Homeಅಂತರಾಷ್ಟ್ರೀಯಹ್ಯಾಕಿಂಗ್ ಪ್ರಕರಣ: ವಾಟ್ಸಾಪ್‌ಗೆ 167 ಮಿಲಿಯನ್ ಡಾಲರ್ ಪಾವತಿಸಲು ಪೆಗಾಸಸ್ ಸ್ಪೈವೇರ್ ತಯಾರಕರಿಗೆ ಕೋರ್ಟ್ ಆದೇಶ

ಹ್ಯಾಕಿಂಗ್ ಪ್ರಕರಣ: ವಾಟ್ಸಾಪ್‌ಗೆ 167 ಮಿಲಿಯನ್ ಡಾಲರ್ ಪಾವತಿಸಲು ಪೆಗಾಸಸ್ ಸ್ಪೈವೇರ್ ತಯಾರಕರಿಗೆ ಕೋರ್ಟ್ ಆದೇಶ

- Advertisement -
- Advertisement -

ಸುಮಾರು 1,400 ಬಳಕೆದಾರರ ವಾಟ್ಸಾಪ್ ಹ್ಯಾಕ್ ಮಾಡಿದಕ್ಕಾಗಿ ವಾಟ್ಸಾಪ್‌ ಸಂಸ್ಥೆಗೆ 167 ಮಿಲಿಯನ್ ಡಾಲರ್ ಪಾವತಿಸುವಂತೆ ಇಸ್ರೇಲ್‌ನ ಪೆಗಾಸಸ್ ಸ್ಪೈವೇರ್‌ ತಯಾರಿಕ ಸಂಸ್ಥೆ ಎನ್‌ಎಸ್‌ಒ ಗ್ರೂಪ್‌ಗೆ ಅಮೆರಿಕದ ಜ್ಯೂರಿ ಗ್ರೂಪ್ (ಕೋರ್ಟ್) ಆದೇಶಿಸಿದೆ ಎಂದು ವರದಿಯಾಗಿದೆ.

ಕಾನೂನು ಪ್ರಕರಣವೊಂದರಲ್ಲಿ ಸಾಕ್ಷ್ಯಗಳನ್ನು ಆಲಿಸಲು ಮತ್ತು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಲಾದ ಸಂಗತಿಗಳ ಆಧಾರದ ಮೇಲೆ ತೀರ್ಪು ನೀಡಲು ಆಯ್ಕೆಯಾದ ನಾಗರಿಕರ ಗುಂಪನ್ನು ಅಮೆರಿಕದ ಜ್ಯೂರಿ ಅಥವಾ ತೀರ್ಪುಗಾರರು ಎನ್ನಲಾಗುತ್ತದೆ.

ಡಿಸೆಂಬರ್ 2024 ರಲ್ಲಿ, ಅಮೆರಿಕದ ಕ್ಯಾಲಿಫೋರ್ನಿಯಾ ಜಿಲ್ಲಾ ನ್ಯಾಯಾಲಯವು, ಎನ್‌ಎಸ್‌ಒ ಗ್ರೂಪ್ ತನ್ನ ಜನಪ್ರಿಯ ಪೆಗಾಸಸ್ ಸ್ಪೈವೇರ್ ಅನ್ನು ಕ್ಲೈಂಟ್‌ಗಳಿಗೆ ಮಾರಾಟ ಮಾಡುವ ಮೂಲಕ ಯುಎಸ್‌ ಸೈಬರ್ ಭದ್ರತಾ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೋಷಿ ತೀರ್ಪು ನೀಡಿತ್ತು.

