Homeಅಂತರಾಷ್ಟ್ರೀಯಹ್ಯಾಕಿಂಗ್ ಪ್ರಕರಣ: ವಾಟ್ಸಾಪ್‌ಗೆ 167 ಮಿಲಿಯನ್ ಡಾಲರ್ ಪಾವತಿಸಲು ಪೆಗಾಸಸ್ ಸ್ಪೈವೇರ್ ತಯಾರಕರಿಗೆ ಕೋರ್ಟ್ ಆದೇಶ

ಹ್ಯಾಕಿಂಗ್ ಪ್ರಕರಣ: ವಾಟ್ಸಾಪ್‌ಗೆ 167 ಮಿಲಿಯನ್ ಡಾಲರ್ ಪಾವತಿಸಲು ಪೆಗಾಸಸ್ ಸ್ಪೈವೇರ್ ತಯಾರಕರಿಗೆ ಕೋರ್ಟ್ ಆದೇಶ

- Advertisement -
- Advertisement -

ಸುಮಾರು 1,400 ಬಳಕೆದಾರರ ವಾಟ್ಸಾಪ್ ಹ್ಯಾಕ್ ಮಾಡಿದಕ್ಕಾಗಿ ವಾಟ್ಸಾಪ್‌ ಸಂಸ್ಥೆಗೆ 167 ಮಿಲಿಯನ್ ಡಾಲರ್ ಪಾವತಿಸುವಂತೆ ಇಸ್ರೇಲ್‌ನ ಪೆಗಾಸಸ್ ಸ್ಪೈವೇರ್‌ ತಯಾರಿಕ ಸಂಸ್ಥೆ ಎನ್‌ಎಸ್‌ಒ ಗ್ರೂಪ್‌ಗೆ ಅಮೆರಿಕದ ಜ್ಯೂರಿ ಗ್ರೂಪ್ (ಕೋರ್ಟ್) ಆದೇಶಿಸಿದೆ ಎಂದು ವರದಿಯಾಗಿದೆ.

ಕಾನೂನು ಪ್ರಕರಣವೊಂದರಲ್ಲಿ ಸಾಕ್ಷ್ಯಗಳನ್ನು ಆಲಿಸಲು ಮತ್ತು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಲಾದ ಸಂಗತಿಗಳ ಆಧಾರದ ಮೇಲೆ ತೀರ್ಪು ನೀಡಲು ಆಯ್ಕೆಯಾದ ನಾಗರಿಕರ ಗುಂಪನ್ನು ಅಮೆರಿಕದ ಜ್ಯೂರಿ ಅಥವಾ ತೀರ್ಪುಗಾರರು ಎನ್ನಲಾಗುತ್ತದೆ.

ಡಿಸೆಂಬರ್ 2024 ರಲ್ಲಿ, ಅಮೆರಿಕದ ಕ್ಯಾಲಿಫೋರ್ನಿಯಾ ಜಿಲ್ಲಾ ನ್ಯಾಯಾಲಯವು, ಎನ್‌ಎಸ್‌ಒ ಗ್ರೂಪ್ ತನ್ನ ಜನಪ್ರಿಯ ಪೆಗಾಸಸ್ ಸ್ಪೈವೇರ್ ಅನ್ನು ಕ್ಲೈಂಟ್‌ಗಳಿಗೆ ಮಾರಾಟ ಮಾಡುವ ಮೂಲಕ ಯುಎಸ್‌ ಸೈಬರ್ ಭದ್ರತಾ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೋಷಿ ತೀರ್ಪು ನೀಡಿತ್ತು.

