Homeಅಂತರಾಷ್ಟ್ರೀಯಹ್ಯಾಕಿಂಗ್ ಪ್ರಕರಣ: ವಾಟ್ಸಾಪ್‌ಗೆ 167 ಮಿಲಿಯನ್ ಡಾಲರ್ ಪಾವತಿಸಲು ಪೆಗಾಸಸ್ ಸ್ಪೈವೇರ್ ತಯಾರಕರಿಗೆ ಕೋರ್ಟ್ ಆದೇಶ

ಹ್ಯಾಕಿಂಗ್ ಪ್ರಕರಣ: ವಾಟ್ಸಾಪ್‌ಗೆ 167 ಮಿಲಿಯನ್ ಡಾಲರ್ ಪಾವತಿಸಲು ಪೆಗಾಸಸ್ ಸ್ಪೈವೇರ್ ತಯಾರಕರಿಗೆ ಕೋರ್ಟ್ ಆದೇಶ

- Advertisement -
- Advertisement -

ಸುಮಾರು 1,400 ಬಳಕೆದಾರರ ವಾಟ್ಸಾಪ್ ಹ್ಯಾಕ್ ಮಾಡಿದಕ್ಕಾಗಿ ವಾಟ್ಸಾಪ್‌ ಸಂಸ್ಥೆಗೆ 167 ಮಿಲಿಯನ್ ಡಾಲರ್ ಪಾವತಿಸುವಂತೆ ಇಸ್ರೇಲ್‌ನ ಪೆಗಾಸಸ್ ಸ್ಪೈವೇರ್‌ ತಯಾರಿಕ ಸಂಸ್ಥೆ ಎನ್‌ಎಸ್‌ಒ ಗ್ರೂಪ್‌ಗೆ ಅಮೆರಿಕದ ಜ್ಯೂರಿ ಗ್ರೂಪ್ (ಕೋರ್ಟ್) ಆದೇಶಿಸಿದೆ ಎಂದು ವರದಿಯಾಗಿದೆ.

ಕಾನೂನು ಪ್ರಕರಣವೊಂದರಲ್ಲಿ ಸಾಕ್ಷ್ಯಗಳನ್ನು ಆಲಿಸಲು ಮತ್ತು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಲಾದ ಸಂಗತಿಗಳ ಆಧಾರದ ಮೇಲೆ ತೀರ್ಪು ನೀಡಲು ಆಯ್ಕೆಯಾದ ನಾಗರಿಕರ ಗುಂಪನ್ನು ಅಮೆರಿಕದ ಜ್ಯೂರಿ ಅಥವಾ ತೀರ್ಪುಗಾರರು ಎನ್ನಲಾಗುತ್ತದೆ.

ಡಿಸೆಂಬರ್ 2024 ರಲ್ಲಿ, ಅಮೆರಿಕದ ಕ್ಯಾಲಿಫೋರ್ನಿಯಾ ಜಿಲ್ಲಾ ನ್ಯಾಯಾಲಯವು, ಎನ್‌ಎಸ್‌ಒ ಗ್ರೂಪ್ ತನ್ನ ಜನಪ್ರಿಯ ಪೆಗಾಸಸ್ ಸ್ಪೈವೇರ್ ಅನ್ನು ಕ್ಲೈಂಟ್‌ಗಳಿಗೆ ಮಾರಾಟ ಮಾಡುವ ಮೂಲಕ ಯುಎಸ್‌ ಸೈಬರ್ ಭದ್ರತಾ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೋಷಿ ತೀರ್ಪು ನೀಡಿತ್ತು.