ತೀರ್ಪಿನ ನಂತರ, ಮಾರ್ಚ್ 2025ರಲ್ಲಿ ಎನ್‌ಎಸ್‌ ಗ್ರೂಪ್‌ನಿಂದ ಪರಿಹಾರ ಕೋರಿ ಮೆಟಾ ಅರ್ಜಿ ಸಲ್ಲಿಸಿತ್ತು. ಆ ಪರಿಹಾರದ ಅಥವಾ ದಂಡದ ಮೊತ್ತವನ್ನು ಮಂಗಳವಾರ (ಮೇ.6) ನಿರ್ಧರಿಸಲಾಗಿದೆ.

ಎನ್‌ಎಸ್‌ಒ ಗ್ರೂಪ್ ವಿರುದ್ಧ ಮೆಟಾ ನಡೆಸಿದ ಕಾನೂನು ಹೋರಾಟದ ಫಲಿತಾಂಶವು ಭಾರತಕ್ಕೆ ಸಂಭಾವ್ಯ ಪರಿಣಾಮಗಳನ್ನು ಬೀರಬಹುದು. ಏಕೆಂದರೆ 2019ರಲ್ಲಿ ಪೆಗಾಸಸ್ ಸ್ಪೈವೇರ್ ಬಳಸಿ ವಾಟ್ಸಾಪ್ ಹ್ಯಾಕಿಂಗ್‌ಗೆ ಅತಿ ಹೆಚ್ಚು ಗುರಿಯಾದ ಎರಡನೇ ದೇಶ ಭಾರತ, ಮೊದಲ ಸ್ಥಾನದಲ್ಲಿ ಮೆಕ್ಸಿಕೋ ಇತ್ತು.

2019ರಲ್ಲಿ 51 ದೇಶಗಳ ಒಟ್ಟು 1,223 ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಪೆಗಾಸಸ್ ಸ್ಪೈವೇರ್ ದಾಳಿ ನಡೆಸಲಾಗಿದೆ. ಈ ಪೈಕಿ 100ಕ್ಕೂ ಹೆಚ್ಚು ಭಾರತೀಯರು ಇದ್ದಾರೆ ಎಂದು ನ್ಯಾಯಾಲಯದ ದಾಖಲೆಗಳು ಬಹಿರಂಗಪಡಿಸಿವೆ. ಭಾರತದಲ್ಲಿ ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವರನ್ನು ಗುರಿಯಾಗಿಸಿಕೊಂಡು ಪೆಗಾಸಸ್ ದಾಳಿ ಮಾಡಲಾಗಿದೆ ಎಂಬ ಆರೋಪದವಿದೆ. ಈ ಸಂಬಂಧ 2021ರಲ್ಲಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ.

ಪೆಗಾಸಸ್ ಸ್ಪೈವೇರ್ ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್ ತಯಾರಿಸಿದ ಒಂದು ಕಣ್ಗಾವಲು ಸಾಫ್ಟ್‌ವೇರ್ ಆಗಿದೆ. ಇದನ್ನು ಮೊಬೈಲ್ ಫೋನ್‌ಗಳಲ್ಲಿ ದೂರದಿಂದಲೇ ಸ್ಥಾಪಿಸಬಹುದು. ಇತರ ವಿಷಯಗಳ ಜೊತೆಗೆ ಜನರ ಮೈಕ್ರೊಫೋನ್‌ಗಳು ಮತ್ತು ಕ್ಯಾಮರಾಗಳಿಗೆ ಇದರ ಮೂಲಕ ಪ್ರವೇಶಿಸಬಹುದು.

ಪೆಗಾಸಸ್ ಸ್ಪೈವೇರ್ ಮೂಲಕ ಪತ್ರಕರ್ತರು, ಹೋರಾಟಗಾರರು ಮತ್ತು ರಾಜಕೀಯ ವಿರೋಧಿಗಳ ಮೇಲೆ ಕಣ್ಗಾವಲು ಇಡಲು ಸರ್ವಾಧಿಕಾರಿ ಆಡಳಿತಗಳು ಸೇರಿದಂತೆ ಸರ್ಕಾರಗಳಿಗೆ ಎನ್‌ಎಸ್‌ಒ ಗ್ರೂಪ್ ಸಹಾಯ ಮಾಡಿದ ಆರೋಪವಿದೆ.