ತೀರ್ಪಿನ ನಂತರ, ಮಾರ್ಚ್ 2025ರಲ್ಲಿ ಎನ್‌ಎಸ್‌ ಗ್ರೂಪ್‌ನಿಂದ ಪರಿಹಾರ ಕೋರಿ ಮೆಟಾ ಅರ್ಜಿ ಸಲ್ಲಿಸಿತ್ತು. ಆ ಪರಿಹಾರದ ಅಥವಾ ದಂಡದ ಮೊತ್ತವನ್ನು ಮಂಗಳವಾರ (ಮೇ.6) ನಿರ್ಧರಿಸಲಾಗಿದೆ.

ಎನ್‌ಎಸ್‌ಒ ಗ್ರೂಪ್ ವಿರುದ್ಧ ಮೆಟಾ ನಡೆಸಿದ ಕಾನೂನು ಹೋರಾಟದ ಫಲಿತಾಂಶವು ಭಾರತಕ್ಕೆ ಸಂಭಾವ್ಯ ಪರಿಣಾಮಗಳನ್ನು ಬೀರಬಹುದು. ಏಕೆಂದರೆ 2019ರಲ್ಲಿ ಪೆಗಾಸಸ್ ಸ್ಪೈವೇರ್ ಬಳಸಿ ವಾಟ್ಸಾಪ್ ಹ್ಯಾಕಿಂಗ್‌ಗೆ ಅತಿ ಹೆಚ್ಚು ಗುರಿಯಾದ ಎರಡನೇ ದೇಶ ಭಾರತ, ಮೊದಲ ಸ್ಥಾನದಲ್ಲಿ ಮೆಕ್ಸಿಕೋ ಇತ್ತು.

2019ರಲ್ಲಿ 51 ದೇಶಗಳ ಒಟ್ಟು 1,223 ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಪೆಗಾಸಸ್ ಸ್ಪೈವೇರ್ ದಾಳಿ ನಡೆಸಲಾಗಿದೆ. ಈ ಪೈಕಿ 100ಕ್ಕೂ ಹೆಚ್ಚು ಭಾರತೀಯರು ಇದ್ದಾರೆ ಎಂದು ನ್ಯಾಯಾಲಯದ ದಾಖಲೆಗಳು ಬಹಿರಂಗಪಡಿಸಿವೆ. ಭಾರತದಲ್ಲಿ ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವರನ್ನು ಗುರಿಯಾಗಿಸಿಕೊಂಡು ಪೆಗಾಸಸ್ ದಾಳಿ ಮಾಡಲಾಗಿದೆ ಎಂಬ ಆರೋಪದವಿದೆ. ಈ ಸಂಬಂಧ 2021ರಲ್ಲಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ.

ಪೆಗಾಸಸ್ ಸ್ಪೈವೇರ್ ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್ ತಯಾರಿಸಿದ ಒಂದು ಕಣ್ಗಾವಲು ಸಾಫ್ಟ್‌ವೇರ್ ಆಗಿದೆ. ಇದನ್ನು ಮೊಬೈಲ್ ಫೋನ್‌ಗಳಲ್ಲಿ ದೂರದಿಂದಲೇ ಸ್ಥಾಪಿಸಬಹುದು. ಇತರ ವಿಷಯಗಳ ಜೊತೆಗೆ ಜನರ ಮೈಕ್ರೊಫೋನ್‌ಗಳು ಮತ್ತು ಕ್ಯಾಮರಾಗಳಿಗೆ ಇದರ ಮೂಲಕ ಪ್ರವೇಶಿಸಬಹುದು.

ಪೆಗಾಸಸ್ ಸ್ಪೈವೇರ್ ಮೂಲಕ ಪತ್ರಕರ್ತರು, ಹೋರಾಟಗಾರರು ಮತ್ತು ರಾಜಕೀಯ ವಿರೋಧಿಗಳ ಮೇಲೆ ಕಣ್ಗಾವಲು ಇಡಲು ಸರ್ವಾಧಿಕಾರಿ ಆಡಳಿತಗಳು ಸೇರಿದಂತೆ ಸರ್ಕಾರಗಳಿಗೆ ಎನ್‌ಎಸ್‌ಒ ಗ್ರೂಪ್ ಸಹಾಯ ಮಾಡಿದ ಆರೋಪವಿದೆ.