ತೀರ್ಪಿನ ನಂತರ, ಮಾರ್ಚ್ 2025ರಲ್ಲಿ ಎನ್‌ಎಸ್‌ ಗ್ರೂಪ್‌ನಿಂದ ಪರಿಹಾರ ಕೋರಿ ಮೆಟಾ ಅರ್ಜಿ ಸಲ್ಲಿಸಿತ್ತು. ಆ ಪರಿಹಾರದ ಅಥವಾ ದಂಡದ ಮೊತ್ತವನ್ನು ಮಂಗಳವಾರ (ಮೇ.6) ನಿರ್ಧರಿಸಲಾಗಿದೆ.

ಎನ್‌ಎಸ್‌ಒ ಗ್ರೂಪ್ ವಿರುದ್ಧ ಮೆಟಾ ನಡೆಸಿದ ಕಾನೂನು ಹೋರಾಟದ ಫಲಿತಾಂಶವು ಭಾರತಕ್ಕೆ ಸಂಭಾವ್ಯ ಪರಿಣಾಮಗಳನ್ನು ಬೀರಬಹುದು. ಏಕೆಂದರೆ 2019ರಲ್ಲಿ ಪೆಗಾಸಸ್ ಸ್ಪೈವೇರ್ ಬಳಸಿ ವಾಟ್ಸಾಪ್ ಹ್ಯಾಕಿಂಗ್‌ಗೆ ಅತಿ ಹೆಚ್ಚು ಗುರಿಯಾದ ಎರಡನೇ ದೇಶ ಭಾರತ, ಮೊದಲ ಸ್ಥಾನದಲ್ಲಿ ಮೆಕ್ಸಿಕೋ ಇತ್ತು.

2019ರಲ್ಲಿ 51 ದೇಶಗಳ ಒಟ್ಟು 1,223 ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಪೆಗಾಸಸ್ ಸ್ಪೈವೇರ್ ದಾಳಿ ನಡೆಸಲಾಗಿದೆ. ಈ ಪೈಕಿ 100ಕ್ಕೂ ಹೆಚ್ಚು ಭಾರತೀಯರು ಇದ್ದಾರೆ ಎಂದು ನ್ಯಾಯಾಲಯದ ದಾಖಲೆಗಳು ಬಹಿರಂಗಪಡಿಸಿವೆ. ಭಾರತದಲ್ಲಿ ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವರನ್ನು ಗುರಿಯಾಗಿಸಿಕೊಂಡು ಪೆಗಾಸಸ್ ದಾಳಿ ಮಾಡಲಾಗಿದೆ ಎಂಬ ಆರೋಪದವಿದೆ. ಈ ಸಂಬಂಧ 2021ರಲ್ಲಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ.

ಪೆಗಾಸಸ್ ಸ್ಪೈವೇರ್ ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್ ತಯಾರಿಸಿದ ಒಂದು ಕಣ್ಗಾವಲು ಸಾಫ್ಟ್‌ವೇರ್ ಆಗಿದೆ. ಇದನ್ನು ಮೊಬೈಲ್ ಫೋನ್‌ಗಳಲ್ಲಿ ದೂರದಿಂದಲೇ ಸ್ಥಾಪಿಸಬಹುದು. ಇತರ ವಿಷಯಗಳ ಜೊತೆಗೆ ಜನರ ಮೈಕ್ರೊಫೋನ್‌ಗಳು ಮತ್ತು ಕ್ಯಾಮರಾಗಳಿಗೆ ಇದರ ಮೂಲಕ ಪ್ರವೇಶಿಸಬಹುದು.

ಪೆಗಾಸಸ್ ಸ್ಪೈವೇರ್ ಮೂಲಕ ಪತ್ರಕರ್ತರು, ಹೋರಾಟಗಾರರು ಮತ್ತು ರಾಜಕೀಯ ವಿರೋಧಿಗಳ ಮೇಲೆ ಕಣ್ಗಾವಲು ಇಡಲು ಸರ್ವಾಧಿಕಾರಿ ಆಡಳಿತಗಳು ಸೇರಿದಂತೆ ಸರ್ಕಾರಗಳಿಗೆ ಎನ್‌ಎಸ್‌ಒ ಗ್ರೂಪ್ ಸಹಾಯ ಮಾಡಿದ ಆರೋಪವಿದೆ.

