶಿಕ್ಷೆ ನೀಡಲಾಗಿತ್ತು.

ಗುಜರಾತ್ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಮಾರ್ಚ್ 24ರಂದು ಗಾಂಧಿ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು.

ಲೋಕಸಭೆ ಸೆಕ್ರೆಟರಿ ಜನರಲ್ ಕಚೇರಿಯನ್ನು ಸಂಪರ್ಕಿಸಲು ಮತ್ತು ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ಮರುಸ್ಥಾಪಿಸಲು ಕೋರಿ ಪತ್ರವನ್ನು ನೀಡುವಂತೆ ಬಿರ್ಲಾ ಅವರಿಗೆ ಸಲಹೆ ನೀಡಿದರು.

ಕಚೇರಿಯ ಅಧೀನ ಕಾರ್ಯದರ್ಶಿಯೊಬ್ಬರು ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಚೌಧರಿ ಶನಿವಾರ ಹೇಳಿದರು.

”ಪತ್ರದ ಜೊತೆಗೆ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸೆಕ್ರೆಟರಿಯೇಟ್ ಹೊರಡಿಸಿದ ಅಧಿಸೂಚನೆ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರತಿಯನ್ನು ಸಲ್ಲಿಸಿದ್ದೇನೆ” ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಹೇಳಿದರು.

”ನನ್ನ ಪಕ್ಷದ ಪರವಾಗಿ ನಾನು ನಿಯಮಗಳ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದ್ದೇನೆ … ರಾಹುಲ್ ಗಾಂಧಿಯವರನ್ನು ಯಾವ ವೇಗದಲ್ಲಿ ಅನರ್ಹಗೊಳಿಸಲಾಗಿದೆಯೋ ಅದೇ ವೇಗದಲ್ಲಿ ಅವರ ಸಂಸದ ಸ್ಥಾನ ಮರುಸ್ಥಾಪನೆಯೂ ಆಗಬೇಕು” ಅವರು ಹೇಳಿದರು.

ಸೋಮವಾರದೊಳಗೆ ರಾಹುಲ್ ಗಾಂಧಿಯವರನ್ನು ಸಂಸದರಾಗಿ ಮರುಸ್ಥಾಪಿಸುವಂತೆ ಚೌಧರಿ ಬಿರ್ಲಾ ಅವರನ್ನು ಚೌಧರಿ ಒತ್ತಾಯಿಸಿದರು.

”ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ್ದಕ್ಕೆ ನಾವು ಏನನ್ನೂ ಹೇಳಲಿಲ್ಲ; ಅವರು ತನ್ನ ಮನೆಯನ್ನು ಖಾಲಿ ಮಾಡಲು ಹೇಳಿದ ದಿನ, ಆ ದಿನವೂ ರಜಾದಿನವಾಗಿತ್ತು, ಇಂದು ಸಹ ರಜಾದಿನವಾಗಿದೆ. ನಮಗೆ ದಿನ್ ಕಿ ತತ್ಪರ್ತ ಕುಚ್ ಅಲಗ್ ಥಿ…ಆಜ್ ಕಿ ತತ್ಪರ್ತಾ ಕುಚ್ ಧೀಮಿ ಲಗ್ ರಹೀ ಹೈ [ಆ ದಿನದ ಅಲೌಕಿಕತೆ ಬೇರೆಯೇ ಆಗಿತ್ತು, ಇಂದು ವೇಗ ಸ್ವಲ್ಪ ಕಡಿಮೆಯಾಗಿದೆ]” ಎಂದು ಅವರು ಟೀಕಿಸಿದರು.

ಸಂಸದ ಸ್ಥಾನದಿಂದ ಅನರ್ಹಗೊಂಡ ಮೂರು ದಿನಗಳ ನಂತರ ಗಾಂಧಿ ಅವರಿಗೆ ನೀಡಲಾದ ಸರ್ಕಾರಿ ಬಂಗಲೆಯನ್ನು ತೊರೆಯುವಂತೆ ಕೇಳಲಾಯಿತು. ಏಪ್ರಿಲ್ 22 ರಂದು ಬಂಗಲೆಯನ್ನು ಖಾಲಿ ಮಾಡಿದ ಅವರು, ಸತ್ಯವನ್ನು ಮಾತನಾಡಿದ್ದಕ್ಕಾಗಿ ಬೆಲೆ ತೆರಬೇಕಾಯಿತು ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧದ ‘ಬಿಜೆಪಿಯ ಷಡ್ಯಂತ್ರ ಬಯಲಾಗಿದೆ’: ಸುಪ್ರೀಂ ತೀರ್ಪು ಬಳಿಕ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...