Homeಅಂತರಾಷ್ಟ್ರೀಯಹ್ಯಾಕಿಂಗ್ ಪ್ರಕರಣ: ವಾಟ್ಸಾಪ್‌ಗೆ 167 ಮಿಲಿಯನ್ ಡಾಲರ್ ಪಾವತಿಸಲು ಪೆಗಾಸಸ್ ಸ್ಪೈವೇರ್ ತಯಾರಕರಿಗೆ ಕೋರ್ಟ್ ಆದೇಶ

ಹ್ಯಾಕಿಂಗ್ ಪ್ರಕರಣ: ವಾಟ್ಸಾಪ್‌ಗೆ 167 ಮಿಲಿಯನ್ ಡಾಲರ್ ಪಾವತಿಸಲು ಪೆಗಾಸಸ್ ಸ್ಪೈವೇರ್ ತಯಾರಕರಿಗೆ ಕೋರ್ಟ್ ಆದೇಶ

- Advertisement -
- Advertisement -

ಸುಮಾರು 1,400 ಬಳಕೆದಾರರ ವಾಟ್ಸಾಪ್ ಹ್ಯಾಕ್ ಮಾಡಿದಕ್ಕಾಗಿ ವಾಟ್ಸಾಪ್‌ ಸಂಸ್ಥೆಗೆ 167 ಮಿಲಿಯನ್ ಡಾಲರ್ ಪಾವತಿಸುವಂತೆ ಇಸ್ರೇಲ್‌ನ ಪೆಗಾಸಸ್ ಸ್ಪೈವೇರ್‌ ತಯಾರಿಕ ಸಂಸ್ಥೆ ಎನ್‌ಎಸ್‌ಒ ಗ್ರೂಪ್‌ಗೆ ಅಮೆರಿಕದ ಜ್ಯೂರಿ ಗ್ರೂಪ್ (ಕೋರ್ಟ್) ಆದೇಶಿಸಿದೆ ಎಂದು ವರದಿಯಾಗಿದೆ.

ಕಾನೂನು ಪ್ರಕರಣವೊಂದರಲ್ಲಿ ಸಾಕ್ಷ್ಯಗಳನ್ನು ಆಲಿಸಲು ಮತ್ತು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಲಾದ ಸಂಗತಿಗಳ ಆಧಾರದ ಮೇಲೆ ತೀರ್ಪು ನೀಡಲು ಆಯ್ಕೆಯಾದ ನಾಗರಿಕರ ಗುಂಪನ್ನು ಅಮೆರಿಕದ ಜ್ಯೂರಿ ಅಥವಾ ತೀರ್ಪುಗಾರರು ಎನ್ನಲಾಗುತ್ತದೆ.

ಡಿಸೆಂಬರ್ 2024 ರಲ್ಲಿ, ಅಮೆರಿಕದ ಕ್ಯಾಲಿಫೋರ್ನಿಯಾ ಜಿಲ್ಲಾ ನ್ಯಾಯಾಲಯವು, ಎನ್‌ಎಸ್‌ಒ ಗ್ರೂಪ್ ತನ್ನ ಜನಪ್ರಿಯ ಪೆಗಾಸಸ್ ಸ್ಪೈವೇರ್ ಅನ್ನು ಕ್ಲೈಂಟ್‌ಗಳಿಗೆ ಮಾರಾಟ ಮಾಡುವ ಮೂಲಕ ಯುಎಸ್‌ ಸೈಬರ್ ಭದ್ರತಾ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೋಷಿ ತೀರ್ಪು ನೀಡಿತ್ತು.

ತೀರ್ಪಿನ ನಂತರ, ಮಾರ್ಚ್ 2025ರಲ್ಲಿ ಎನ್‌ಎಸ್‌ ಗ್ರೂಪ್‌ನಿಂದ ಪರಿಹಾರ ಕೋರಿ ಮೆಟಾ ಅರ್ಜಿ ಸಲ್ಲಿಸಿತ್ತು. ಆ ಪರಿಹಾರದ ಅಥವಾ ದಂಡದ ಮೊತ್ತವನ್ನು ಮಂಗಳವಾರ (ಮೇ.6) ನಿರ್ಧರಿಸಲಾಗಿದೆ.