ವಾಟ್ಸಾಪ್‌ಗೆ ದಂಡ ಪಾವತಿಸುವಂತೆ ಎನ್‌ಎಸ್‌ಒಗೆ ಆದೇಶಿಸಿರುವುದು ‘ಅಕ್ರಮ ಸ್ಪೈವೇರ್ ಅಭಿವೃದ್ಧಿ ಮತ್ತು ಬಳಕೆಯ ವಿರುದ್ಧದ ಮೊದಲ ಗೆಲುವು’ ಎಂದು ವಾಟ್ಸಾಪ್ ಮಾತೃಸಂಸ್ಥೆ ಮೆಟಾ ಹೇಳಿದೆ.

ತೀರ್ಪಿನ ವಿವರಗಳನ್ನು ಪರಿಶೀಲಿಸಿ, ಮೇಲ್ಮನವಿ ಸೇರಿದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎನ್‌ಎಸ್‌ಒ ಗ್ರೂಪ್‌ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಎನ್‌ಎಸ್‌ಒ ಗ್ರೂಪ್‌ ವಿರುದ್ದ ವಾಟ್ಸಾಪ್‌ ರೀತಿಯ ಸ್ಮಾರ್ಟ್‌ ಫೋನ್‌ ಆಪ್ಲಿಕೇಶನ್‌ಗಳ ಮೂಲಕ ಜನರ ಮೇಲೆ ಕಣ್ಗಾವಲು ಇಡಲು ಸ್ಪೈವೇರ್ ದುರ್ಬಳಕೆ ಆರೋಪ ಮಾಡಿಕೊಂಡ ಭಾರತ ಸೇರಿದಂತೆ ಹಲವೆಡೆ ಕೇಳಿ ಬಂದಿದೆ. ಆದರೆ, ಮೊದಲ ಬಾರಿಗೆ ಎನ್‌ಎಸ್‌ಒ ಗ್ರೂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ.

ಗಂಭೀರ ಅಪರಾಧಿಗಳು ಮತ್ತು ಭಯೋತ್ಪಾದಕರ ವಿರುದ್ಧ ಮಾತ್ರ ಸ್ಪೈವೇರ್ ಬಳಸಲು ಉದ್ದೇಶಿಸಲಾಗಿದೆ ಎಂದು ಎನ್‌ಎಸ್‌ಒ ಗ್ರೂಪ್ ಹೇಳುತ್ತದೆ. ಆದರೆ, ಕೆಲವು ದೇಶಗಳು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಪರಿಗಣಿಸುವ ಯಾರನ್ನಾದರೂ ಗುರಿಯಾಗಿಸಲು ಈ ತಂತ್ರಜ್ಞಾನವನ್ನು ಬಳಸುತ್ತಿವೆ ಎಂಬ ಆರೋಪಗಳಿವೆ.

2021ರಲ್ಲಿ ಹ್ಯಾಕಿಂಗ್‌ಗೆ ಬಲಿಯಾದ ಶಂಕಿತರ 50,000 ಫೋನ್ ನಂಬರ್‌ಗಳ ಪಟ್ಟಿ ಪ್ರಮುಖ ಮಾಧ್ಯಮಗಳಿಗೆ ಸೋರಿಕೆಯಾದಾಗ ಪೆಗಾಸಸ್ ಹಗರಣ ಬಯಲಿಗೆ ಬಂತು.