ವಾಟ್ಸಾಪ್‌ಗೆ ದಂಡ ಪಾವತಿಸುವಂತೆ ಎನ್‌ಎಸ್‌ಒಗೆ ಆದೇಶಿಸಿರುವುದು ‘ಅಕ್ರಮ ಸ್ಪೈವೇರ್ ಅಭಿವೃದ್ಧಿ ಮತ್ತು ಬಳಕೆಯ ವಿರುದ್ಧದ ಮೊದಲ ಗೆಲುವು’ ಎಂದು ವಾಟ್ಸಾಪ್ ಮಾತೃಸಂಸ್ಥೆ ಮೆಟಾ ಹೇಳಿದೆ.

ತೀರ್ಪಿನ ವಿವರಗಳನ್ನು ಪರಿಶೀಲಿಸಿ, ಮೇಲ್ಮನವಿ ಸೇರಿದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎನ್‌ಎಸ್‌ಒ ಗ್ರೂಪ್‌ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಎನ್‌ಎಸ್‌ಒ ಗ್ರೂಪ್‌ ವಿರುದ್ದ ವಾಟ್ಸಾಪ್‌ ರೀತಿಯ ಸ್ಮಾರ್ಟ್‌ ಫೋನ್‌ ಆಪ್ಲಿಕೇಶನ್‌ಗಳ ಮೂಲಕ ಜನರ ಮೇಲೆ ಕಣ್ಗಾವಲು ಇಡಲು ಸ್ಪೈವೇರ್ ದುರ್ಬಳಕೆ ಆರೋಪ ಮಾಡಿಕೊಂಡ ಭಾರತ ಸೇರಿದಂತೆ ಹಲವೆಡೆ ಕೇಳಿ ಬಂದಿದೆ. ಆದರೆ, ಮೊದಲ ಬಾರಿಗೆ ಎನ್‌ಎಸ್‌ಒ ಗ್ರೂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ.

ಗಂಭೀರ ಅಪರಾಧಿಗಳು ಮತ್ತು ಭಯೋತ್ಪಾದಕರ ವಿರುದ್ಧ ಮಾತ್ರ ಸ್ಪೈವೇರ್ ಬಳಸಲು ಉದ್ದೇಶಿಸಲಾಗಿದೆ ಎಂದು ಎನ್‌ಎಸ್‌ಒ ಗ್ರೂಪ್ ಹೇಳುತ್ತದೆ. ಆದರೆ, ಕೆಲವು ದೇಶಗಳು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಪರಿಗಣಿಸುವ ಯಾರನ್ನಾದರೂ ಗುರಿಯಾಗಿಸಲು ಈ ತಂತ್ರಜ್ಞಾನವನ್ನು ಬಳಸುತ್ತಿವೆ ಎಂಬ ಆರೋಪಗಳಿವೆ.

2021ರಲ್ಲಿ ಹ್ಯಾಕಿಂಗ್‌ಗೆ ಬಲಿಯಾದ ಶಂಕಿತರ 50,000 ಫೋನ್ ನಂಬರ್‌ಗಳ ಪಟ್ಟಿ ಪ್ರಮುಖ ಮಾಧ್ಯಮಗಳಿಗೆ ಸೋರಿಕೆಯಾದಾಗ ಪೆಗಾಸಸ್ ಹಗರಣ ಬಯಲಿಗೆ ಬಂತು.