ಎನ್‌ಎಸ್‌ಒ ಗ್ರೂಪ್ ವಿರುದ್ಧ ಮೆಟಾ ನಡೆಸಿದ ಕಾನೂನು ಹೋರಾಟದ ಫಲಿತಾಂಶವು ಭಾರತಕ್ಕೆ ಸಂಭಾವ್ಯ ಪರಿಣಾಮಗಳನ್ನು ಬೀರಬಹುದು. ಏಕೆಂದರೆ 2019ರಲ್ಲಿ ಪೆಗಾಸಸ್ ಸ್ಪೈವೇರ್ ಬಳಸಿ ವಾಟ್ಸಾಪ್ ಹ್ಯಾಕಿಂಗ್‌ಗೆ ಅತಿ ಹೆಚ್ಚು ಗುರಿಯಾದ ಎರಡನೇ ದೇಶ ಭಾರತ, ಮೊದಲ ಸ್ಥಾನದಲ್ಲಿ ಮೆಕ್ಸಿಕೋ ಇತ್ತು.

2019ರಲ್ಲಿ 51 ದೇಶಗಳ ಒಟ್ಟು 1,223 ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಪೆಗಾಸಸ್ ಸ್ಪೈವೇರ್ ದಾಳಿ ನಡೆಸಲಾಗಿದೆ. ಈ ಪೈಕಿ 100ಕ್ಕೂ ಹೆಚ್ಚು ಭಾರತೀಯರು ಇದ್ದಾರೆ ಎಂದು ನ್ಯಾಯಾಲಯದ ದಾಖಲೆಗಳು ಬಹಿರಂಗಪಡಿಸಿವೆ. ಭಾರತದಲ್ಲಿ ಪತ್ರಕರ್ತರು, ವಕೀಲರು, ರಾಜಕಾರಣಿಗಳು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವರನ್ನು ಗುರಿಯಾಗಿಸಿಕೊಂಡು ಪೆಗಾಸಸ್ ದಾಳಿ ಮಾಡಲಾಗಿದೆ ಎಂಬ ಆರೋಪದವಿದೆ. ಈ ಸಂಬಂಧ 2021ರಲ್ಲಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ.

ಪೆಗಾಸಸ್ ಸ್ಪೈವೇರ್ ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್ ತಯಾರಿಸಿದ ಒಂದು ಕಣ್ಗಾವಲು ಸಾಫ್ಟ್‌ವೇರ್ ಆಗಿದೆ. ಇದನ್ನು ಮೊಬೈಲ್ ಫೋನ್‌ಗಳಲ್ಲಿ ದೂರದಿಂದಲೇ ಸ್ಥಾಪಿಸಬಹುದು. ಇತರ ವಿಷಯಗಳ ಜೊತೆಗೆ ಜನರ ಮೈಕ್ರೊಫೋನ್‌ಗಳು ಮತ್ತು ಕ್ಯಾಮರಾಗಳಿಗೆ ಇದರ ಮೂಲಕ ಪ್ರವೇಶಿಸಬಹುದು.

ಪೆಗಾಸಸ್ ಸ್ಪೈವೇರ್ ಮೂಲಕ ಪತ್ರಕರ್ತರು, ಹೋರಾಟಗಾರರು ಮತ್ತು ರಾಜಕೀಯ ವಿರೋಧಿಗಳ ಮೇಲೆ ಕಣ್ಗಾವಲು ಇಡಲು ಸರ್ವಾಧಿಕಾರಿ ಆಡಳಿತಗಳು ಸೇರಿದಂತೆ ಸರ್ಕಾರಗಳಿಗೆ ಎನ್‌ಎಸ್‌ಒ ಗ್ರೂಪ್ ಸಹಾಯ ಮಾಡಿದ ಆರೋಪವಿದೆ.