ಹ್ಯಾಂಕ್‌ಗೆ ಬಲಿಯಾದವರ ಪಟ್ಟಿಯಲ್ಲಿ ರಾಜಕಾರಣಿಗಳು, ರಾಷ್ಟ್ರಗಳ ಮುಖ್ಯಸ್ಥರು, ವ್ಯವಹಾರ ಕಾರ್ಯನಿರ್ವಾಹಕರು, ಹೋರಾಟಗಾರರು, ಹಲವಾರು ಅರಬ್ ರಾಜಮನೆತನದ ಸದಸ್ಯರು ಹಾಗೂ 180ಕ್ಕೂ ಹೆಚ್ಚು ಪತ್ರಕರ್ತರ ಫೋನ್ ಸಂಖ್ಯೆಗಳು ಇರುವುದನ್ನು ಜಾಗತಿಕ ಮಾಧ್ಯಮಗಳು ಗುರುತಿಸಿವೆ.

ಕೆನಡಾದ ಡೌನಿಂಗ್ ಸ್ಟ್ರೀಟ್ ಮತ್ತು ವಿದೇಶಾಂಗ ಕಚೇರಿ ಅಧಿಕಾರಿಗಳಿಗೆ ಸೇರಿದ ಸಾಧನಗಳಿಗೆ ಪೆಗಾಸಸ್ ಸ್ಪೈವೇರ್ ಸೋಂಕು ತಗುಲಿದೆ ಎಂದು ಕೆನಡಾದ ತನಿಖಾ ಗುಂಪು ದಿ ಸಿಟಿಜನ್ ಲ್ಯಾಬ್ ಶಂಕೆ ವ್ಯಕ್ತಪಡಿಸಿದೆ.

ಹ್ಯಾಕ್ ಮಾಡಲಾಗಿದೆ ಎಂದು ನಂಬಲಾದ ಇತರ ಪ್ರಮುಖ ವ್ಯಕ್ತಿಗಳಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು 2018 ರ ಅಕ್ಟೋಬರ್‌ನಲ್ಲಿ ಇಸ್ತಾಂಬುಲ್‌ನ ಸೌದಿ ಕಾನ್ಸುಲೇಟ್‌ನಲ್ಲಿ ಹತ್ಯೆಗೀಡಾದ ಸೌದಿ ಅರೇಬಿಯಾ ಸರ್ಕಾರದ ವಿಮರ್ಶಕ ಜಮಾಲ್ ಖಶೋಗ್ಗಿ ಮತ್ತು ಅವರ ಸಂಬಂಧಿಗಳು ಸೇರಿದ್ದಾರೆ.

ಎನ್‌ಎಸ್‌ಒ ಗ್ರೂಪ್ ಮೆಟಾಗೆ 444,000 ಡಾಲರ್ (37 ಲಕ್ಷ ರೂ) ದಂಡ ಪಾವತಿಸಲೂ ಆದೇಶಿಸಲಾಗಿದೆ. ಎನ್‌ಎಸ್‌ಒ ಗ್ರೂಪ್ ಮತ್ತು ಮೆಟಾ ನಡುವಿನ 6 ವರ್ಷಗಳ ಕಾನೂನು ಸಮರದ ಬಳಿಕ ಈ ದಂಡ ಪಾವತಿಸಲು ಸೂಚಿಸಲಾಗಿದೆ.

ಅಮೆರಿಕನ್ ಕಂಪನಿಗಳನ್ನು ಗುರಿಯಾಗಿಸಿಕೊಂಡು ಎನ್‌ಎಸ್‌ಒ ಗ್ರೂಪ್ ನಡೆಸುತ್ತಿರುವ ಕಾನೂನುಬಾಹಿರ ಕೃತ್ಯಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸಲು ಆದೇಶಿಸಿ ಜ್ಯೂರಿ ನಿರ್ಧಾರವು ಅತ್ಯಂತ ಮಹತ್ವದ್ದು ಎಂದು ಮೆಟಾ ಹೇಳಿಕೊಂಡಿದೆ.