ಹ್ಯಾಂಕ್‌ಗೆ ಬಲಿಯಾದವರ ಪಟ್ಟಿಯಲ್ಲಿ ರಾಜಕಾರಣಿಗಳು, ರಾಷ್ಟ್ರಗಳ ಮುಖ್ಯಸ್ಥರು, ವ್ಯವಹಾರ ಕಾರ್ಯನಿರ್ವಾಹಕರು, ಹೋರಾಟಗಾರರು, ಹಲವಾರು ಅರಬ್ ರಾಜಮನೆತನದ ಸದಸ್ಯರು ಹಾಗೂ 180ಕ್ಕೂ ಹೆಚ್ಚು ಪತ್ರಕರ್ತರ ಫೋನ್ ಸಂಖ್ಯೆಗಳು ಇರುವುದನ್ನು ಜಾಗತಿಕ ಮಾಧ್ಯಮಗಳು ಗುರುತಿಸಿವೆ.

ಕೆನಡಾದ ಡೌನಿಂಗ್ ಸ್ಟ್ರೀಟ್ ಮತ್ತು ವಿದೇಶಾಂಗ ಕಚೇರಿ ಅಧಿಕಾರಿಗಳಿಗೆ ಸೇರಿದ ಸಾಧನಗಳಿಗೆ ಪೆಗಾಸಸ್ ಸ್ಪೈವೇರ್ ಸೋಂಕು ತಗುಲಿದೆ ಎಂದು ಕೆನಡಾದ ತನಿಖಾ ಗುಂಪು ದಿ ಸಿಟಿಜನ್ ಲ್ಯಾಬ್ ಶಂಕೆ ವ್ಯಕ್ತಪಡಿಸಿದೆ.

ಹ್ಯಾಕ್ ಮಾಡಲಾಗಿದೆ ಎಂದು ನಂಬಲಾದ ಇತರ ಪ್ರಮುಖ ವ್ಯಕ್ತಿಗಳಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು 2018 ರ ಅಕ್ಟೋಬರ್‌ನಲ್ಲಿ ಇಸ್ತಾಂಬುಲ್‌ನ ಸೌದಿ ಕಾನ್ಸುಲೇಟ್‌ನಲ್ಲಿ ಹತ್ಯೆಗೀಡಾದ ಸೌದಿ ಅರೇಬಿಯಾ ಸರ್ಕಾರದ ವಿಮರ್ಶಕ ಜಮಾಲ್ ಖಶೋಗ್ಗಿ ಮತ್ತು ಅವರ ಸಂಬಂಧಿಗಳು ಸೇರಿದ್ದಾರೆ.

ಎನ್‌ಎಸ್‌ಒ ಗ್ರೂಪ್ ಮೆಟಾಗೆ 444,000 ಡಾಲರ್ (37 ಲಕ್ಷ ರೂ) ದಂಡ ಪಾವತಿಸಲೂ ಆದೇಶಿಸಲಾಗಿದೆ. ಎನ್‌ಎಸ್‌ಒ ಗ್ರೂಪ್ ಮತ್ತು ಮೆಟಾ ನಡುವಿನ 6 ವರ್ಷಗಳ ಕಾನೂನು ಸಮರದ ಬಳಿಕ ಈ ದಂಡ ಪಾವತಿಸಲು ಸೂಚಿಸಲಾಗಿದೆ.

ಅಮೆರಿಕನ್ ಕಂಪನಿಗಳನ್ನು ಗುರಿಯಾಗಿಸಿಕೊಂಡು ಎನ್‌ಎಸ್‌ಒ ಗ್ರೂಪ್ ನಡೆಸುತ್ತಿರುವ ಕಾನೂನುಬಾಹಿರ ಕೃತ್ಯಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸಲು ಆದೇಶಿಸಿ ಜ್ಯೂರಿ ನಿರ್ಧಾರವು ಅತ್ಯಂತ ಮಹತ್ವದ್ದು ಎಂದು ಮೆಟಾ ಹೇಳಿಕೊಂಡಿದೆ.