ವಾಟ್ಸಾಪ್‌ಗೆ ದಂಡ ಪಾವತಿಸುವಂತೆ ಎನ್‌ಎಸ್‌ಒಗೆ ಆದೇಶಿಸಿರುವುದು ‘ಅಕ್ರಮ ಸ್ಪೈವೇರ್ ಅಭಿವೃದ್ಧಿ ಮತ್ತು ಬಳಕೆಯ ವಿರುದ್ಧದ ಮೊದಲ ಗೆಲುವು’ ಎಂದು ವಾಟ್ಸಾಪ್ ಮಾತೃಸಂಸ್ಥೆ ಮೆಟಾ ಹೇಳಿದೆ.

ತೀರ್ಪಿನ ವಿವರಗಳನ್ನು ಪರಿಶೀಲಿಸಿ, ಮೇಲ್ಮನವಿ ಸೇರಿದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎನ್‌ಎಸ್‌ಒ ಗ್ರೂಪ್‌ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಎನ್‌ಎಸ್‌ಒ ಗ್ರೂಪ್‌ ವಿರುದ್ದ ವಾಟ್ಸಾಪ್‌ ರೀತಿಯ ಸ್ಮಾರ್ಟ್‌ ಫೋನ್‌ ಆಪ್ಲಿಕೇಶನ್‌ಗಳ ಮೂಲಕ ಜನರ ಮೇಲೆ ಕಣ್ಗಾವಲು ಇಡಲು ಸ್ಪೈವೇರ್ ದುರ್ಬಳಕೆ ಆರೋಪ ಮಾಡಿಕೊಂಡ ಭಾರತ ಸೇರಿದಂತೆ ಹಲವೆಡೆ ಕೇಳಿ ಬಂದಿದೆ. ಆದರೆ, ಮೊದಲ ಬಾರಿಗೆ ಎನ್‌ಎಸ್‌ಒ ಗ್ರೂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ.

ಗಂಭೀರ ಅಪರಾಧಿಗಳು ಮತ್ತು ಭಯೋತ್ಪಾದಕರ ವಿರುದ್ಧ ಮಾತ್ರ ಸ್ಪೈವೇರ್ ಬಳಸಲು ಉದ್ದೇಶಿಸಲಾಗಿದೆ ಎಂದು ಎನ್‌ಎಸ್‌ಒ ಗ್ರೂಪ್ ಹೇಳುತ್ತದೆ. ಆದರೆ, ಕೆಲವು ದೇಶಗಳು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಪರಿಗಣಿಸುವ ಯಾರನ್ನಾದರೂ ಗುರಿಯಾಗಿಸಲು ಈ ತಂತ್ರಜ್ಞಾನವನ್ನು ಬಳಸುತ್ತಿವೆ ಎಂಬ ಆರೋಪಗಳಿವೆ.

2021ರಲ್ಲಿ ಹ್ಯಾಕಿಂಗ್‌ಗೆ ಬಲಿಯಾದ ಶಂಕಿತರ 50,000 ಫೋನ್ ನಂಬರ್‌ಗಳ ಪಟ್ಟಿ ಪ್ರಮುಖ ಮಾಧ್ಯಮಗಳಿಗೆ ಸೋರಿಕೆಯಾದಾಗ ಪೆಗಾಸಸ್ ಹಗರಣ ಬಯಲಿಗೆ ಬಂತು.