“ಗಂಭೀರ ಅಪರಾಧ ಮತ್ತು ಭಯೋತ್ಪಾದನೆಯನ್ನು ತಡೆಗಟ್ಟುವಲ್ಲಿ ನಮ್ಮ ತಂತ್ರಜ್ಞಾನವು ನಿರ್ಣಾಯಕ ಪಾತ್ರ ವಹಿಸುತ್ತದೆ. ಅಧಿಕೃತ ಸರ್ಕಾರಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಮ್ಮ ತಂತ್ರಜ್ಞಾನವನ್ನು ಬಳಸುತ್ತಿವೆ ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಎನ್‌ಎಸ್‌ಒ ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ವಾಟ್ಸಾಪ್‌ಗೆ ಸಂಬಂಧಿಸಿದೆ ಎನ್‌ಎಸ್‌ಒ ವಿರುದ್ದ ಜ್ಯೂರಿ ನೀಡಿರುವ ತೀರ್ಪು ಪೆಗಾಸಸ್ ಸ್ಪೈವೇರ್‌ಗೆ ಗುರಿಯಾಗಿರುವ ಇತರರಿಗೆ ಕಾನೂನು ಸಮರ ನಡೆಸಲು ಬೆಂಬಲ ನೀಡುತ್ತದೆ ಎಂದು ವರದಿಗಳು ಅಭಿಪ್ರಾಯಪಟ್ಟಿವೆ.

ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ತಪ್ಪೇನು? ಸುಪ್ರೀಂ ಕೋರ್ಟ್‌

“ದೇಶವು ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ತಪ್ಪೇನು? ಸ್ಪೈವೇರ್ ಹೊಂದಿರುವುದು ತಪ್ಪಲ್ಲ, ಅದನ್ನು ಯಾರ ವಿರುದ್ಧ ಬಳಸಾಗುತ್ತಿದೆ ಎಂಬುದು ಪ್ರಶ್ನೆ. ರಾಷ್ಟ್ರದ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾಗರಿಕರ ಗೌಪ್ಯತೆಯ ಹಕ್ಕನ್ನುಸಂವಿಧಾನದ ಅಡಿಯಲ್ಲಿ ರಕ್ಷಿಸಲಾಗುತ್ತದೆ” ಎಂದು ಭಾರತದ ಸುಪ್ರೀಂ ಕೋರ್ಟ್ ಏಪ್ರಿಲ್ 29ರಂದು ಹೇಳಿತ್ತು.

ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ ಎಂದಿದ್ದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಅವರ ಪೀಠ, “ಗೌಪ್ಯತೆ ಉಲ್ಲಂಘನೆಯ ವೈಯಕ್ತಿಕ ಆತಂಕಗಳನ್ನು ಪರಿಹರಿಸಬಹುದು. ಆದರೆ,ತಾಂತ್ರಿಕ ಸಮಿತಿಯ ವರದಿಯ ಕುರಿತು ಬೀದಿಯಲ್ಲಿ ಚರ್ಚಿಸಲು ಅದು ಯಾವುದೇ ದಾಖಲೆಯಲ್ಲ” ಎಂದಿತ್ತು.

“ವ್ಯಕ್ತಿಗಳಿಗೆ ಸಂಬಂಧಿಸಿದ ಮಾಹಿತಿ ಬೇಕಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ. ಇತ್ತೀಚಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಸನ್ನಿವೇಶದಲ್ಲಿ, ನಾವು ಸ್ವಲ್ಪ ಜವಾಬ್ದಾರಿಯುತವಾಗಿರೋಣ… ವರದಿಯನ್ನು ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ನಾವು ನೋಡುತ್ತೇವೆ” ಎಂದು ಪೀಠ ಹೇಳಿತ್ತು.

ಭಾರತದ ಕ್ಷಿಪಣಿ ದಾಳಿಗೆ ಇಲ್ಲಿಯವರೆಗೆ ಪಾಕ್ ನ 31 ಮಂದಿ ಸಾವು: ಪಾಕ್ ಸಶಸ್ತ್ರ ಪಡೆಗಳ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...