“ಗಂಭೀರ ಅಪರಾಧ ಮತ್ತು ಭಯೋತ್ಪಾದನೆಯನ್ನು ತಡೆಗಟ್ಟುವಲ್ಲಿ ನಮ್ಮ ತಂತ್ರಜ್ಞಾನವು ನಿರ್ಣಾಯಕ ಪಾತ್ರ ವಹಿಸುತ್ತದೆ. ಅಧಿಕೃತ ಸರ್ಕಾರಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಮ್ಮ ತಂತ್ರಜ್ಞಾನವನ್ನು ಬಳಸುತ್ತಿವೆ ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಎನ್‌ಎಸ್‌ಒ ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ವಾಟ್ಸಾಪ್‌ಗೆ ಸಂಬಂಧಿಸಿದೆ ಎನ್‌ಎಸ್‌ಒ ವಿರುದ್ದ ಜ್ಯೂರಿ ನೀಡಿರುವ ತೀರ್ಪು ಪೆಗಾಸಸ್ ಸ್ಪೈವೇರ್‌ಗೆ ಗುರಿಯಾಗಿರುವ ಇತರರಿಗೆ ಕಾನೂನು ಸಮರ ನಡೆಸಲು ಬೆಂಬಲ ನೀಡುತ್ತದೆ ಎಂದು ವರದಿಗಳು ಅಭಿಪ್ರಾಯಪಟ್ಟಿವೆ.

ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ತಪ್ಪೇನು? ಸುಪ್ರೀಂ ಕೋರ್ಟ್‌

“ದೇಶವು ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ತಪ್ಪೇನು? ಸ್ಪೈವೇರ್ ಹೊಂದಿರುವುದು ತಪ್ಪಲ್ಲ, ಅದನ್ನು ಯಾರ ವಿರುದ್ಧ ಬಳಸಾಗುತ್ತಿದೆ ಎಂಬುದು ಪ್ರಶ್ನೆ. ರಾಷ್ಟ್ರದ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾಗರಿಕರ ಗೌಪ್ಯತೆಯ ಹಕ್ಕನ್ನುಸಂವಿಧಾನದ ಅಡಿಯಲ್ಲಿ ರಕ್ಷಿಸಲಾಗುತ್ತದೆ” ಎಂದು ಭಾರತದ ಸುಪ್ರೀಂ ಕೋರ್ಟ್ ಏಪ್ರಿಲ್ 29ರಂದು ಹೇಳಿತ್ತು.

ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ ಎಂದಿದ್ದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಅವರ ಪೀಠ, “ಗೌಪ್ಯತೆ ಉಲ್ಲಂಘನೆಯ ವೈಯಕ್ತಿಕ ಆತಂಕಗಳನ್ನು ಪರಿಹರಿಸಬಹುದು. ಆದರೆ,ತಾಂತ್ರಿಕ ಸಮಿತಿಯ ವರದಿಯ ಕುರಿತು ಬೀದಿಯಲ್ಲಿ ಚರ್ಚಿಸಲು ಅದು ಯಾವುದೇ ದಾಖಲೆಯಲ್ಲ” ಎಂದಿತ್ತು.

“ವ್ಯಕ್ತಿಗಳಿಗೆ ಸಂಬಂಧಿಸಿದ ಮಾಹಿತಿ ಬೇಕಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ. ಇತ್ತೀಚಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಸನ್ನಿವೇಶದಲ್ಲಿ, ನಾವು ಸ್ವಲ್ಪ ಜವಾಬ್ದಾರಿಯುತವಾಗಿರೋಣ… ವರದಿಯನ್ನು ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ನಾವು ನೋಡುತ್ತೇವೆ” ಎಂದು ಪೀಠ ಹೇಳಿತ್ತು.

ಭಾರತದ ಕ್ಷಿಪಣಿ ದಾಳಿಗೆ ಇಲ್ಲಿಯವರೆಗೆ ಪಾಕ್ ನ 31 ಮಂದಿ ಸಾವು: ಪಾಕ್ ಸಶಸ್ತ್ರ ಪಡೆಗಳ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...