ಹ್ಯಾಂಕ್‌ಗೆ ಬಲಿಯಾದವರ ಪಟ್ಟಿಯಲ್ಲಿ ರಾಜಕಾರಣಿಗಳು, ರಾಷ್ಟ್ರಗಳ ಮುಖ್ಯಸ್ಥರು, ವ್ಯವಹಾರ ಕಾರ್ಯನಿರ್ವಾಹಕರು, ಹೋರಾಟಗಾರರು, ಹಲವಾರು ಅರಬ್ ರಾಜಮನೆತನದ ಸದಸ್ಯರು ಹಾಗೂ 180ಕ್ಕೂ ಹೆಚ್ಚು ಪತ್ರಕರ್ತರ ಫೋನ್ ಸಂಖ್ಯೆಗಳು ಇರುವುದನ್ನು ಜಾಗತಿಕ ಮಾಧ್ಯಮಗಳು ಗುರುತಿಸಿವೆ.

ಕೆನಡಾದ ಡೌನಿಂಗ್ ಸ್ಟ್ರೀಟ್ ಮತ್ತು ವಿದೇಶಾಂಗ ಕಚೇರಿ ಅಧಿಕಾರಿಗಳಿಗೆ ಸೇರಿದ ಸಾಧನಗಳಿಗೆ ಪೆಗಾಸಸ್ ಸ್ಪೈವೇರ್ ಸೋಂಕು ತಗುಲಿದೆ ಎಂದು ಕೆನಡಾದ ತನಿಖಾ ಗುಂಪು ದಿ ಸಿಟಿಜನ್ ಲ್ಯಾಬ್ ಶಂಕೆ ವ್ಯಕ್ತಪಡಿಸಿದೆ.

ಹ್ಯಾಕ್ ಮಾಡಲಾಗಿದೆ ಎಂದು ನಂಬಲಾದ ಇತರ ಪ್ರಮುಖ ವ್ಯಕ್ತಿಗಳಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು 2018 ರ ಅಕ್ಟೋಬರ್‌ನಲ್ಲಿ ಇಸ್ತಾಂಬುಲ್‌ನ ಸೌದಿ ಕಾನ್ಸುಲೇಟ್‌ನಲ್ಲಿ ಹತ್ಯೆಗೀಡಾದ ಸೌದಿ ಅರೇಬಿಯಾ ಸರ್ಕಾರದ ವಿಮರ್ಶಕ ಜಮಾಲ್ ಖಶೋಗ್ಗಿ ಮತ್ತು ಅವರ ಸಂಬಂಧಿಗಳು ಸೇರಿದ್ದಾರೆ.

ಎನ್‌ಎಸ್‌ಒ ಗ್ರೂಪ್ ಮೆಟಾಗೆ 444,000 ಡಾಲರ್ (37 ಲಕ್ಷ ರೂ) ದಂಡ ಪಾವತಿಸಲೂ ಆದೇಶಿಸಲಾಗಿದೆ. ಎನ್‌ಎಸ್‌ಒ ಗ್ರೂಪ್ ಮತ್ತು ಮೆಟಾ ನಡುವಿನ 6 ವರ್ಷಗಳ ಕಾನೂನು ಸಮರದ ಬಳಿಕ ಈ ದಂಡ ಪಾವತಿಸಲು ಸೂಚಿಸಲಾಗಿದೆ.

ಅಮೆರಿಕನ್ ಕಂಪನಿಗಳನ್ನು ಗುರಿಯಾಗಿಸಿಕೊಂಡು ಎನ್‌ಎಸ್‌ಒ ಗ್ರೂಪ್ ನಡೆಸುತ್ತಿರುವ ಕಾನೂನುಬಾಹಿರ ಕೃತ್ಯಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸಲು ಆದೇಶಿಸಿ ಜ್ಯೂರಿ ನಿರ್ಧಾರವು ಅತ್ಯಂತ ಮಹತ್ವದ್ದು ಎಂದು ಮೆಟಾ ಹೇಳಿಕೊಂಡಿದೆ.

