Homeಮುಖಪುಟಅನರ್ಹಗೊಳಿಸಿದ ವೇಗದಲ್ಲೇ ರಾಹುಲ್ ಗಾಂಧಿರನ್ನ ಮತ್ತೆ ಸಂಸದರನ್ನಾಗಿ ಮಾಡಿ: ಚೌಧರಿ ಒತ್ತಾಯ

ಅನರ್ಹಗೊಳಿಸಿದ ವೇಗದಲ್ಲೇ ರಾಹುಲ್ ಗಾಂಧಿರನ್ನ ಮತ್ತೆ ಸಂಸದರನ್ನಾಗಿ ಮಾಡಿ: ಚೌಧರಿ ಒತ್ತಾಯ

- Advertisement -
- Advertisement -

ಮಾನನಷ್ಟ ಮೊಕದ್ದಮೆಯಲ್ಲಿ ಅಪರಾಧಿ ಎಂದು ಸಾಬೀತಾದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ವೇಗದಲ್ಲೇ ಅವರನ್ನು ಮತ್ತೆ ಸಂಸದರನ್ನಾಗಿ ಮಾಡಬೇಕು ಎಂದು ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯರನ್ನಾಗಿ ಮರುಸ್ಥಾಪಿಸುವಂತೆ ಚೌಧರಿ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಒತ್ತಾಯಿಸಿದರು.

2019ರ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಅನೇಕ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕೆ ಇದೆ? ಎಂದು ಕೇಳಿದ್ದರು. ಈ ಹೇಳಿಕೆಗೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಆನಂತರ ಅವರನ್ನು ಅಪರಾಧಿ ಎಂದು ಹೇಳಿ ಶಿಕ್ಷೆ ನೀಡಲಾಗಿತ್ತು.

ಗುಜರಾತ್ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಮಾರ್ಚ್ 24ರಂದು ಗಾಂಧಿ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು.

ಲೋಕಸಭೆ ಸೆಕ್ರೆಟರಿ ಜನರಲ್ ಕಚೇರಿಯನ್ನು ಸಂಪರ್ಕಿಸಲು ಮತ್ತು ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ಮರುಸ್ಥಾಪಿಸಲು ಕೋರಿ ಪತ್ರವನ್ನು ನೀಡುವಂತೆ ಬಿರ್ಲಾ ಅವರಿಗೆ ಸಲಹೆ ನೀಡಿದರು.

ಕಚೇರಿಯ ಅಧೀನ ಕಾರ್ಯದರ್ಶಿಯೊಬ್ಬರು ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಚೌಧರಿ ಶನಿವಾರ ಹೇಳಿದರು.

”ಪತ್ರದ ಜೊತೆಗೆ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸೆಕ್ರೆಟರಿಯೇಟ್ ಹೊರಡಿಸಿದ ಅಧಿಸೂಚನೆ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರತಿಯನ್ನು ಸಲ್ಲಿಸಿದ್ದೇನೆ” ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಹೇಳಿದರು.

”ನನ್ನ ಪಕ್ಷದ ಪರವಾಗಿ ನಾನು ನಿಯಮಗಳ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿದ್ದೇನೆ … ರಾಹುಲ್ ಗಾಂಧಿಯವರನ್ನು ಯಾವ ವೇಗದಲ್ಲಿ ಅನರ್ಹಗೊಳಿಸಲಾಗಿದೆಯೋ ಅದೇ ವೇಗದಲ್ಲಿ ಅವರ ಸಂಸದ ಸ್ಥಾನ ಮರುಸ್ಥಾಪನೆಯೂ ಆಗಬೇಕು” ಅವರು ಹೇಳಿದರು.

ಸೋಮವಾರದೊಳಗೆ ರಾಹುಲ್ ಗಾಂಧಿಯವರನ್ನು ಸಂಸದರಾಗಿ ಮರುಸ್ಥಾಪಿಸುವಂತೆ ಚೌಧರಿ ಬಿರ್ಲಾ ಅವರನ್ನು ಚೌಧರಿ ಒತ್ತಾಯಿಸಿದರು.

”ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ್ದಕ್ಕೆ ನಾವು ಏನನ್ನೂ ಹೇಳಲಿಲ್ಲ; ಅವರು ತನ್ನ ಮನೆಯನ್ನು ಖಾಲಿ ಮಾಡಲು ಹೇಳಿದ ದಿನ, ಆ ದಿನವೂ ರಜಾದಿನವಾಗಿತ್ತು, ಇಂದು ಸಹ ರಜಾದಿನವಾಗಿದೆ. ನಮಗೆ ದಿನ್ ಕಿ ತತ್ಪರ್ತ ಕುಚ್ ಅಲಗ್ ಥಿ…ಆಜ್ ಕಿ ತತ್ಪರ್ತಾ ಕುಚ್ ಧೀಮಿ ಲಗ್ ರಹೀ ಹೈ [ಆ ದಿನದ ಅಲೌಕಿಕತೆ ಬೇರೆಯೇ ಆಗಿತ್ತು, ಇಂದು ವೇಗ ಸ್ವಲ್ಪ ಕಡಿಮೆಯಾಗಿದೆ]” ಎಂದು ಅವರು ಟೀಕಿಸಿದರು.

ಸಂಸದ ಸ್ಥಾನದಿಂದ ಅನರ್ಹಗೊಂಡ ಮೂರು ದಿನಗಳ ನಂತರ ಗಾಂಧಿ ಅವರಿಗೆ ನೀಡಲಾದ ಸರ್ಕಾರಿ ಬಂಗಲೆಯನ್ನು ತೊರೆಯುವಂತೆ ಕೇಳಲಾಯಿತು. ಏಪ್ರಿಲ್ 22 ರಂದು ಬಂಗಲೆಯನ್ನು ಖಾಲಿ ಮಾಡಿದ ಅವರು, ಸತ್ಯವನ್ನು ಮಾತನಾಡಿದ್ದಕ್ಕಾಗಿ ಬೆಲೆ ತೆರಬೇಕಾಯಿತು ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿರುದ್ಧದ ‘ಬಿಜೆಪಿಯ ಷಡ್ಯಂತ್ರ ಬಯಲಾಗಿದೆ’: ಸುಪ್ರೀಂ ತೀರ್ಪು ಬಳಿಕ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...