ವಾಟ್ಸಾಪ್‌ಗೆ ದಂಡ ಪಾವತಿಸುವಂತೆ ಎನ್‌ಎಸ್‌ಒಗೆ ಆದೇಶಿಸಿರುವುದು ‘ಅಕ್ರಮ ಸ್ಪೈವೇರ್ ಅಭಿವೃದ್ಧಿ ಮತ್ತು ಬಳಕೆಯ ವಿರುದ್ಧದ ಮೊದಲ ಗೆಲುವು’ ಎಂದು ವಾಟ್ಸಾಪ್ ಮಾತೃಸಂಸ್ಥೆ ಮೆಟಾ ಹೇಳಿದೆ.

ತೀರ್ಪಿನ ವಿವರಗಳನ್ನು ಪರಿಶೀಲಿಸಿ, ಮೇಲ್ಮನವಿ ಸೇರಿದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎನ್‌ಎಸ್‌ಒ ಗ್ರೂಪ್‌ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಎನ್‌ಎಸ್‌ಒ ಗ್ರೂಪ್‌ ವಿರುದ್ದ ವಾಟ್ಸಾಪ್‌ ರೀತಿಯ ಸ್ಮಾರ್ಟ್‌ ಫೋನ್‌ ಆಪ್ಲಿಕೇಶನ್‌ಗಳ ಮೂಲಕ ಜನರ ಮೇಲೆ ಕಣ್ಗಾವಲು ಇಡಲು ಸ್ಪೈವೇರ್ ದುರ್ಬಳಕೆ ಆರೋಪ ಮಾಡಿಕೊಂಡ ಭಾರತ ಸೇರಿದಂತೆ ಹಲವೆಡೆ ಕೇಳಿ ಬಂದಿದೆ. ಆದರೆ, ಮೊದಲ ಬಾರಿಗೆ ಎನ್‌ಎಸ್‌ಒ ಗ್ರೂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ.

ಗಂಭೀರ ಅಪರಾಧಿಗಳು ಮತ್ತು ಭಯೋತ್ಪಾದಕರ ವಿರುದ್ಧ ಮಾತ್ರ ಸ್ಪೈವೇರ್ ಬಳಸಲು ಉದ್ದೇಶಿಸಲಾಗಿದೆ ಎಂದು ಎನ್‌ಎಸ್‌ಒ ಗ್ರೂಪ್ ಹೇಳುತ್ತದೆ. ಆದರೆ, ಕೆಲವು ದೇಶಗಳು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಪರಿಗಣಿಸುವ ಯಾರನ್ನಾದರೂ ಗುರಿಯಾಗಿಸಲು ಈ ತಂತ್ರಜ್ಞಾನವನ್ನು ಬಳಸುತ್ತಿವೆ ಎಂಬ ಆರೋಪಗಳಿವೆ.

2021ರಲ್ಲಿ ಹ್ಯಾಕಿಂಗ್‌ಗೆ ಬಲಿಯಾದ ಶಂಕಿತರ 50,000 ಫೋನ್ ನಂಬರ್‌ಗಳ ಪಟ್ಟಿ ಪ್ರಮುಖ ಮಾಧ್ಯಮಗಳಿಗೆ ಸೋರಿಕೆಯಾದಾಗ ಪೆಗಾಸಸ್ ಹಗರಣ ಬಯಲಿಗೆ ಬಂತು.

ಹ್ಯಾಂಕ್‌ಗೆ ಬಲಿಯಾದವರ ಪಟ್ಟಿಯಲ್ಲಿ ರಾಜಕಾರಣಿಗಳು, ರಾಷ್ಟ್ರಗಳ ಮುಖ್ಯಸ್ಥರು, ವ್ಯವಹಾರ ಕಾರ್ಯನಿರ್ವಾಹಕರು, ಹೋರಾಟಗಾರರು, ಹಲವಾರು ಅರಬ್ ರಾಜಮನೆತನದ ಸದಸ್ಯರು ಹಾಗೂ 180ಕ್ಕೂ ಹೆಚ್ಚು ಪತ್ರಕರ್ತರ ಫೋನ್ ಸಂಖ್ಯೆಗಳು ಇರುವುದನ್ನು ಜಾಗತಿಕ ಮಾಧ್ಯಮಗಳು ಗುರುತಿಸಿವೆ.