“ಗಂಭೀರ ಅಪರಾಧ ಮತ್ತು ಭಯೋತ್ಪಾದನೆಯನ್ನು ತಡೆಗಟ್ಟುವಲ್ಲಿ ನಮ್ಮ ತಂತ್ರಜ್ಞಾನವು ನಿರ್ಣಾಯಕ ಪಾತ್ರ ವಹಿಸುತ್ತದೆ. ಅಧಿಕೃತ ಸರ್ಕಾರಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಮ್ಮ ತಂತ್ರಜ್ಞಾನವನ್ನು ಬಳಸುತ್ತಿವೆ ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಎನ್‌ಎಸ್‌ಒ ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ವಾಟ್ಸಾಪ್‌ಗೆ ಸಂಬಂಧಿಸಿದೆ ಎನ್‌ಎಸ್‌ಒ ವಿರುದ್ದ ಜ್ಯೂರಿ ನೀಡಿರುವ ತೀರ್ಪು ಪೆಗಾಸಸ್ ಸ್ಪೈವೇರ್‌ಗೆ ಗುರಿಯಾಗಿರುವ ಇತರರಿಗೆ ಕಾನೂನು ಸಮರ ನಡೆಸಲು ಬೆಂಬಲ ನೀಡುತ್ತದೆ ಎಂದು ವರದಿಗಳು ಅಭಿಪ್ರಾಯಪಟ್ಟಿವೆ.

ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ತಪ್ಪೇನು? ಸುಪ್ರೀಂ ಕೋರ್ಟ್‌

“ದೇಶವು ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ತಪ್ಪೇನು? ಸ್ಪೈವೇರ್ ಹೊಂದಿರುವುದು ತಪ್ಪಲ್ಲ, ಅದನ್ನು ಯಾರ ವಿರುದ್ಧ ಬಳಸಾಗುತ್ತಿದೆ ಎಂಬುದು ಪ್ರಶ್ನೆ. ರಾಷ್ಟ್ರದ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾಗರಿಕರ ಗೌಪ್ಯತೆಯ ಹಕ್ಕನ್ನುಸಂವಿಧಾನದ ಅಡಿಯಲ್ಲಿ ರಕ್ಷಿಸಲಾಗುತ್ತದೆ” ಎಂದು ಭಾರತದ ಸುಪ್ರೀಂ ಕೋರ್ಟ್ ಏಪ್ರಿಲ್ 29ರಂದು ಹೇಳಿತ್ತು.

ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ ಎಂದಿದ್ದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಅವರ ಪೀಠ, “ಗೌಪ್ಯತೆ ಉಲ್ಲಂಘನೆಯ ವೈಯಕ್ತಿಕ ಆತಂಕಗಳನ್ನು ಪರಿಹರಿಸಬಹುದು. ಆದರೆ,ತಾಂತ್ರಿಕ ಸಮಿತಿಯ ವರದಿಯ ಕುರಿತು ಬೀದಿಯಲ್ಲಿ ಚರ್ಚಿಸಲು ಅದು ಯಾವುದೇ ದಾಖಲೆಯಲ್ಲ” ಎಂದಿತ್ತು.

“ವ್ಯಕ್ತಿಗಳಿಗೆ ಸಂಬಂಧಿಸಿದ ಮಾಹಿತಿ ಬೇಕಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ. ಇತ್ತೀಚಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಸನ್ನಿವೇಶದಲ್ಲಿ, ನಾವು ಸ್ವಲ್ಪ ಜವಾಬ್ದಾರಿಯುತವಾಗಿರೋಣ… ವರದಿಯನ್ನು ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ನಾವು ನೋಡುತ್ತೇವೆ” ಎಂದು ಪೀಠ ಹೇಳಿತ್ತು.

ಭಾರತದ ಕ್ಷಿಪಣಿ ದಾಳಿಗೆ ಇಲ್ಲಿಯವರೆಗೆ ಪಾಕ್ ನ 31 ಮಂದಿ ಸಾವು: ಪಾಕ್ ಸಶಸ್ತ್ರ ಪಡೆಗಳ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...