ಕೆನಡಾದ ಡೌನಿಂಗ್ ಸ್ಟ್ರೀಟ್ ಮತ್ತು ವಿದೇಶಾಂಗ ಕಚೇರಿ ಅಧಿಕಾರಿಗಳಿಗೆ ಸೇರಿದ ಸಾಧನಗಳಿಗೆ ಪೆಗಾಸಸ್ ಸ್ಪೈವೇರ್ ಸೋಂಕು ತಗುಲಿದೆ ಎಂದು ಕೆನಡಾದ ತನಿಖಾ ಗುಂಪು ದಿ ಸಿಟಿಜನ್ ಲ್ಯಾಬ್ ಶಂಕೆ ವ್ಯಕ್ತಪಡಿಸಿದೆ.

ಹ್ಯಾಕ್ ಮಾಡಲಾಗಿದೆ ಎಂದು ನಂಬಲಾದ ಇತರ ಪ್ರಮುಖ ವ್ಯಕ್ತಿಗಳಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು 2018 ರ ಅಕ್ಟೋಬರ್‌ನಲ್ಲಿ ಇಸ್ತಾಂಬುಲ್‌ನ ಸೌದಿ ಕಾನ್ಸುಲೇಟ್‌ನಲ್ಲಿ ಹತ್ಯೆಗೀಡಾದ ಸೌದಿ ಅರೇಬಿಯಾ ಸರ್ಕಾರದ ವಿಮರ್ಶಕ ಜಮಾಲ್ ಖಶೋಗ್ಗಿ ಮತ್ತು ಅವರ ಸಂಬಂಧಿಗಳು ಸೇರಿದ್ದಾರೆ.

ಎನ್‌ಎಸ್‌ಒ ಗ್ರೂಪ್ ಮೆಟಾಗೆ 444,000 ಡಾಲರ್ (37 ಲಕ್ಷ ರೂ) ದಂಡ ಪಾವತಿಸಲೂ ಆದೇಶಿಸಲಾಗಿದೆ. ಎನ್‌ಎಸ್‌ಒ ಗ್ರೂಪ್ ಮತ್ತು ಮೆಟಾ ನಡುವಿನ 6 ವರ್ಷಗಳ ಕಾನೂನು ಸಮರದ ಬಳಿಕ ಈ ದಂಡ ಪಾವತಿಸಲು ಸೂಚಿಸಲಾಗಿದೆ.

ಅಮೆರಿಕನ್ ಕಂಪನಿಗಳನ್ನು ಗುರಿಯಾಗಿಸಿಕೊಂಡು ಎನ್‌ಎಸ್‌ಒ ಗ್ರೂಪ್ ನಡೆಸುತ್ತಿರುವ ಕಾನೂನುಬಾಹಿರ ಕೃತ್ಯಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸಲು ಆದೇಶಿಸಿ ಜ್ಯೂರಿ ನಿರ್ಧಾರವು ಅತ್ಯಂತ ಮಹತ್ವದ್ದು ಎಂದು ಮೆಟಾ ಹೇಳಿಕೊಂಡಿದೆ.

“ಗಂಭೀರ ಅಪರಾಧ ಮತ್ತು ಭಯೋತ್ಪಾದನೆಯನ್ನು ತಡೆಗಟ್ಟುವಲ್ಲಿ ನಮ್ಮ ತಂತ್ರಜ್ಞಾನವು ನಿರ್ಣಾಯಕ ಪಾತ್ರ ವಹಿಸುತ್ತದೆ. ಅಧಿಕೃತ ಸರ್ಕಾರಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಮ್ಮ ತಂತ್ರಜ್ಞಾನವನ್ನು ಬಳಸುತ್ತಿವೆ ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಎನ್‌ಎಸ್‌ಒ ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ವಾಟ್ಸಾಪ್‌ಗೆ ಸಂಬಂಧಿಸಿದೆ ಎನ್‌ಎಸ್‌ಒ ವಿರುದ್ದ ಜ್ಯೂರಿ ನೀಡಿರುವ ತೀರ್ಪು ಪೆಗಾಸಸ್ ಸ್ಪೈವೇರ್‌ಗೆ ಗುರಿಯಾಗಿರುವ ಇತರರಿಗೆ ಕಾನೂನು ಸಮರ ನಡೆಸಲು ಬೆಂಬಲ ನೀಡುತ್ತದೆ ಎಂದು ವರದಿಗಳು ಅಭಿಪ್ರಾಯಪಟ್ಟಿವೆ.

ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ತಪ್ಪೇನು? ಸುಪ್ರೀಂ ಕೋರ್ಟ್‌

“ದೇಶವು ಭಯೋತ್ಪಾದಕರ ವಿರುದ್ಧ ಸ್ಪೈವೇರ್ ಬಳಸುತ್ತಿದ್ದರೆ ತಪ್ಪೇನು? ಸ್ಪೈವೇರ್ ಹೊಂದಿರುವುದು ತಪ್ಪಲ್ಲ, ಅದನ್ನು ಯಾರ ವಿರುದ್ಧ ಬಳಸಾಗುತ್ತಿದೆ ಎಂಬುದು ಪ್ರಶ್ನೆ. ರಾಷ್ಟ್ರದ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ನಾಗರಿಕರ ಗೌಪ್ಯತೆಯ ಹಕ್ಕನ್ನುಸಂವಿಧಾನದ ಅಡಿಯಲ್ಲಿ ರಕ್ಷಿಸಲಾಗುತ್ತದೆ” ಎಂದು ಭಾರತದ ಸುಪ್ರೀಂ ಕೋರ್ಟ್ ಏಪ್ರಿಲ್ 29ರಂದು ಹೇಳಿತ್ತು.

ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಸಂಬಂಧಿಸಿದ ಯಾವುದೇ ವರದಿಯನ್ನು ಸಾರ್ವಜನಿಕಗೊಳಿಸುವುದಿಲ್ಲ ಎಂದಿದ್ದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟಿಶ್ವರ್ ಸಿಂಗ್ ಅವರ ಪೀಠ, “ಗೌಪ್ಯತೆ ಉಲ್ಲಂಘನೆಯ ವೈಯಕ್ತಿಕ ಆತಂಕಗಳನ್ನು ಪರಿಹರಿಸಬಹುದು. ಆದರೆ,ತಾಂತ್ರಿಕ ಸಮಿತಿಯ ವರದಿಯ ಕುರಿತು ಬೀದಿಯಲ್ಲಿ ಚರ್ಚಿಸಲು ಅದು ಯಾವುದೇ ದಾಖಲೆಯಲ್ಲ” ಎಂದಿತ್ತು.

“ವ್ಯಕ್ತಿಗಳಿಗೆ ಸಂಬಂಧಿಸಿದ ಮಾಹಿತಿ ಬೇಕಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿ. ಇತ್ತೀಚಿನ ದಿನಗಳಲ್ಲಿ ನಾವು ಎದುರಿಸುತ್ತಿರುವ ಸನ್ನಿವೇಶದಲ್ಲಿ, ನಾವು ಸ್ವಲ್ಪ ಜವಾಬ್ದಾರಿಯುತವಾಗಿರೋಣ… ವರದಿಯನ್ನು ಎಷ್ಟರ ಮಟ್ಟಿಗೆ ಹಂಚಿಕೊಳ್ಳಬಹುದು ಎಂಬುದನ್ನು ನಾವು ನೋಡುತ್ತೇವೆ” ಎಂದು ಪೀಠ ಹೇಳಿತ್ತು.

ಭಾರತದ ಕ್ಷಿಪಣಿ ದಾಳಿಗೆ ಇಲ್ಲಿಯವರೆಗೆ ಪಾಕ್ ನ 31 ಮಂದಿ ಸಾವು: ಪಾಕ್ ಸಶಸ್ತ್ರ ಪಡೆಗಳ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...